<p><strong>ಮೆಲ್ಬರ್ನ್:</strong> ಮಳೆಯ ಕಾರಣ ಭಾರತ ಕ್ರಿಕೆಟ್ ತಂಡಕ್ಕೆ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ಅಭ್ಯಾಸ ನಡೆಸಲು ಸಾಧ್ಯವಾಗಲಿಲ್ಲ.</p>.<p>ಜನವರಿ 7ರಿಂದ ಸಿಡ್ನಿಯಲ್ಲಿ ಮೂರನೇ ಟೆಸ್ಟ್ ನಡೆಯಲಿದೆ. ಅದಕ್ಕೆ ಸಿದ್ಧತೆ ನಡೆಸುವ ಪ್ರವಾಸಿ ತಂಡದ ಯೋಚನೆಗೆ ಮಳೆ ಅಡ್ಡಿಮಾಡಿತು. ಹೀಗಾಗಿ ಆಟಗಾರರು ಜಿಮ್ನಲ್ಲಿ ದೈಹಿಕ ಕಸರತ್ತು ನಡೆಸುವುದಕ್ಕೆ ಸೀಮಿತಗೊಂಡರು.</p>.<p>‘ಮಳೆಯಿಂದಾಗಿ ಎಂಸಿಜಿಯಲ್ಲಿ ಭಾರತ ತಂಡ ಅಭ್ಯಾಸ ಅಧಿವೇಶವನ್ನು ರದ್ದುಗೊಳಿಸಲಾಯಿತು’ ಎಂದು ಬಿಸಿಸಿಐ ಹೇಳಿಕೆ ತಿಳಿಸಿದೆ.</p>.<p>ಭಾರತ ಮತ್ತು ಆತಿಥೇಯ ಆಸ್ಟ್ರೇಲಿಯಾ ತಂಡಗಳು ಸೋಮವಾರ ಸಿಡ್ನಿಗೆ ತೆರಳಲಿವೆ.</p>.<p>ಭಾರತ ತಂಡದ ಉಪನಾಯಕ ರೋಹಿತ್ ಶರ್ಮಾ ಸೇರಿದಂತೆ ಐವರು ಆಟಗಾರರು ಸದ್ಯ ಏಕಾಂತವಾಸದಲ್ಲಿದ್ದಾರೆ. ಜೈವಿಕ ಸುರಕ್ಷತಾ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆಯೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ.</p>.<p>ಶುಕ್ರವಾರ ಈ ಆಟಗಾರರು ರೆಸ್ಟೊರೆಂಟ್ ಒಂದರ ಒಳಾಂಗಣದಲ್ಲಿ ಕುಳಿತು ಉಣ್ಣುತ್ತಿದ್ದ ದೃಶ್ಯದ ವಿಡಿಯೊವೊಂದನ್ನು ಅಭಿಮಾನಿಯೊಬ್ಬರು ಟ್ವಿಟರ್ನಲ್ಲಿ ಹರಿಬಿಟ್ಟಿದ್ದರು. ಬಿಸಿಸಿಐ ಹಿರಿಯ ಅಧಿಕಾರಿಗಳು ತನಿಖೆ ನಡೆಸುವ ಅಗತ್ಯವನ್ನು ಆರಂಭದಲ್ಲಿ ತಳ್ಳಿಹಾಕಿದ್ದರು. ಆದರೆ ಜಂಟಿಯಾಗಿ ತನಿಖೆ ನಡೆಸಲಾಗುವುದು ಎಂದು ಕ್ರಿಕೆಟ್ ಆಸ್ಟ್ರೇಲಿಯಾ ನಂತರ ತಿಳಿಸಿತ್ತು.</p>.<p>ನಾಲ್ಕು ಟೆಸ್ಟ್ಗಳ ಸರಣಿ ಸದ್ಯ 1–1ರಲ್ಲಿ ಸಮನಾಗಿದೆ. ಪಿಂಕ್ ಬಾಲ್ ಟೆಸ್ಟ್ನಲ್ಲಿ ಹೀನಾಯವಾಗಿ ಸೋತಿದ್ದ ಭಾರತ, ಎರಡನೇ ಪಂದ್ಯದಲ್ಲಿ ತಿರುಗೇಟು ನೀಡಿ ಎಂಟು ವಿಕೆಟ್ಗಳ ಜಯಪಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೆಲ್ಬರ್ನ್:</strong> ಮಳೆಯ ಕಾರಣ ಭಾರತ ಕ್ರಿಕೆಟ್ ತಂಡಕ್ಕೆ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ಅಭ್ಯಾಸ ನಡೆಸಲು ಸಾಧ್ಯವಾಗಲಿಲ್ಲ.</p>.<p>ಜನವರಿ 7ರಿಂದ ಸಿಡ್ನಿಯಲ್ಲಿ ಮೂರನೇ ಟೆಸ್ಟ್ ನಡೆಯಲಿದೆ. ಅದಕ್ಕೆ ಸಿದ್ಧತೆ ನಡೆಸುವ ಪ್ರವಾಸಿ ತಂಡದ ಯೋಚನೆಗೆ ಮಳೆ ಅಡ್ಡಿಮಾಡಿತು. ಹೀಗಾಗಿ ಆಟಗಾರರು ಜಿಮ್ನಲ್ಲಿ ದೈಹಿಕ ಕಸರತ್ತು ನಡೆಸುವುದಕ್ಕೆ ಸೀಮಿತಗೊಂಡರು.</p>.<p>‘ಮಳೆಯಿಂದಾಗಿ ಎಂಸಿಜಿಯಲ್ಲಿ ಭಾರತ ತಂಡ ಅಭ್ಯಾಸ ಅಧಿವೇಶವನ್ನು ರದ್ದುಗೊಳಿಸಲಾಯಿತು’ ಎಂದು ಬಿಸಿಸಿಐ ಹೇಳಿಕೆ ತಿಳಿಸಿದೆ.</p>.<p>ಭಾರತ ಮತ್ತು ಆತಿಥೇಯ ಆಸ್ಟ್ರೇಲಿಯಾ ತಂಡಗಳು ಸೋಮವಾರ ಸಿಡ್ನಿಗೆ ತೆರಳಲಿವೆ.</p>.<p>ಭಾರತ ತಂಡದ ಉಪನಾಯಕ ರೋಹಿತ್ ಶರ್ಮಾ ಸೇರಿದಂತೆ ಐವರು ಆಟಗಾರರು ಸದ್ಯ ಏಕಾಂತವಾಸದಲ್ಲಿದ್ದಾರೆ. ಜೈವಿಕ ಸುರಕ್ಷತಾ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆಯೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ.</p>.<p>ಶುಕ್ರವಾರ ಈ ಆಟಗಾರರು ರೆಸ್ಟೊರೆಂಟ್ ಒಂದರ ಒಳಾಂಗಣದಲ್ಲಿ ಕುಳಿತು ಉಣ್ಣುತ್ತಿದ್ದ ದೃಶ್ಯದ ವಿಡಿಯೊವೊಂದನ್ನು ಅಭಿಮಾನಿಯೊಬ್ಬರು ಟ್ವಿಟರ್ನಲ್ಲಿ ಹರಿಬಿಟ್ಟಿದ್ದರು. ಬಿಸಿಸಿಐ ಹಿರಿಯ ಅಧಿಕಾರಿಗಳು ತನಿಖೆ ನಡೆಸುವ ಅಗತ್ಯವನ್ನು ಆರಂಭದಲ್ಲಿ ತಳ್ಳಿಹಾಕಿದ್ದರು. ಆದರೆ ಜಂಟಿಯಾಗಿ ತನಿಖೆ ನಡೆಸಲಾಗುವುದು ಎಂದು ಕ್ರಿಕೆಟ್ ಆಸ್ಟ್ರೇಲಿಯಾ ನಂತರ ತಿಳಿಸಿತ್ತು.</p>.<p>ನಾಲ್ಕು ಟೆಸ್ಟ್ಗಳ ಸರಣಿ ಸದ್ಯ 1–1ರಲ್ಲಿ ಸಮನಾಗಿದೆ. ಪಿಂಕ್ ಬಾಲ್ ಟೆಸ್ಟ್ನಲ್ಲಿ ಹೀನಾಯವಾಗಿ ಸೋತಿದ್ದ ಭಾರತ, ಎರಡನೇ ಪಂದ್ಯದಲ್ಲಿ ತಿರುಗೇಟು ನೀಡಿ ಎಂಟು ವಿಕೆಟ್ಗಳ ಜಯಪಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>