ಈ ಪಂದ್ಯದೊಂದಿಗೆ ತಂಡಕ್ಕೆ ಮರುಪ್ರವೇಶ ಮಾಡಿದ ಕರುಣ್ ನಾಯರ್ 12 ಎಸೆತಗಳಲ್ಲಿ 12 ರನ್ ಗಳಿಸಿದರು. ಎರಡು ಬೌಂಡರಿ ಹೊಡೆದ ಅವರು ಭರವಸೆ ಮೂಡಿಸಿದ್ದರು. ಆದರೆ, ಮೆರಿವಾಲಾ ಎಸೆತದಲ್ಲಿ ಎಲ್ಬಿಡಬ್ಲ್ಯು ಬಲೆಗೆ ಬಿದ್ದರು. ನಾಯಕ ಮನೀಷ್ ಪಾಂಡೆ (43; 70ಎಸೆತ, 5ಬೌಂಡರಿ, 1ಸಿಕ್ಸರ್) ಬೌಲರ್ಗಳನ್ನು ದಿಟ್ಟತನದಿಂದ ಎದುರಿಸಿದರು. ಆದರೆ ಶ್ರೇಯಸ್ ಗೋಪಾಲ್ ಸೊನ್ನೆ ಸುತ್ತಿದರು. ಈ ಪಂದ್ಯದಲ್ಲಿ ಸ್ಥಾನ ಪಡೆದಿರುವ ಬಿ.ಆರ್. ಶರತ್ (30; 34ಎಸೆತ, 5ಬೌಂಡರಿ) ತುಸು ಹೋರಾಟ ಮಾಡಿದರು. ಇದರಿಂದಾಗಿ ತಂಡದ ಮೊತ್ತವು ನೂರರ ಗಡಿ ದಾಟಿತು. ಪದಾರ್ಪಣೆ ಪಂದ್ಯ ಆಡುತ್ತಿರುವ ಶುಭಾಂಗ್ ಹೆಗ್ಡೆ 11 ರನ್ ಗಳಿಸಿದರು. ನಂತರ ಬೌಲಿಂಗ್ನಲ್ಲಿಯೂ ಮಿಂಚಿದ ಅವರು ನಾಲ್ಕು ವಿಕೆಟ್ ಕಬಳಿಸಿದರು.