ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಣಜಿ ಕ್ರಿಕೆಟ್: ಕರ್ನಾಟಕಕ್ಕೆ ಜಯದ ಅವಕಾಶ

Last Updated 30 ನವೆಂಬರ್ 2018, 19:17 IST
ಅಕ್ಷರ ಗಾತ್ರ

ಮೈಸೂರು: ಈ ರಣಜಿ ಕ್ರಿಕೆಟ್‌ ಋತುವಿನ ಮೊದಲ ಗೆಲುವು ಸಾಧಿಸಲು ಕರ್ನಾಟಕಕ್ಕೆ ಈಗ ಬೇಕಿರುವುದು 130 ರನ್‌. ಕೈಯಲ್ಲಿ ಎಲ್ಲ 10 ವಿಕೆಟ್‌ಗಳು ಇವೆ. ಮೊದಲ ಎರಡೂ ಪಂದ್ಯಗಳನ್ನು ಡ್ರಾ ಮಾಡಿಕೊಂಡಿರುವ ತಂಡ ಈಗ ಜಯದ ಕನಸು ಕಾಣುತ್ತಿದೆ.

ಗಂಗೋತ್ರಿ ಗ್ಲೇಡ್ಸ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮಹಾರಾಷ್ಟ್ರ ತಂಡ ನೀಡಿರುವ 184 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿರುವ ಕರ್ನಾಟಕ, ಮೂರನೇ ದಿನ ಶುಕ್ರವಾರದ ಆಟದ ಅಂತ್ಯಕ್ಕೆ 20 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 54 ರನ್ ಗಳಿಸಿದೆ. ಪದಾರ್ಪಣೆ ಪಂದ್ಯ ಆಡುತ್ತಿರುವ ದೇವದತ್ತ ಪಡಿಕ್ಕಲ್‌ (33, 58 ಎಸೆತ) ಮತ್ತು ಡಿ.ನಿಶ್ಚಲ್ (21, 62 ಎಸೆತ) ಉತ್ತಮ ಆರಂಭ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT