ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಡುವ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತನ್ನ ಅಧಿಕೃತ ಟ್ವಿಟರ್ ಖಾತೆಯಿಂದ 'ಬೆಂಗಳೂರು' ಹೆಸರನ್ನು ಕೈಬಿಟ್ಟಿರುವುದು ಕನ್ನಡ ಅಭಿಮಾನಿಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಬಹಳಷ್ಟು ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬೆಂಗಳೂರು ಎಫ್ಸಿಯ ಸುನಿಲ್ ಚೆಟ್ರಿ ಇರುವ ಚಿತ್ರವನ್ನು ಹಂಚಿಕೊಂಡಿರುವ ಆರ್ಸಿಬಿ, ವಿವಾದಕ್ಕೆ ತೆರೆ ಎಳೆಯಲು ಪ್ರಯತ್ನ ಮಾಡಿದೆ. ಇದಕ್ಕೆ ಅಭಿಮಾನಿಗಳು ಮತ್ತಷ್ಟು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
'ಕಪ್ ಅಂತೂ ಗೆಲ್ಲಲ್ಲ, ಮರ್ಯಾದೆ ಆದ್ರೂ ಕೊಡಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.