<p><strong>ಜೈಪುರ:</strong> ಟಿ–20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆದ್ದದ್ದನ್ನು ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಸಂಭ್ರಮಿಸಿದ್ದ ರಾಜಸ್ಥಾನದ ಉದಯಪುರದ ಖಾಸಗಿ ಶಾಲೆಯ ಶಿಕ್ಷಕಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ.</p>.<p>ಉದಯಪುರದ ನೀರಜಾ ಮೋದಿ ಶಾಲೆಯ ಶಿಕ್ಷಕಿ ನಫೀಸಾ ಅಟ್ಟಾರಿ ಅವರು ಪಾಕಿಸ್ತಾನಿ ಆಟಗಾರರ ಚಿತ್ರವನ್ನು ಸ್ಟೇಟಸ್ನಲ್ಲಿ ಹಾಕಿಕೊಂಡು ‘ಜೀತ್ ಗಯೀ... ನಾವು ಗೆದ್ದಿದ್ದೇವೆ’ಎಂದು ಶೀರ್ಷಿಕೆ ಹಾಕಿದ್ದರು.</p>.<p>ಆಕೆಯ ವಾಟ್ಆ್ಯಪ್ಪ್ ಸ್ಟೇಟಸ್ನ ಸ್ಕ್ರೀನ್ಶಾಟ್ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಶಾಲೆಯ ಆಡಳಿತ ಮಂಡಳಿಯು ಅವರನ್ನು ಕೆಲಸದಿಂದ ವಜಾಗೊಳಿಸಿದೆ.</p>.<p>‘ಹೌದು, ನಾವು ಆ ಶಿಕ್ಷಕಿಯನ್ನು ಕೆಲಸದಿಂದ ವಜಾಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ’ಎಂದು ಶಾಲೆಯನ್ನು ನಡೆಸುತ್ತಿರುವ ಸೋಜಾಟಿಯಾ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಮಹೇಂದ್ರ ಸೋಜಾಟಿಯಾ ಹೇಳಿದ್ದಾರೆ.</p>.<p>ಭಾರತೀಯ ದಂಡ ಸಂಹಿತೆ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ) ಅಡಿಯಲ್ಲಿ ಶಿಕ್ಷಕಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಂಬಾ ಮಾತಾ ಪೊಲೀಸ್ ಠಾಣೆ ಠಾಣಾಧಿಕಾರಿ ನರ್ಪತ್ ಸಿಂಗ್ ಹೇಳಿದ್ದಾರೆ.</p>.<p>‘ನನ್ನ ತಪ್ಪಿನ ಅರಿವಾಗುತ್ತಿದ್ದಂತೆ ಸ್ಟೇಟಸ್ ಅನ್ನು ಅಳಿಸಿದೆ, ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ’ಎಂದು ಶಿಕ್ಷಕಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಟಿ–20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆದ್ದದ್ದನ್ನು ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಸಂಭ್ರಮಿಸಿದ್ದ ರಾಜಸ್ಥಾನದ ಉದಯಪುರದ ಖಾಸಗಿ ಶಾಲೆಯ ಶಿಕ್ಷಕಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ.</p>.<p>ಉದಯಪುರದ ನೀರಜಾ ಮೋದಿ ಶಾಲೆಯ ಶಿಕ್ಷಕಿ ನಫೀಸಾ ಅಟ್ಟಾರಿ ಅವರು ಪಾಕಿಸ್ತಾನಿ ಆಟಗಾರರ ಚಿತ್ರವನ್ನು ಸ್ಟೇಟಸ್ನಲ್ಲಿ ಹಾಕಿಕೊಂಡು ‘ಜೀತ್ ಗಯೀ... ನಾವು ಗೆದ್ದಿದ್ದೇವೆ’ಎಂದು ಶೀರ್ಷಿಕೆ ಹಾಕಿದ್ದರು.</p>.<p>ಆಕೆಯ ವಾಟ್ಆ್ಯಪ್ಪ್ ಸ್ಟೇಟಸ್ನ ಸ್ಕ್ರೀನ್ಶಾಟ್ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಶಾಲೆಯ ಆಡಳಿತ ಮಂಡಳಿಯು ಅವರನ್ನು ಕೆಲಸದಿಂದ ವಜಾಗೊಳಿಸಿದೆ.</p>.<p>‘ಹೌದು, ನಾವು ಆ ಶಿಕ್ಷಕಿಯನ್ನು ಕೆಲಸದಿಂದ ವಜಾಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ’ಎಂದು ಶಾಲೆಯನ್ನು ನಡೆಸುತ್ತಿರುವ ಸೋಜಾಟಿಯಾ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಮಹೇಂದ್ರ ಸೋಜಾಟಿಯಾ ಹೇಳಿದ್ದಾರೆ.</p>.<p>ಭಾರತೀಯ ದಂಡ ಸಂಹಿತೆ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ) ಅಡಿಯಲ್ಲಿ ಶಿಕ್ಷಕಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಂಬಾ ಮಾತಾ ಪೊಲೀಸ್ ಠಾಣೆ ಠಾಣಾಧಿಕಾರಿ ನರ್ಪತ್ ಸಿಂಗ್ ಹೇಳಿದ್ದಾರೆ.</p>.<p>‘ನನ್ನ ತಪ್ಪಿನ ಅರಿವಾಗುತ್ತಿದ್ದಂತೆ ಸ್ಟೇಟಸ್ ಅನ್ನು ಅಳಿಸಿದೆ, ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ’ಎಂದು ಶಿಕ್ಷಕಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>