ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ U-14 ಕ್ರಿಕೆಟ್‌ ತಂಡಕ್ಕೆ ರಾಹುಲ್‌ ದ್ರಾವಿಡ್‌ ಮಗ ಅನ್ವಯ್‌ ನಾಯಕ

Last Updated 19 ಜನವರಿ 2023, 15:09 IST
ಅಕ್ಷರ ಗಾತ್ರ

ಬೆಂಗಳೂರು: ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಕಿರಿಯ ಮಗ ಅನ್ವಯ್ ದ್ರಾವಿಡ್ ಅವರು 14 ವರ್ಷದೊಳಗಿನವರ (U-14) ಕರ್ನಾಟಕ ಕ್ರಿಕೆಟ್ ತಂಡದ ನಾಯಕರಾಗಿ ನೇಮಕವಾಗಿದ್ದಾರೆ.

ಕೇರಳದಲ್ಲಿ ಇದೇ 23 ಮತ್ತು ಫೆ.11ರಂದು ನಡೆಯಲಿರುವ ‘ಪಿ ಕೃಷ್ಣ ಮೂರ್ತಿ ಟ್ರೋಫಿ’ ಅಂತರ ವಲಯ ಟೂರ್ನಿಯಲ್ಲಿ ಕರ್ನಾಟಕದ ಕಿರಿಯರ ತಂಡವನ್ನು ಮುನ್ನಡೆಸಲಿದ್ದಾರೆ.

ಅನ್ವಯ್‌ ಅವರ ಅಣ್ಣ, ಸಮಿತ್ ಕೂಡ ಅಂಡರ್-14 ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು.

ರಾಹುಲ್‌ ದ್ರಾವಿಡ್‌ ಅವರ ಮಗ ಕಿರಿಯರ ತಂಡಕ್ಕೆ ನಾಯಕನಾಗಿ ನೇಮಕವಾಗಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಅನ್ವಯ್‌ಗೆ ಶುಭ ಹಾರೈಸಿದ್ದರೆ, ಕೆಲವರು ಇದು ಸ್ವಜನಪಕ್ಷಪಾತವೆಂದು ಆಕ್ಷೇಪಿಸಿದ್ದಾರೆ.

ಆಕ್ಷೇಪಗಳಿಗೆ ತಿರುಗೇಟು ನೀಡಿರುವ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್‌, ‘ರಾಹುಲ್ ಅವರ ಕಿರಿಯ ಮಗ ಅನ್ವಯ್ ದ್ರಾವಿಡ್ ಕರ್ನಾಟಕದಲ್ಲಿ ಜೂನಿಯರ್ ಹಂತಗಳ ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ಶ್ರೇಷ್ಠ ಕ್ರಿಕೆಟಿಗನ ಮಗ ಎಂಬ ಮಾತ್ರಕ್ಕೆ ಯಾರೂ ಕೂಡ ವೃತ್ತಿಪರ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದಿಲ್ಲ. ಸ್ವಜನಪಕ್ಷಪಾತವನ್ನು ಎಳೆದುತರುವ ಬದಲು ಆ ಮಗುವಿಗೆ ಶುಭ ಹಾರೈಸಿ’ ಎಂದು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT