ಮೂರು ದಿನಗಳ ಹಿಂದೆ ಅಗರ್ತಲಾದಿಂದ ಸೂರತ್ಗೆ ತೆರಳುವ ವಿಮಾನದಲ್ಲಿ ಮಯಂಕ್ ಅವರು ನೀರು ಎಂದು ಭಾವಿಸಿ ರಾಸಾಯನಿಕ ದ್ರಾವಣವೊಂದನ್ನು ಸೇವಿಸಿ ಅಸ್ವಸ್ಥರಾಗಿದ್ದರು. ನಂತರ ಅವರನ್ನು ಅಗರ್ತಲಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಬಾಯಿ ಮತ್ತು ಗಂಟಲಿನಲ್ಲಿ ಬೊಬ್ಬೆಗಳಾಗಿದ್ದವು. ಬುಧವಾರ ಅವರು ಬೆಂಗಳೂರಿಗೆ ಮರಳಿ ತಮ್ಮ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ವೈದ್ಯರ ಸಲಹೆ ಮೇರೆಗೆ ಔಷಧೋಪಚಾರ ಪಡೆಯುತ್ತಿದ್ದಾರೆ.