ವಿಶೇಷವೆಂದರೆ; ಬಿಸಿಸಿಐ ಆಯ್ಕೆ ಸಮಿತಿ ಸದಸ್ಯರಾಗಿರುವ ಸುನೀಲ್ ಜೋಶಿ ಈ ಪಂದ್ಯ ವೀಕ್ಷಿಸಿದರು. ಪಂದ್ಯದ ನಂತರ ಪಂಡಿತ್ ಅವರನ್ನು ತಬ್ಬಿಕೊಂಡು ಅಭಿನಂದಿಸಿದರು. ಭಾರತ ತಂಡದ ಮಾಜಿ ವಿಕೆಟ್ಕೀಪರ್ ಬ್ಯಾಟರ್ ಪಂಡಿತ್, ಮುಂಬೈ ಮತ್ತು ಮಧ್ಯಪ್ರದೇಶ ತಂಡಗಳನ್ನು ದೇಶಿ ಕ್ರಿಕೆಟ್ನಲ್ಲಿ ಪ್ರತಿನಿಧಿಸಿದ್ದಾರೆ. ಕೋಚ್ ಆಗಿಯೇ ಅವರು ಹೆಚ್ಚು ಯಶಸ್ವಿಯಾಗಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮುಂಬೈ ಮೂರು ಸಲ, ವಿದರ್ಭ ಎರಡು ಬಾರಿ ಮತ್ತು ಈಗ ಮಧ್ಯಪ್ರದೇಶ ಮೊದಲ ಬಾರಿ ಚಾಂಪಿಯನ್ ಆಗಿದೆ.