ಇಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಎ.ಮಂಜುನಾಥ್ ಈ ಬಾರಿಯ ಚುನಾವಣೆಯಲ್ಲಿ ಬರೋಬ್ಬರಿ 51,425 ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಈ ಮೂಲಕ ಮೊದಲ ಬಾರಿಗೆ ವಿಧಾನಸಭೆಯ ಮೆಟ್ಟಿಲು ತುಳಿಯುವ ಅವಕಾಶ ಪಡೆದಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ, ಐದನೇ ಬಾರಿ ವಿಧಾನಸೌಧದ ಮೆಟ್ಟಿಲು ಏರುವ ಆಸೆಯಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ. ಬಾಲಕೃಷ್ಣ ಕನಸು ನುಚ್ಚುನೂರಾಗಿದೆ.