ಆದರೆ, ರನ್ ಯಂತ್ರ ಮಯಂಕ್ ಅಗರವಾಲ್ ಅವರು ರಣಜಿ ಟೂರ್ನಿಯಲ್ಲಿ ಆಡುವುದು ಬಹುತೇಕ ಖಚಿತವಾಗಿದೆ. ಅವರೊಂದಿಗೆ ಎಡಗೈ ಬ್ಯಾಟ್ಸ್ಮನ್ ದೇವದತ್ತ ಪಡಿಕ್ಕಲ್ ಕೂಡ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ವಿಜಯ್ ಹಜಾರೆ ಮತ್ತು ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ ಅವರಾಗಿದ್ದಾರೆ. ಕರುಣ್ ನಾಯರ್ ಅವರಿಗೆ ನಾಯಕತ್ವದ ಹೊಣೆ ಲಭಿಸಬಹುದು. ಕೆಲವು ಯುವ ಆಟಗಾರರೂ ಅಂತಿಮ 16ರ ತಂಡದಲ್ಲಿ ಸ್ಥಾನ ಪಡೆಯಬಹುದು.