ಸೋಮವಾರ ಸಬೆ ಸೇರಿದ ಆಯ್ಕೆ ಸಮಿತಿಯು ರಿಷಭ್ ಪಂತ್ ಮತ್ತು ಅಂಬಟಿ ರಾಯುಡು ಅವರನ್ನು ಕೈಬಿಟ್ಟಿತ್ತು. ಸುನಿಲ್ ಗಾವಸ್ಕರ್, ಗೌತಮ್ ಗಂಭಿರ್ ಸೇರಿದಂತೆ ಹಿರಿಯ ಕ್ರಿಕೆಟಿಗರು ಸಮಿತಿ ನಡೆಗೆ ಅಚ್ಚರಿ ವ್ಯಕ್ತಪಡಿಸಿದ್ದರು. ರಾಯುಡು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ‘ವಿಶ್ವಕಪ್ ನೋಡಲು ತ್ರಿ–ಡಿ ಕನ್ನಡಕ ಕಾಯ್ದಿರಿಸಿದ್ದೇನೆ’ ಎಂದು ವ್ಯಂಗ್ಯವಾಡಿದ್ದರು.