<p><strong>ಬೆಂಗಳೂರು:</strong> ರಣಜಿ ಟ್ರೋಫಿ ದೇಶೀಯ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕದ ನವಪ್ರತಿಭೆ ಸ್ಮರಣ್ ರವಿಚಂದ್ರನ್ ಅಮೋಘ ದ್ವಿಶತಕದ ಸಾಧನೆ ಮಾಡಿದ್ದಾರೆ. </p><p>21 ವರ್ಷದ ಸ್ಮರಣ್ ದ್ವಿಶತಕದ ನೆರವಿನಿಂದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂಜಾಬ್ ವಿರುದ್ಧ ನಡೆಯುತ್ತಿರುವ ರಣಜಿ ಪಂದ್ಯದಲ್ಲಿ ಕರ್ನಾಟಕ ಬೃಹತ್ ಮುನ್ನಡೆ ಗಳಿಸಿದೆ. </p><p>ಮೊದಲ ದಿನದಾಟದಲ್ಲಿ ಆತಿಥೇಯ ಬೌಲರ್ಗಳ ಸಾಂಘಿಕ ದಾಳಿಗೆ ಕುಸಿದ ಪಂಜಾಬ್ ಕೇವಲ 55ಕ್ಕೆ ಆಲೌಟ್ ಆಗಿತ್ತು. ಬಳಿಕ ಮೊದಲ ದಿನದಾಟದ ಅಂತ್ಯಕ್ಕೆ ಕರ್ನಾಟಕ ಇನಿಂಗ್ಸ್ ಮುನ್ನಡೆ (4ಕ್ಕೆ199) ಗಳಿಸುವಲ್ಲಿ ಯಶಸ್ವಿಯಾಗಿತ್ತು. ಸ್ಮರಣ್ ರವಿಚಂದ್ರನ್ ಅಜೇಯ 83 ರನ್ ಗಳಿಸಿ ಕ್ರೀಸಿನಲ್ಲಿದ್ದರು. </p><p>ಇಂದು ಎರಡನೇ ದಿನದಾಟದಲ್ಲೂ ಸ್ಮರಣ್ ಅಮೋಘ ಇನಿಂಗ್ಸ್ ಕಟ್ಟಿದರು. 277 ಎಸೆತಗಳಲ್ಲಿ 203 ರನ್ ಗಳಿಸಿ ಅಬ್ಬರಿಸಿದರು. ಅವರ ಇನಿಂಗ್ಸ್ನಲ್ಲಿ 25 ಬೌಂಡರಿ ಹಾಗೂ ಮೂರು ಸಿಕ್ಸರ್ಗಳು ಸೇರಿದ್ದವು. </p><p>ಸ್ಮರಣ್ಗೆ ಉತ್ತಮ ಸಾಥ್ ನೀಡಿದ ಅಭಿನವ್ ಮನೋಹರ್ 34, ಶ್ರೇಯಸ್ ಗೋಪಾಲ್ 31 ರನ್ ಗಳಿಸಿದರು. </p><p>ತಾಜಾ ವರದಿಯ ವೇಳೆಗೆ ಕರ್ನಾಟಕ 107.1 ಓವರ್ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 420 ರನ್ ಗಳಿಸಿದೆ. ಅಲ್ಲದೆ 365 ರನ್ಗಳ ಬೃಹತ್ ಮುನ್ನಡೆ ಗಳಿಸಿದೆ. </p><p>ಇತ್ತೀಚೆಗೆ ನಡೆದ ವಿಜಯ್ ಹಜಾರೆ ಟ್ರೋಫಿ ಫೈನಲ್ನಲ್ಲೂ ಸ್ಮರಣ್ ಅಮೂಲ್ಯ ಶತಕ ಗಳಿಸಿದ್ದರು. ಫೈನಲ್ನಲ್ಲಿ ವಿದರ್ಭ ತಂಡವನ್ನು ಮಣಿಸಿದ್ದ ಕರ್ನಾಟಕ 5ನೇ ಸಲ ವಿಜಯ್ ಹಜಾರೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು. </p>.ಕರ್ನಾಟಕಕ್ಕೆ ವಿಜಯ್ ಹಜಾರೆ ಟ್ರೋಫಿ.Ranji Trophy | ಮಯಂಕ್ ಪಡೆಗೆ ಮೊದಲ ಇನಿಂಗ್ಸ್ ಮುನ್ನಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಣಜಿ ಟ್ರೋಫಿ ದೇಶೀಯ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕದ ನವಪ್ರತಿಭೆ ಸ್ಮರಣ್ ರವಿಚಂದ್ರನ್ ಅಮೋಘ ದ್ವಿಶತಕದ ಸಾಧನೆ ಮಾಡಿದ್ದಾರೆ. </p><p>21 ವರ್ಷದ ಸ್ಮರಣ್ ದ್ವಿಶತಕದ ನೆರವಿನಿಂದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂಜಾಬ್ ವಿರುದ್ಧ ನಡೆಯುತ್ತಿರುವ ರಣಜಿ ಪಂದ್ಯದಲ್ಲಿ ಕರ್ನಾಟಕ ಬೃಹತ್ ಮುನ್ನಡೆ ಗಳಿಸಿದೆ. </p><p>ಮೊದಲ ದಿನದಾಟದಲ್ಲಿ ಆತಿಥೇಯ ಬೌಲರ್ಗಳ ಸಾಂಘಿಕ ದಾಳಿಗೆ ಕುಸಿದ ಪಂಜಾಬ್ ಕೇವಲ 55ಕ್ಕೆ ಆಲೌಟ್ ಆಗಿತ್ತು. ಬಳಿಕ ಮೊದಲ ದಿನದಾಟದ ಅಂತ್ಯಕ್ಕೆ ಕರ್ನಾಟಕ ಇನಿಂಗ್ಸ್ ಮುನ್ನಡೆ (4ಕ್ಕೆ199) ಗಳಿಸುವಲ್ಲಿ ಯಶಸ್ವಿಯಾಗಿತ್ತು. ಸ್ಮರಣ್ ರವಿಚಂದ್ರನ್ ಅಜೇಯ 83 ರನ್ ಗಳಿಸಿ ಕ್ರೀಸಿನಲ್ಲಿದ್ದರು. </p><p>ಇಂದು ಎರಡನೇ ದಿನದಾಟದಲ್ಲೂ ಸ್ಮರಣ್ ಅಮೋಘ ಇನಿಂಗ್ಸ್ ಕಟ್ಟಿದರು. 277 ಎಸೆತಗಳಲ್ಲಿ 203 ರನ್ ಗಳಿಸಿ ಅಬ್ಬರಿಸಿದರು. ಅವರ ಇನಿಂಗ್ಸ್ನಲ್ಲಿ 25 ಬೌಂಡರಿ ಹಾಗೂ ಮೂರು ಸಿಕ್ಸರ್ಗಳು ಸೇರಿದ್ದವು. </p><p>ಸ್ಮರಣ್ಗೆ ಉತ್ತಮ ಸಾಥ್ ನೀಡಿದ ಅಭಿನವ್ ಮನೋಹರ್ 34, ಶ್ರೇಯಸ್ ಗೋಪಾಲ್ 31 ರನ್ ಗಳಿಸಿದರು. </p><p>ತಾಜಾ ವರದಿಯ ವೇಳೆಗೆ ಕರ್ನಾಟಕ 107.1 ಓವರ್ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 420 ರನ್ ಗಳಿಸಿದೆ. ಅಲ್ಲದೆ 365 ರನ್ಗಳ ಬೃಹತ್ ಮುನ್ನಡೆ ಗಳಿಸಿದೆ. </p><p>ಇತ್ತೀಚೆಗೆ ನಡೆದ ವಿಜಯ್ ಹಜಾರೆ ಟ್ರೋಫಿ ಫೈನಲ್ನಲ್ಲೂ ಸ್ಮರಣ್ ಅಮೂಲ್ಯ ಶತಕ ಗಳಿಸಿದ್ದರು. ಫೈನಲ್ನಲ್ಲಿ ವಿದರ್ಭ ತಂಡವನ್ನು ಮಣಿಸಿದ್ದ ಕರ್ನಾಟಕ 5ನೇ ಸಲ ವಿಜಯ್ ಹಜಾರೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು. </p>.ಕರ್ನಾಟಕಕ್ಕೆ ವಿಜಯ್ ಹಜಾರೆ ಟ್ರೋಫಿ.Ranji Trophy | ಮಯಂಕ್ ಪಡೆಗೆ ಮೊದಲ ಇನಿಂಗ್ಸ್ ಮುನ್ನಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>