ರಾಜಸ್ಥಾನ ತಂಡದ ತನ್ವೀರ್ ಉಲ್ ಹಕ್ ಎರಡು ವಿಕೆಟ್ ಗಳಿಸಿದರು. ದೀಪಕ್ ಚಾಹರ್ ಮತ್ತು ರಾಹುಲ್ ಚಾಹರ್ ತಲಾ ಒಂದು ವಿಕೆಟ್ ಗಳಿಸಿದರು. ಅನುಭವಿ ಬ್ಯಾಟ್ಸ್ಮನ್ಗಳಾದ ಆರ್. ಸಮರ್ಥ್ (32 ರನ್), ಕರುಣ್ ನಾಯರ್ (4 ರನ್) ಮತ್ತು ನಾಯಕ ಮನೀಷ್ ಪಾಂಡೆ (7 ರನ್) ಬೇಗನೆ ಔಟಾದರು. ಇದರಿಂದಾಗಿ ತಂಡದ ರನ್ ಗಳಿಕೆ ಕುಂಠಿತವಾಯಿತು. ಉತ್ತಮ ಬೌಲಿಂಗ್ ಮಾಡುತ್ತಿರುವ ರಾಜಸ್ಥಾನ ಬೌಲರ್ಗಳ ಮುಂದೆ ಕರ್ನಾಟಕದ ಬ್ಯಾಟ್ಸ್ಮನ್ಗಳು ಪರದಾಡುತ್ತಿದ್ದಾರೆ.