<p><strong>ಮುಂಬೈ:</strong> ಕರ್ನಾಟಕ ಮತ್ತು ಮುಂಬೈ ನಡುವಣ ರಣಜಿ ಟ್ರೋಫಿ ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ಮೂರನೇ ದಿನದಾಟದ ಅಂತ್ಯಕ್ಕೆ 29 ಓವರ್ಗಳಲ್ಲಿ 2 ವಿಕೆಟ್ಗಳಿಗೆ 113 ರನ್ ಗಳಿಸಿದ್ದ ಕರ್ನಾಟಕ ತಂಡ ನಾಲ್ಕನೇ ದಿನದಾಟದ ಆರಂಭದಲ್ಲೇ 13 ರನ್ ಗಳಿಸಿದ್ದ ಕರುಣ್ ನಾಯರ್ ವಿಕೆಟ್ ಕಳೆದುಕೊಂಡಿತು. </p><p>ಮೂರನೇ ದಿನದಾಟದಲ್ಲಿ 60 ರನ್ ಗಳಿಸಿ ಅಜೇಯರಾಗಿ ಉಳಿದಿದ್ದ ಕೆ.ಎಲ್ ರಾಹುಲ್ ಅವರು ನಾಲ್ಕನೇ ದಿನದಾಟದ ಮೊದಲ ಅವಧಿಯಲ್ಲೇ ಆಕರ್ಷಕ ಶತಕ ಸಿಡಿಸಿ ಮಿಂಚಿದರು. ಪಂದ್ಯ ಗೆಲ್ಲಿಸುವುದರತ್ತ ಗಮನಹರಿಸಿರುವ ಅವರು ರನ್ ಗಳಿಕೆಗೆ ಒತ್ತು ನೀಡಿದ್ದಾರೆ. </p><p>ಸ್ಮರಣ್ ರವಿಚಂದ್ರನ್ ಜೊತೆ ಅಮೋಘ ಜೊತೆಯಾಟ ಆಡುತ್ತಿರುವ ಅವರು ಶತಕದ ಬಳಿಕ ಉತ್ತಮ ಬ್ಯಾಟಿಂಗ್ ಮುಂದುವರೆಸಿದ್ದಾರೆ.</p><p>ಸದ್ಯ, ನಾಲ್ಕನೇ ದಿನದಾಟದ ಮೊದಲ ಸೆಷನ್ನಲ್ಲಿ ಶತಕ (ಅಜೇಯ 130) ಸಿಡಿಸಿ ಮುನ್ನಡೆಯುತ್ತಿದ್ದಾರೆ. ಇವರಿಗೆ ಉತ್ತಮ ಸಾಥ್ ನೀಡಿರುವ ಸ್ಮರಣ್ ರವಿಚಂದ್ರನ್ ಕೂಡ ಅರ್ಧಶತಕ (ಅಜೇಯ 64 ರನ್) ಗಳಿಸಿ ಕ್ರೀಸ್ನಲ್ಲಿದ್ದಾರೆ.</p><p>ಇನ್ನೂ ಕರ್ನಾಟಕ ತಂಡ ಊಟದ ವಿರಾಮದ ವೇಳೆಗೆ 265/3 ವಿಕೆಟ್ ಕಳೆದುಕೊಂಡು ಸುಭದ್ರ ಸ್ಥಿತಿಯಲ್ಲಿದ್ದು, ಗೆಲುವಿಗೆ 60 ರನ್ಗಳ ಗತ್ಯವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಕರ್ನಾಟಕ ಮತ್ತು ಮುಂಬೈ ನಡುವಣ ರಣಜಿ ಟ್ರೋಫಿ ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ಮೂರನೇ ದಿನದಾಟದ ಅಂತ್ಯಕ್ಕೆ 29 ಓವರ್ಗಳಲ್ಲಿ 2 ವಿಕೆಟ್ಗಳಿಗೆ 113 ರನ್ ಗಳಿಸಿದ್ದ ಕರ್ನಾಟಕ ತಂಡ ನಾಲ್ಕನೇ ದಿನದಾಟದ ಆರಂಭದಲ್ಲೇ 13 ರನ್ ಗಳಿಸಿದ್ದ ಕರುಣ್ ನಾಯರ್ ವಿಕೆಟ್ ಕಳೆದುಕೊಂಡಿತು. </p><p>ಮೂರನೇ ದಿನದಾಟದಲ್ಲಿ 60 ರನ್ ಗಳಿಸಿ ಅಜೇಯರಾಗಿ ಉಳಿದಿದ್ದ ಕೆ.ಎಲ್ ರಾಹುಲ್ ಅವರು ನಾಲ್ಕನೇ ದಿನದಾಟದ ಮೊದಲ ಅವಧಿಯಲ್ಲೇ ಆಕರ್ಷಕ ಶತಕ ಸಿಡಿಸಿ ಮಿಂಚಿದರು. ಪಂದ್ಯ ಗೆಲ್ಲಿಸುವುದರತ್ತ ಗಮನಹರಿಸಿರುವ ಅವರು ರನ್ ಗಳಿಕೆಗೆ ಒತ್ತು ನೀಡಿದ್ದಾರೆ. </p><p>ಸ್ಮರಣ್ ರವಿಚಂದ್ರನ್ ಜೊತೆ ಅಮೋಘ ಜೊತೆಯಾಟ ಆಡುತ್ತಿರುವ ಅವರು ಶತಕದ ಬಳಿಕ ಉತ್ತಮ ಬ್ಯಾಟಿಂಗ್ ಮುಂದುವರೆಸಿದ್ದಾರೆ.</p><p>ಸದ್ಯ, ನಾಲ್ಕನೇ ದಿನದಾಟದ ಮೊದಲ ಸೆಷನ್ನಲ್ಲಿ ಶತಕ (ಅಜೇಯ 130) ಸಿಡಿಸಿ ಮುನ್ನಡೆಯುತ್ತಿದ್ದಾರೆ. ಇವರಿಗೆ ಉತ್ತಮ ಸಾಥ್ ನೀಡಿರುವ ಸ್ಮರಣ್ ರವಿಚಂದ್ರನ್ ಕೂಡ ಅರ್ಧಶತಕ (ಅಜೇಯ 64 ರನ್) ಗಳಿಸಿ ಕ್ರೀಸ್ನಲ್ಲಿದ್ದಾರೆ.</p><p>ಇನ್ನೂ ಕರ್ನಾಟಕ ತಂಡ ಊಟದ ವಿರಾಮದ ವೇಳೆಗೆ 265/3 ವಿಕೆಟ್ ಕಳೆದುಕೊಂಡು ಸುಭದ್ರ ಸ್ಥಿತಿಯಲ್ಲಿದ್ದು, ಗೆಲುವಿಗೆ 60 ರನ್ಗಳ ಗತ್ಯವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>