ಸೋಮವಾರ ರಾತ್ರಿ ನಡೆದ ಸೂಪರ್-12 ಹಂತದ ಎರಡನೇ ಗುಂಪಿನ ಅಂತಿಮ ಪಂದ್ಯದಲ್ಲಿ ನಮೀಬಿಯಾ ವಿರುದ್ಧ 9 ವಿಕೆಟ್ ಅಂತರದ ಗೆಲುವು ದಾಖಲಿಸಿ ಟೀಮ್ ಇಂಡಿಯಾ ಟೂರ್ನಿಯಿಂದ ಹೊರಬಿದ್ದಿದೆ. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸ್ತ್ರಿ ಅವರು, ‘ಆಟಗಾರರಿಗೆ ವಿಶ್ರಾಂತಿ ನೀಡುವ ಬಗ್ಗೆ ಆಡಳಿತಗಾರರೇ ನಿರ್ಧರಿಸಬೇಕು. ಅದು ನನ್ನ ಕೆಲಸವಲ್ಲ. ಇದು ಭಾರತದಲ್ಲಿ ಮಾತ್ರವಲ್ಲ. ವಿಶ್ವದ ಯಾವುದೇ ದೇಶದಲ್ಲಾದರೂ ದೊಡ್ಡ ಟೂರ್ನಿಗಳ ಆರಂಭಕ್ಕೂ ಮುನ್ನ ಸಣ್ಣಮಟ್ಟಿನ ಬಿಡುವು ನೀಡಲು ಮುಂದಾಗುತ್ತಾರೆ. ಇದು ಟೂರ್ನಿಗೆ ಸಿದ್ಧವಾಗಲು ಆಟಗಾರರಿಗೆ ನೆರವಾಗುತ್ತದೆ’ ಎಂದು ಹೇಳಿದ್ದಾರೆ.