33 ವರ್ಷದ, ನಾಲ್ಕನೇ ಕ್ರಮಾಂಕದ ಬ್ಯಾಟ್ಸ್ಮನ್ ಅಂಬಟಿ ರಾಯುಡು ಅವರನ್ನು ಕೈಬಿಟ್ಟು ಆಲ್ರೌಂಡರ್ ವಿಜಯಶಂಕರ್ ಅವರಿಗೆ ಆಯ್ಕೆ ಸಮಿತಿ ಸ್ಥಾನ ನೀಡಿತ್ತು. ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ ಪ್ರಸಾದ್ ’ಅಂಬಟಿ ರಾಯುಡು ಅವರಿಗೆ ಈಗಾಗಲೇ ಹಲವು ಅವಕಾಶ ನೀಡಿದ್ದೇವೆ. ವಿಜಯ ಶಂಕರ್ ಮೂರೂ ಮಾದರಿಗಳಲ್ಲಿ ಸಮರ್ಥ ಆಟಗಾರ ಎನಿಸಿಕೊಂಡಿದ್ದಾರೆ. ಕಠಿಣ ಪರಿಸ್ಥಿತಿಯಲ್ಲಿ ಬೌಲಿಂಗ್, ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ನಲ್ಲಿ ಅವರು ಉತ್ತಮ ಸಾಮರ್ಥ್ಯ ತೋರಬಲ್ಲರು’ ಎಂದಿದ್ದರು.