<p><strong>ಬೆಂಗಳೂರು:</strong> ಕರ್ನಾಟಕ ವಿರುದ್ಧ ನಡೆಯುತ್ತಿರುವ ರಣಜಿ ಪಂದ್ಯದಲ್ಲಿ ದಿಟ್ಟ ಹೋರಾಟ ನೀಡಿರುವ ಪಂಜಾಬ್ ತಂಡದ ನಾಯಕ ಶುಭಮನ್ ಗಿಲ್, ಅಮೋಘ ಶತಕದ ಸಾಧನೆ ಮಾಡಿದ್ದಾರೆ. </p><p>ಆ ಮೂಲಕ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕರ್ನಾಟಕದ ಗೆಲುವನ್ನು ವಿಳಂಬಗೊಳಿಸಿದ್ದಾರೆ. ಕರ್ನಾಟಕದ ಗೆಲುವಿಗೆ ಮೂರು ವಿಕೆಟ್ಗಳ ಅವಶ್ಯಕತೆಯಿದೆ. </p><p>ಪಂಜಾಬ್ನ 55 ರನ್ಗಳಿಗೆ ಉತ್ತರವಾಗಿ ಕರ್ನಾಟಕ ಮೊದಲ ಇನಿಂಗ್ಸ್ನಲ್ಲಿ ಸ್ಮರಣ್ ರವಿಚಂದ್ರನ್ ದ್ವಿಶತಕದ (203) ಬಲದಿಂದ 475 ರನ್ಗಳ ಬೃಹತ್ ಮೊತ್ತ ಪೇರಿಸಿತ್ತು. </p><p>ಕರ್ನಾಟಕ ತಂಡವು ಮೊದಲ ಇನಿಂಗ್ಸ್ನಲ್ಲಿ 320 ರನ್ಗಳ ಬೃಹತ್ ಮುನ್ನಡೆ ಗಳಿಸಿತ್ತು. ಬಳಿಕ ದ್ವಿತೀಯ ಇನಿಂಗ್ಸ್ ಆರಂಭಿಸಿದ್ದ ಪಂಜಾಬ್ ಎರಡನೇ ದಿನದಂತ್ಯಕ್ಕೆ ಎರಡು ವಿಕೆಟ್ ನಷ್ಟಕ್ಕೆ 24 ರನ್ ಗಳಿಸಿ ಸಂಕಷ್ಟದಲ್ಲಿತ್ತು. </p><p>ಇಂದು (ಶನಿವಾರ) ಕೂಡ ಪಂಜಾಬ್ ಬ್ಯಾಟರ್ಗಳಿಗೆ ಕರ್ನಾಟಕದ ಬೌಲರ್ಗಳು ಕಾಡಿದರು. ಆದರೆ ವಿಕೆಟ್ನ ಮತ್ತೊಂದು ತುದಿಯಿಂದ ಕೆಚ್ಚೆದೆಯ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್ ಶತಕದ ಸಾಧನೆ ಮಾಡಿದರು. </p><p>ತಾಜಾ ವರದಿಯ ವೇಳೆಗೆ ಪಂಜಾಬ್ ಏಳು ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿದೆ. ಗಿಲ್ 101 ರನ್ ಗಳಿಸಿ ಕ್ರೀಸಿನಲ್ಲಿದ್ದಾರೆ. ಕರ್ನಾಟಕದ ಪರ ಯಶೋವರ್ಧನ್ ಮೂರು ಹಾಗೂ ಪ್ರಸಿದ್ಧ ಕೃಷ್ಣ ಎರಡು ವಿಕೆಟ್ ಗಳಿಸಿದ್ದಾರೆ. </p><p>ಇನಿಂಗ್ಸ್ ಸೋಲು ತಪ್ಪಿಸಿಕೊಳ್ಳಲು ಪಂಜಾಬ್ ಇನ್ನೂ 235 ರನ್ ಗಳಿಸಬೇಕಿದೆ. </p>.ಸ್ಮರಣ್ ಅವಿಸ್ಮರಣೀಯ ದ್ವಿಶತಕ .IND vs ENG T20 Cricket: ಸರಣಿ ಮುನ್ನಡೆಯತ್ತ ಸೂರ್ಯ ಪಡೆ ಚಿತ್ತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ವಿರುದ್ಧ ನಡೆಯುತ್ತಿರುವ ರಣಜಿ ಪಂದ್ಯದಲ್ಲಿ ದಿಟ್ಟ ಹೋರಾಟ ನೀಡಿರುವ ಪಂಜಾಬ್ ತಂಡದ ನಾಯಕ ಶುಭಮನ್ ಗಿಲ್, ಅಮೋಘ ಶತಕದ ಸಾಧನೆ ಮಾಡಿದ್ದಾರೆ. </p><p>ಆ ಮೂಲಕ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕರ್ನಾಟಕದ ಗೆಲುವನ್ನು ವಿಳಂಬಗೊಳಿಸಿದ್ದಾರೆ. ಕರ್ನಾಟಕದ ಗೆಲುವಿಗೆ ಮೂರು ವಿಕೆಟ್ಗಳ ಅವಶ್ಯಕತೆಯಿದೆ. </p><p>ಪಂಜಾಬ್ನ 55 ರನ್ಗಳಿಗೆ ಉತ್ತರವಾಗಿ ಕರ್ನಾಟಕ ಮೊದಲ ಇನಿಂಗ್ಸ್ನಲ್ಲಿ ಸ್ಮರಣ್ ರವಿಚಂದ್ರನ್ ದ್ವಿಶತಕದ (203) ಬಲದಿಂದ 475 ರನ್ಗಳ ಬೃಹತ್ ಮೊತ್ತ ಪೇರಿಸಿತ್ತು. </p><p>ಕರ್ನಾಟಕ ತಂಡವು ಮೊದಲ ಇನಿಂಗ್ಸ್ನಲ್ಲಿ 320 ರನ್ಗಳ ಬೃಹತ್ ಮುನ್ನಡೆ ಗಳಿಸಿತ್ತು. ಬಳಿಕ ದ್ವಿತೀಯ ಇನಿಂಗ್ಸ್ ಆರಂಭಿಸಿದ್ದ ಪಂಜಾಬ್ ಎರಡನೇ ದಿನದಂತ್ಯಕ್ಕೆ ಎರಡು ವಿಕೆಟ್ ನಷ್ಟಕ್ಕೆ 24 ರನ್ ಗಳಿಸಿ ಸಂಕಷ್ಟದಲ್ಲಿತ್ತು. </p><p>ಇಂದು (ಶನಿವಾರ) ಕೂಡ ಪಂಜಾಬ್ ಬ್ಯಾಟರ್ಗಳಿಗೆ ಕರ್ನಾಟಕದ ಬೌಲರ್ಗಳು ಕಾಡಿದರು. ಆದರೆ ವಿಕೆಟ್ನ ಮತ್ತೊಂದು ತುದಿಯಿಂದ ಕೆಚ್ಚೆದೆಯ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್ ಶತಕದ ಸಾಧನೆ ಮಾಡಿದರು. </p><p>ತಾಜಾ ವರದಿಯ ವೇಳೆಗೆ ಪಂಜಾಬ್ ಏಳು ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿದೆ. ಗಿಲ್ 101 ರನ್ ಗಳಿಸಿ ಕ್ರೀಸಿನಲ್ಲಿದ್ದಾರೆ. ಕರ್ನಾಟಕದ ಪರ ಯಶೋವರ್ಧನ್ ಮೂರು ಹಾಗೂ ಪ್ರಸಿದ್ಧ ಕೃಷ್ಣ ಎರಡು ವಿಕೆಟ್ ಗಳಿಸಿದ್ದಾರೆ. </p><p>ಇನಿಂಗ್ಸ್ ಸೋಲು ತಪ್ಪಿಸಿಕೊಳ್ಳಲು ಪಂಜಾಬ್ ಇನ್ನೂ 235 ರನ್ ಗಳಿಸಬೇಕಿದೆ. </p>.ಸ್ಮರಣ್ ಅವಿಸ್ಮರಣೀಯ ದ್ವಿಶತಕ .IND vs ENG T20 Cricket: ಸರಣಿ ಮುನ್ನಡೆಯತ್ತ ಸೂರ್ಯ ಪಡೆ ಚಿತ್ತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>