<p><strong>ಬೆಂಗಳೂರು:</strong> ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂಜಾಬ್ ವಿರುದ್ಧ ನಡೆದ ರಣಜಿ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಕರ್ನಾಟಕ ಇನಿಂಗ್ಸ್ ಹಾಗೂ 207 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. </p><p>ಇಂದು ನಡೆದ ಮೂರನೇ ದಿನದಾಟದಲ್ಲಿ ದಿಟ್ಟ ಹೋರಾಟ ಪ್ರದರ್ಶಿಸಿದ ಪಂಜಾಬ್ ನಾಯಕ ಶುಭಮನ್ ಗಿಲ್ ಶತಕದ (102) ಸಾಧನೆ ಮಾಡಿದರು. ಆದರೂ ಗಿಲ್ ಹೋರಾಟವು ವ್ಯರ್ಥವೆನಿಸಿತು. </p><p>ಪಂಜಾಬ್ ದ್ವಿತೀಯ ಇನಿಂಗ್ಸ್ನಲ್ಲಿ 63.4 ಓವರ್ಗಳಲ್ಲಿ 213 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು. ಗಿಲ್ ಹೊರತುಪಡಿಸಿ ಬೇರೆ ಯಾವ ಬ್ಯಾಟರ್ಗೆ ಮಿಂಚಲು ಸಾಧ್ಯವಾಗಲಿಲ್ಲ. </p><p>ಕರ್ನಾಟಕದ ಪರ ಯಶೋವರ್ಧನ್ ಹಾಗೂ ಶ್ರೇಯಸ್ ಗೋಪಾಲ್ ತಲಾ ಮೂರು ಮತ್ತು ಪ್ರಸಿದ್ಧ ಕೃಷ್ಣ ಎರಡು ವಿಕೆಟ್ ಗಳಿಸಿದರು. </p><p>ಮೊದಲ ಇನಿಂಗ್ಸ್ನಲ್ಲಿ ವಾಸುಕಿ ಕೌಶಿಕ್ (16ಕ್ಕೆ 4) ಹಾಗೂ ಅಭಿಲಾಷ್ ಶೆಟ್ಟಿ (19ಕ್ಕೆ 3) ದಾಳಿಗೆ ನಲುಗಿದ್ದ ಪಂಜಾಬ್ ಕೇವಲ 55ಕ್ಕೆ ಆಲೌಟ್ ಆಗಿತ್ತು. </p><p>ಇದಕ್ಕೆ ಉತ್ತರವಾಗಿ ಕರ್ನಾಟಕ ಸ್ಮರಣ್ ರವಿಚಂದ್ರನ್ ಚೊಚ್ಚಲ ದ್ವಿಶತಕದ (203) ಬೆಂಬಲದಿಂದ 475 ರನ್ಗಳ ಬೃಹತ್ ಮೊತ್ತ ಪೇರಿಸಿತ್ತು. ಆ ಮೂಲಕ ಮೊದಲ ಇನಿಂಗ್ಸ್ನಲ್ಲಿ 320 ರನ್ಗಳ ಬೃಹತ್ ಮುನ್ನಡೆ ಗಳಿಸಿತ್ತು. </p><p>ಈ ಗೆಲುವಿನೊಂದಿಗೆ ಎಲೈಟ್ 'ಸಿ' ಗುಂಪಿನಲ್ಲಿ ಆಡಿರುವ 6 ಪಂದ್ಯಗಳಲ್ಲಿ ಎರಡನೇ ಗೆಲುವು ದಾಖಲಿಸಿರುವ ಕರ್ನಾಟಕ 19 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. </p>.Ranji Trophy: ದಿಟ್ಟ ಹೋರಾಟ ನೀಡಿದ ಗಿಲ್ ಶತಕ; ಇನಿಂಗ್ಸ್ ಗೆಲುವಿನತ್ತ ಕರ್ನಾಟಕ.ಸ್ಮರಣ್ ಅವಿಸ್ಮರಣೀಯ ದ್ವಿಶತಕ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂಜಾಬ್ ವಿರುದ್ಧ ನಡೆದ ರಣಜಿ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಕರ್ನಾಟಕ ಇನಿಂಗ್ಸ್ ಹಾಗೂ 207 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. </p><p>ಇಂದು ನಡೆದ ಮೂರನೇ ದಿನದಾಟದಲ್ಲಿ ದಿಟ್ಟ ಹೋರಾಟ ಪ್ರದರ್ಶಿಸಿದ ಪಂಜಾಬ್ ನಾಯಕ ಶುಭಮನ್ ಗಿಲ್ ಶತಕದ (102) ಸಾಧನೆ ಮಾಡಿದರು. ಆದರೂ ಗಿಲ್ ಹೋರಾಟವು ವ್ಯರ್ಥವೆನಿಸಿತು. </p><p>ಪಂಜಾಬ್ ದ್ವಿತೀಯ ಇನಿಂಗ್ಸ್ನಲ್ಲಿ 63.4 ಓವರ್ಗಳಲ್ಲಿ 213 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು. ಗಿಲ್ ಹೊರತುಪಡಿಸಿ ಬೇರೆ ಯಾವ ಬ್ಯಾಟರ್ಗೆ ಮಿಂಚಲು ಸಾಧ್ಯವಾಗಲಿಲ್ಲ. </p><p>ಕರ್ನಾಟಕದ ಪರ ಯಶೋವರ್ಧನ್ ಹಾಗೂ ಶ್ರೇಯಸ್ ಗೋಪಾಲ್ ತಲಾ ಮೂರು ಮತ್ತು ಪ್ರಸಿದ್ಧ ಕೃಷ್ಣ ಎರಡು ವಿಕೆಟ್ ಗಳಿಸಿದರು. </p><p>ಮೊದಲ ಇನಿಂಗ್ಸ್ನಲ್ಲಿ ವಾಸುಕಿ ಕೌಶಿಕ್ (16ಕ್ಕೆ 4) ಹಾಗೂ ಅಭಿಲಾಷ್ ಶೆಟ್ಟಿ (19ಕ್ಕೆ 3) ದಾಳಿಗೆ ನಲುಗಿದ್ದ ಪಂಜಾಬ್ ಕೇವಲ 55ಕ್ಕೆ ಆಲೌಟ್ ಆಗಿತ್ತು. </p><p>ಇದಕ್ಕೆ ಉತ್ತರವಾಗಿ ಕರ್ನಾಟಕ ಸ್ಮರಣ್ ರವಿಚಂದ್ರನ್ ಚೊಚ್ಚಲ ದ್ವಿಶತಕದ (203) ಬೆಂಬಲದಿಂದ 475 ರನ್ಗಳ ಬೃಹತ್ ಮೊತ್ತ ಪೇರಿಸಿತ್ತು. ಆ ಮೂಲಕ ಮೊದಲ ಇನಿಂಗ್ಸ್ನಲ್ಲಿ 320 ರನ್ಗಳ ಬೃಹತ್ ಮುನ್ನಡೆ ಗಳಿಸಿತ್ತು. </p><p>ಈ ಗೆಲುವಿನೊಂದಿಗೆ ಎಲೈಟ್ 'ಸಿ' ಗುಂಪಿನಲ್ಲಿ ಆಡಿರುವ 6 ಪಂದ್ಯಗಳಲ್ಲಿ ಎರಡನೇ ಗೆಲುವು ದಾಖಲಿಸಿರುವ ಕರ್ನಾಟಕ 19 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. </p>.Ranji Trophy: ದಿಟ್ಟ ಹೋರಾಟ ನೀಡಿದ ಗಿಲ್ ಶತಕ; ಇನಿಂಗ್ಸ್ ಗೆಲುವಿನತ್ತ ಕರ್ನಾಟಕ.ಸ್ಮರಣ್ ಅವಿಸ್ಮರಣೀಯ ದ್ವಿಶತಕ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>