<p><strong>ಬೆಂಗಳೂರು:</strong> ಕರ್ನಾಟಕದ ವಾಸುಕಿ ಕೌಶಿಕ್ ಹಾಗೂ ಅಭಿಲಾಷ್ ಶೆಟ್ಟಿ ಮಾರಕ ದಾಳಿಗೆ ತತ್ತರಿಸಿರುವ ಪಂಜಾಬ್ ತಂಡವು ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಕೇವಲ 55 ರನ್ನಿಗೆ ಆಲೌಟ್ ಆಗಿದೆ.</p><p>ಎಲೈಟ್ 'ಸಿ' ಗುಂಪಿನ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕದ ನಾಯಕ ಮಯಂಕ್ ಅಗರವಾಲ್ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. </p><p>ಅಮೋಘ ದಾಳಿ ನಡೆಸಿದ ಕರ್ನಾಟಕದ ಬೌಲರ್ಗಳು ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡರು. ಪಂಜಾಬ್ ತಂಡದ ನಾಯಕ ಶುಭಮನ್ ಗಿಲ್ ಕೇವಲ 4 ರನ್ ಗಳಿಸಿ ಔಟ್ ಆದರು. </p><p>ಪಂಜಾಬ್ ಪರ ರಮನದೀಪ್ ಸಿಂಗ್ (16) ಹಾಗೂ ಮಯಂಕ್ ಮಾರ್ಕಂಡೆ (12) ಹೊರತುಪಡಿಸಿ ಇತರೆ ಯಾವ ಬ್ಯಾಟರ್ ಎರಡಂಕಿಯನ್ನು ದಾಟಲಿಲ್ಲ. </p><p>ನಿಖರ ದಾಳಿ ಸಂಘಟಿಸಿದ ಕೌಶಿಕ್ ಕೇವಲ 16 ರನ್ ತೆತ್ತು ನಾಲ್ಕು ವಿಕೆಟ್ ಕಿತ್ತು ಮಿಂಚಿದರು. ಅವರಿಗೆ ಉತ್ತಮ ಸಾಥ್ ನೀಡಿದ ಅಭಿಲಾಷ್ ಶೆಟ್ಟಿ 19 ರನ್ ನೀಡಿ ಮೂರು ವಿಕೆಟ್ ಗಳಿಸಿದರು. ವೇಗಿ ಪ್ರಸಿದ್ಧ ಕೃಷ್ಣ ಎರಡು ವಿಕೆಟ್ ಗಳಿಸಿದರು. </p><p>ಬಳಿಕ ಉತ್ತರ ನೀಡಿದ ಕರ್ನಾಟಕ ತಾಜಾ ವರದಿಯ ವೇಳೆಗೆ 16 ಓವರ್ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 66 ರನ್ ಗಳಿಸಿದೆ. ಆ ಮೂಲಕ ಇನಿಂಗ್ಸ್ ಮುನ್ನಡೆ ಗಳಿಸಿದೆ. </p><p>ನಾಯಕ ಮಯಂಕ್ ಅಗರವಾರ್ 20 ಮತ್ತು ಅನೀಶ್ ಕೆ.ವಿ 33 ರನ್ ಗಳಿಸಿ ಔಟ್ ಆದರು. </p>.ರಣಜಿ ಟ್ರೋಫಿ: ಅಗರವಾಲ್ ಪಡೆಗೆ ಗಿಲ್ ಸವಾಲು.ಅಭಿಷೇಕ್ 20 ಎಸೆತಗಳಲ್ಲಿ ಫಿಫ್ಟಿ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 7 ವಿಕೆಟ್ ಜಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕದ ವಾಸುಕಿ ಕೌಶಿಕ್ ಹಾಗೂ ಅಭಿಲಾಷ್ ಶೆಟ್ಟಿ ಮಾರಕ ದಾಳಿಗೆ ತತ್ತರಿಸಿರುವ ಪಂಜಾಬ್ ತಂಡವು ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಕೇವಲ 55 ರನ್ನಿಗೆ ಆಲೌಟ್ ಆಗಿದೆ.</p><p>ಎಲೈಟ್ 'ಸಿ' ಗುಂಪಿನ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕದ ನಾಯಕ ಮಯಂಕ್ ಅಗರವಾಲ್ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. </p><p>ಅಮೋಘ ದಾಳಿ ನಡೆಸಿದ ಕರ್ನಾಟಕದ ಬೌಲರ್ಗಳು ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡರು. ಪಂಜಾಬ್ ತಂಡದ ನಾಯಕ ಶುಭಮನ್ ಗಿಲ್ ಕೇವಲ 4 ರನ್ ಗಳಿಸಿ ಔಟ್ ಆದರು. </p><p>ಪಂಜಾಬ್ ಪರ ರಮನದೀಪ್ ಸಿಂಗ್ (16) ಹಾಗೂ ಮಯಂಕ್ ಮಾರ್ಕಂಡೆ (12) ಹೊರತುಪಡಿಸಿ ಇತರೆ ಯಾವ ಬ್ಯಾಟರ್ ಎರಡಂಕಿಯನ್ನು ದಾಟಲಿಲ್ಲ. </p><p>ನಿಖರ ದಾಳಿ ಸಂಘಟಿಸಿದ ಕೌಶಿಕ್ ಕೇವಲ 16 ರನ್ ತೆತ್ತು ನಾಲ್ಕು ವಿಕೆಟ್ ಕಿತ್ತು ಮಿಂಚಿದರು. ಅವರಿಗೆ ಉತ್ತಮ ಸಾಥ್ ನೀಡಿದ ಅಭಿಲಾಷ್ ಶೆಟ್ಟಿ 19 ರನ್ ನೀಡಿ ಮೂರು ವಿಕೆಟ್ ಗಳಿಸಿದರು. ವೇಗಿ ಪ್ರಸಿದ್ಧ ಕೃಷ್ಣ ಎರಡು ವಿಕೆಟ್ ಗಳಿಸಿದರು. </p><p>ಬಳಿಕ ಉತ್ತರ ನೀಡಿದ ಕರ್ನಾಟಕ ತಾಜಾ ವರದಿಯ ವೇಳೆಗೆ 16 ಓವರ್ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 66 ರನ್ ಗಳಿಸಿದೆ. ಆ ಮೂಲಕ ಇನಿಂಗ್ಸ್ ಮುನ್ನಡೆ ಗಳಿಸಿದೆ. </p><p>ನಾಯಕ ಮಯಂಕ್ ಅಗರವಾರ್ 20 ಮತ್ತು ಅನೀಶ್ ಕೆ.ವಿ 33 ರನ್ ಗಳಿಸಿ ಔಟ್ ಆದರು. </p>.ರಣಜಿ ಟ್ರೋಫಿ: ಅಗರವಾಲ್ ಪಡೆಗೆ ಗಿಲ್ ಸವಾಲು.ಅಭಿಷೇಕ್ 20 ಎಸೆತಗಳಲ್ಲಿ ಫಿಫ್ಟಿ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 7 ವಿಕೆಟ್ ಜಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>