ಒಂದು ಹಂತದಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 163 ರನ್ ಗಳಿಸಿ ಸುಸ್ಥಿತಿಯಲ್ಲಿದ್ದ ಸೌರಾಷ್ಟ್ರ, ನಂತರ 45 ರನ್ ಗಳಿಸುವಷ್ಟರಲ್ಲಿ ಪ್ರಮುಖ ಮೂವರನ್ನು ಕಳೆದುಕೊಂಡಿತ್ತು.ಮೊದಲ ದಿನದಾಟದ ಕೊನೆಯ ಅವಧಿಯಲ್ಲಿ ಬಂಗಾಳ ಬೌಲರ್ಗಳು ಮಿಂಚು ಹರಿಸಿದ್ದರು. ಇದರಿಂದಾಗಿ ಸಾಧಾರಣ ಮೊತ್ತಕ್ಕೆ ಕುಸಿಯುವ ಆತಂಕದಲ್ಲಿತ್ತು. ಆದರೆ, ಅದಕ್ಕೆ ಅನುಭವಿ ಚೇತೇಶ್ವರ ಪೂಜಾರ ಮತ್ತು ಅರ್ಪಿತ್ ವಾಸ್ವಡ ಅವಕಾಶ ನೀಡಲಿಲ್ಲ.