<p><strong>ಹುಬ್ಬಳ್ಳಿ:</strong> ರಣಜಿ ಟ್ರೋಫಿ ಫೈನಲ್ ಪಂದ್ಯದ ನಾಲ್ಕನೇ ದಿನವೂ ಜಮ್ಮು–ಕಾಶ್ಮೀರ ತಂಡವು ಉತ್ತಮ ಬ್ಯಾಟಿಂಗ್ ಮೂಲಕ ಮೇಲುಗೈ ಸಾಧಿಸಿದೆ. </p><p>ಮೊದಲ ಇನಿಂಗ್ಸ್ನಲ್ಲಿ ಜಮ್ಮು–ಕಾಶ್ಮೀರ ನೀಡಿದ್ದ 584 ರನ್ಗಳ ಬೃಹತ್ ಗುರಿ ಬೆನ್ನತ್ತಿದ ಕರ್ನಾಟಕ ತಂಡವು ಮೂರನೇ ದಿನದಾಟದ ಮುಕ್ತಾಯಕ್ಕೆ 69 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಿತ್ತು. </p><p>ನಾಲ್ಕನೇ ದಿನದಾಟದಲ್ಲಿ ಕರ್ನಾಟಕ ತಂಡವು ಇನ್ನೂ 73 ರನ್ ಗಳಿಸುವಷ್ಟರಲ್ಲಿ ತನೆಲ್ಲಾ ವಿಕೆಟ್ಗಳನ್ನು ಕಳೆದುಕೊಂಡಿತು. 93.3 ಓವರ್ಗಳಲ್ಲಿ 293 ರನ್ ಗಳಿಗೆ ಆಲೌಟ್ ಆಯಿತು. </p><p>ಎರಡನೇ ಇನಿಂಗ್ಸ್ ಆರಂಭಿಸಿದ ಜಮ್ಮು–ಕಾಶ್ಮೀರ ತಂಡವು ಆರಂಭಿಕ ಆಘಾತದ ನಡುವೆಯೂ 57 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿದ್ದು, 477 ರನ್ಗಳ ಬೃಹತ್ ಮುನ್ನಡೆಯನ್ನು ಕಾಯ್ದುಕೊಂಡಿದೆ. </p><p>ಆರಂಭಿಕ ಆಟಗಾರ ಖಮ್ರಾನ್ ಇಕ್ಬಾಲ್ ಅವರು ಅಜೇಯ 94 ರನ್ ಗಳಿಸಿದ್ದು, ಐದನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. </p><p>ಜಮ್ಮು–ಕಾಶ್ಮೀರ ತಂಡವು ಪ್ರಶಸ್ತಿಯ ಸನಿಹಕ್ಕೆ ಬಂದಿದ್ದು, ಕರ್ನಾಟಕ ತಂಡದ ರಣಜಿ ಪ್ರಶಸ್ತಿಯ ಕನಸು ನನಸಾಗಲು ಪವಾಡ ಜರುಗಬೇಕಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ರಣಜಿ ಟ್ರೋಫಿ ಫೈನಲ್ ಪಂದ್ಯದ ನಾಲ್ಕನೇ ದಿನವೂ ಜಮ್ಮು–ಕಾಶ್ಮೀರ ತಂಡವು ಉತ್ತಮ ಬ್ಯಾಟಿಂಗ್ ಮೂಲಕ ಮೇಲುಗೈ ಸಾಧಿಸಿದೆ. </p><p>ಮೊದಲ ಇನಿಂಗ್ಸ್ನಲ್ಲಿ ಜಮ್ಮು–ಕಾಶ್ಮೀರ ನೀಡಿದ್ದ 584 ರನ್ಗಳ ಬೃಹತ್ ಗುರಿ ಬೆನ್ನತ್ತಿದ ಕರ್ನಾಟಕ ತಂಡವು ಮೂರನೇ ದಿನದಾಟದ ಮುಕ್ತಾಯಕ್ಕೆ 69 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಿತ್ತು. </p><p>ನಾಲ್ಕನೇ ದಿನದಾಟದಲ್ಲಿ ಕರ್ನಾಟಕ ತಂಡವು ಇನ್ನೂ 73 ರನ್ ಗಳಿಸುವಷ್ಟರಲ್ಲಿ ತನೆಲ್ಲಾ ವಿಕೆಟ್ಗಳನ್ನು ಕಳೆದುಕೊಂಡಿತು. 93.3 ಓವರ್ಗಳಲ್ಲಿ 293 ರನ್ ಗಳಿಗೆ ಆಲೌಟ್ ಆಯಿತು. </p><p>ಎರಡನೇ ಇನಿಂಗ್ಸ್ ಆರಂಭಿಸಿದ ಜಮ್ಮು–ಕಾಶ್ಮೀರ ತಂಡವು ಆರಂಭಿಕ ಆಘಾತದ ನಡುವೆಯೂ 57 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿದ್ದು, 477 ರನ್ಗಳ ಬೃಹತ್ ಮುನ್ನಡೆಯನ್ನು ಕಾಯ್ದುಕೊಂಡಿದೆ. </p><p>ಆರಂಭಿಕ ಆಟಗಾರ ಖಮ್ರಾನ್ ಇಕ್ಬಾಲ್ ಅವರು ಅಜೇಯ 94 ರನ್ ಗಳಿಸಿದ್ದು, ಐದನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. </p><p>ಜಮ್ಮು–ಕಾಶ್ಮೀರ ತಂಡವು ಪ್ರಶಸ್ತಿಯ ಸನಿಹಕ್ಕೆ ಬಂದಿದ್ದು, ಕರ್ನಾಟಕ ತಂಡದ ರಣಜಿ ಪ್ರಶಸ್ತಿಯ ಕನಸು ನನಸಾಗಲು ಪವಾಡ ಜರುಗಬೇಕಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>