ಗಂಗೋತ್ರಿ ಗ್ಲೇಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮಹಾರಾಷ್ಟ್ರ ತಂಡ ನೀಡಿರುವ 184 ರನ್ಗಳ ಗೆಲುವಿನ ಗುರಿ ಬೆನ್ನಟ್ಟಿರುವ ಕರ್ನಾಟಕ, ಮೂರನೇ ದಿನ ಶುಕ್ರವಾರದ ಆಟದ ಅಂತ್ಯಕ್ಕೆ 20 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 54 ರನ್ ಗಳಿಸಿದೆ. ಪದಾರ್ಪಣೆ ಪಂದ್ಯ ಆಡುತ್ತಿರುವ ದೇವದತ್ತ ಪಡಿಕ್ಕಲ್ (33, 58 ಎಸೆತ) ಮತ್ತು ಡಿ.ನಿಶ್ಚಲ್ (21, 62 ಎಸೆತ) ಉತ್ತಮ ಆರಂಭ ನೀಡಿದ್ದಾರೆ.