<p><strong>ಕೋಲ್ಕತ್ತ: </strong>ಹಿನ್ನಡೆಯೊಂದಿಗೆ ನಾಲ್ಕನೇ ದಿನದಾಟ ಆರಂಭಿಸಿದ ಕರ್ನಾಟಕ ತಂಡ ಪ್ರಮುಖ ಆಟಗಾರರ ಬ್ಯಾಟಿಂಗ್ ವೈಫಲ್ಯದಿಂದ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಬಂಗಾಳದ ವಿರುದ್ಧ ಸೋಲು ಅನುಭವಿಸಿತು.</p>.<p>ಈಡನ್ ಗಾರ್ಡನ್ನಲ್ಲಿ ನಡೆದ ಪಂದ್ಯದಲ್ಲಿ ಕರ್ನಾಟಕದ ವಿರುದ್ಧ ಬಂಗಾಳ 174 ರನ್ಗಳ ಬೃಹತ್ ಗೆಲುವು ಸಾಧಿಸಿತು. ಈ ಮೂಲಕ 13 ವರ್ಷಗಳ ಬಳಿಕ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದೆ.</p>.<p>254 ರನ್ ಗುರಿಯೊಂದಿಗೆ ನಾಲ್ಕನೇ ದಿನದಾಟ ಆರಂಭಿಸಿದ ಕರ್ನಾಟಕಕ್ಕೆ ದೇವದತ್ತ ಪಡಿಕ್ಕಲ್ 62 ರನ್ ಗಳಿಸಿ ಆಸರೆಯಾದರು. ಉಳಿದಂತೆ ಕೆ.ಎಲ್.ರಾಹುಲ್, ಮನೀಷ್ ಪಾಂಡೆ, ಕರುಣ್ ನಾಯರ್ ಸೇರಿದಂತೆ ಪ್ರಮುಖ ಆಟಗಾರರು ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.</p>.<p>ಬಂಗಾಳ ಪರ ಮುಖೇಶ್ ಕುಮಾರ್ 6, ಇಶಾನ್ ಪೊರೆಲ್ 2, ಆಕಾಶದೀಪ್ 2 ವಿಕೆಟ್ ಪಡೆದು ಮಿಂಚಿದರು.</p>.<p>ಕರ್ನಾಟಕದ ಎದುರು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದಬಂಗಾಳ ಮೊದಲ ಇನಿಂಗ್ಸ್ನಲ್ಲಿ ಅನುಸ್ಟುಪ್ ಮಜುಂದಾರ್ (149*) ಶತಕದ ಬಲದಿಂದ92 ಓವರ್ಗಳಲ್ಲಿ 312 ರನ್ ಗಳಿಸಿತ್ತು. ಈ ಬೃಹತ್ ಗುರಿ ಬೆನ್ನತ್ತಿದ ಕರ್ನಾಟಕ 36.2 ಓವರ್ಗಳಲ್ಲಿ 122 ರನ್ ಗಳಿಸಿ ಆಲೌಟ್ ಆಯಿತು.</p>.<p>190 ರನ್ಗಳ ಮುನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಬಂಗಾಳ ಪಡೆ 54.4 ಓವರ್ಗಳಲ್ಲಿ 161 ರನ್ ಗಳಿಸಿ ಆಲೌಟ್ ಆಗಿತ್ತು.351 ರನ್ಗಳ ಬೃಹತ್ ಗುರಿಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಕರುಣ್ ಪಡೆ 55.3 ಓವರ್ಗಳಲ್ಲಿ 177 ರನ್ ಗಳಿಸಿ ಆಲೌಟ್ ಆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ: </strong>ಹಿನ್ನಡೆಯೊಂದಿಗೆ ನಾಲ್ಕನೇ ದಿನದಾಟ ಆರಂಭಿಸಿದ ಕರ್ನಾಟಕ ತಂಡ ಪ್ರಮುಖ ಆಟಗಾರರ ಬ್ಯಾಟಿಂಗ್ ವೈಫಲ್ಯದಿಂದ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಬಂಗಾಳದ ವಿರುದ್ಧ ಸೋಲು ಅನುಭವಿಸಿತು.</p>.<p>ಈಡನ್ ಗಾರ್ಡನ್ನಲ್ಲಿ ನಡೆದ ಪಂದ್ಯದಲ್ಲಿ ಕರ್ನಾಟಕದ ವಿರುದ್ಧ ಬಂಗಾಳ 174 ರನ್ಗಳ ಬೃಹತ್ ಗೆಲುವು ಸಾಧಿಸಿತು. ಈ ಮೂಲಕ 13 ವರ್ಷಗಳ ಬಳಿಕ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದೆ.</p>.<p>254 ರನ್ ಗುರಿಯೊಂದಿಗೆ ನಾಲ್ಕನೇ ದಿನದಾಟ ಆರಂಭಿಸಿದ ಕರ್ನಾಟಕಕ್ಕೆ ದೇವದತ್ತ ಪಡಿಕ್ಕಲ್ 62 ರನ್ ಗಳಿಸಿ ಆಸರೆಯಾದರು. ಉಳಿದಂತೆ ಕೆ.ಎಲ್.ರಾಹುಲ್, ಮನೀಷ್ ಪಾಂಡೆ, ಕರುಣ್ ನಾಯರ್ ಸೇರಿದಂತೆ ಪ್ರಮುಖ ಆಟಗಾರರು ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.</p>.<p>ಬಂಗಾಳ ಪರ ಮುಖೇಶ್ ಕುಮಾರ್ 6, ಇಶಾನ್ ಪೊರೆಲ್ 2, ಆಕಾಶದೀಪ್ 2 ವಿಕೆಟ್ ಪಡೆದು ಮಿಂಚಿದರು.</p>.<p>ಕರ್ನಾಟಕದ ಎದುರು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದಬಂಗಾಳ ಮೊದಲ ಇನಿಂಗ್ಸ್ನಲ್ಲಿ ಅನುಸ್ಟುಪ್ ಮಜುಂದಾರ್ (149*) ಶತಕದ ಬಲದಿಂದ92 ಓವರ್ಗಳಲ್ಲಿ 312 ರನ್ ಗಳಿಸಿತ್ತು. ಈ ಬೃಹತ್ ಗುರಿ ಬೆನ್ನತ್ತಿದ ಕರ್ನಾಟಕ 36.2 ಓವರ್ಗಳಲ್ಲಿ 122 ರನ್ ಗಳಿಸಿ ಆಲೌಟ್ ಆಯಿತು.</p>.<p>190 ರನ್ಗಳ ಮುನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಬಂಗಾಳ ಪಡೆ 54.4 ಓವರ್ಗಳಲ್ಲಿ 161 ರನ್ ಗಳಿಸಿ ಆಲೌಟ್ ಆಗಿತ್ತು.351 ರನ್ಗಳ ಬೃಹತ್ ಗುರಿಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಕರುಣ್ ಪಡೆ 55.3 ಓವರ್ಗಳಲ್ಲಿ 177 ರನ್ ಗಳಿಸಿ ಆಲೌಟ್ ಆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>