<p><strong>ಬೆಂಗಳೂರು:</strong> ಕರ್ನಾಟಕ ಕ್ರಿಕೆಟ್ ತಂಡವು ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಕ್ವಾರ್ಟರ್ಫೈನಲ್ ಪಂದ್ಯವನ್ನು ಜಮ್ಮುವಿನಲ್ಲಿ ಆಡಲಿದೆ.</p>.<p>ಫೆಬ್ರುವರಿ 20ರಿಂದ 24ರವರೆಗೆ ನಡೆಯಲಿರುವ ಪಂದ್ಯದಲ್ಲಿ ಕರ್ನಾಟಕ ತಂಡವು ಸಿ ಗುಂಪಿನಿಂದ ಅರ್ಹತೆ ಪಡೆದಿರುವ ಜಮ್ಮು–ಕಾಶ್ಮೀರ ತಂಡವನ್ನು ಎದುರಿಸಲಿದೆ. ಗಾಂಧಿ ಸ್ಮಾರಕ ವಿಜ್ಞಾನ ಕಾಲೇಜು ಕ್ರೀಡಾಂಗಣದಲ್ಲಿ ಪಂದ್ಯವು ನಡೆಯಲಿದೆ. ಲೀಗ್ ಹಂತದಲ್ಲಿ ಈ ಕ್ರೀಡಾಂಗಣದಲ್ಲಿ ಮೂರು ಪಂದ್ಯಗಳು ನಡೆದಿವೆ.</p>.<p>ಕರ್ನಾಟಕ ತಂಡವು ಎ–ಬಿ ಜಂಟಿ ಗುಂಪಿನಲ್ಲಿ ಮೂರನೇ ಸ್ಥಾನ ಪಡೆದು ಎಂಟರ ಘಟ್ಟಕ್ಕೆ ಅರ್ಹತೆ ಪಡೆದಿದೆ ತಂಡವು ಮಂಗಳವಾರ ಬೆಂಗಳೂರಿನಿಂದ ಜಮ್ಮುವಿಗೆ ಪ್ರಯಾಣ ಮಾಡಲಿದೆ.</p>.<p>ಜಮ್ಮು–ಕಾಶ್ಮೀರದಲ್ಲಿ ಸದ್ಯ ಕಾನೂನು–ಸುವ್ಯವಸ್ಥೆ ಪರಿಸ್ಥಿತಿಯು ಚೆನ್ನಾಗಿರದ ಕಾರಣ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸ್ಥಳಾಂತರಿಸುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಶನಿವಾರ ಮನವಿ ಮಾಡಿತ್ತು. ಆದರೆ, ಬಿಸಿಸಿಐ ಇದಕ್ಕೆ ಸಮ್ಮತಿಸಿಲ್ಲ.</p>.<p>‘ನಮ್ಮ ತಂಡವು ಜಮ್ಮುವಿನಲ್ಲಿಆಡಲಿದೆ. ಇದೇ 18ರಂದು ಜಮ್ಮುವಿಗೆ ತೆರಳುವುದು’ ಎಂದು ಕೆಎಸ್ಸಿಎ ವಕ್ತಾರ ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಕ್ರಿಕೆಟ್ ತಂಡವು ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಕ್ವಾರ್ಟರ್ಫೈನಲ್ ಪಂದ್ಯವನ್ನು ಜಮ್ಮುವಿನಲ್ಲಿ ಆಡಲಿದೆ.</p>.<p>ಫೆಬ್ರುವರಿ 20ರಿಂದ 24ರವರೆಗೆ ನಡೆಯಲಿರುವ ಪಂದ್ಯದಲ್ಲಿ ಕರ್ನಾಟಕ ತಂಡವು ಸಿ ಗುಂಪಿನಿಂದ ಅರ್ಹತೆ ಪಡೆದಿರುವ ಜಮ್ಮು–ಕಾಶ್ಮೀರ ತಂಡವನ್ನು ಎದುರಿಸಲಿದೆ. ಗಾಂಧಿ ಸ್ಮಾರಕ ವಿಜ್ಞಾನ ಕಾಲೇಜು ಕ್ರೀಡಾಂಗಣದಲ್ಲಿ ಪಂದ್ಯವು ನಡೆಯಲಿದೆ. ಲೀಗ್ ಹಂತದಲ್ಲಿ ಈ ಕ್ರೀಡಾಂಗಣದಲ್ಲಿ ಮೂರು ಪಂದ್ಯಗಳು ನಡೆದಿವೆ.</p>.<p>ಕರ್ನಾಟಕ ತಂಡವು ಎ–ಬಿ ಜಂಟಿ ಗುಂಪಿನಲ್ಲಿ ಮೂರನೇ ಸ್ಥಾನ ಪಡೆದು ಎಂಟರ ಘಟ್ಟಕ್ಕೆ ಅರ್ಹತೆ ಪಡೆದಿದೆ ತಂಡವು ಮಂಗಳವಾರ ಬೆಂಗಳೂರಿನಿಂದ ಜಮ್ಮುವಿಗೆ ಪ್ರಯಾಣ ಮಾಡಲಿದೆ.</p>.<p>ಜಮ್ಮು–ಕಾಶ್ಮೀರದಲ್ಲಿ ಸದ್ಯ ಕಾನೂನು–ಸುವ್ಯವಸ್ಥೆ ಪರಿಸ್ಥಿತಿಯು ಚೆನ್ನಾಗಿರದ ಕಾರಣ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸ್ಥಳಾಂತರಿಸುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಶನಿವಾರ ಮನವಿ ಮಾಡಿತ್ತು. ಆದರೆ, ಬಿಸಿಸಿಐ ಇದಕ್ಕೆ ಸಮ್ಮತಿಸಿಲ್ಲ.</p>.<p>‘ನಮ್ಮ ತಂಡವು ಜಮ್ಮುವಿನಲ್ಲಿಆಡಲಿದೆ. ಇದೇ 18ರಂದು ಜಮ್ಮುವಿಗೆ ತೆರಳುವುದು’ ಎಂದು ಕೆಎಸ್ಸಿಎ ವಕ್ತಾರ ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>