<p><strong>ಗಾಜಿಯಾಬಾದ್:</strong> ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಆಟಗಾರ ಯಶ್ ದಯಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ಇಂದು (ಮಂಗಳವಾರ) ತಿಳಿಸಿದ್ದಾರೆ. </p><p>27 ವರ್ಷದ ಯಶ್ ದಯಾಳ್ ವಿರುದ್ಧ ಗಾಜಿಯಾಬಾದ್ನ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 69ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. </p><p>ಐಜಿಆರ್ಎಸ್ ಮೂಲಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮಹಿಳೆ ದೂರು ನೀಡಿದ್ದರು. ದೂರಿನಲ್ಲಿ ಯಶ್ ಕಳೆದ ಐದು ವರ್ಷಗಳಿಂದ ತನ್ನೊಂದಿಗೆ ಸಂಬಂಧ ಹೊಂದಿದ್ದು, ಲೈಂಗಿಕ ಶೋಷಣೆಗೆ ಗುರಿಯಾಗಿದ್ದೇನೆ ಎಂದು ಆರೋಪಿಸಿದ್ದಾರೆ. </p><p>ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ಮಾಡಿರುವ ಆರೋಪ ಯಶ್ ಅವರ ಮೇಲಿದೆ. ಈ ಸಂಬಂಧ ಯಶ್ ದಯಾಳ್ ಅವರಿಂದ ಪ್ರತಿಕ್ರಿಯೆ ಬಂದಿಲ್ಲ. </p><p>ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ಚೊಚ್ಚಲ ಟ್ರೋಫಿ ಗೆಲ್ಲುವಲ್ಲಿ ಎಡಗೈ ವೇಗಿ ಯಶ್ ದಯಾಳ್ ಪ್ರಮುಖ ಪಾತ್ರ ವಹಿಸಿದ್ದರು. </p> .ಆರ್ಸಿಬಿ ಅಭಿಮಾನಿಗಳ ಮನ ಗೆದ್ದ ಬೌಲರ್ ಯಶ್ ದಯಾಳ್!.ಫ್ಯಾಕ್ಟ್ ಚೆಕ್: ಬೃಹತ್ ಸಂಖ್ಯೆಯಲ್ಲಿ ಆರ್ಸಿಬಿ ಸಂಭ್ರಮಾಚರಣೆ; ಸುಳ್ಳು ಸುದ್ದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಜಿಯಾಬಾದ್:</strong> ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಆಟಗಾರ ಯಶ್ ದಯಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ಇಂದು (ಮಂಗಳವಾರ) ತಿಳಿಸಿದ್ದಾರೆ. </p><p>27 ವರ್ಷದ ಯಶ್ ದಯಾಳ್ ವಿರುದ್ಧ ಗಾಜಿಯಾಬಾದ್ನ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 69ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. </p><p>ಐಜಿಆರ್ಎಸ್ ಮೂಲಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮಹಿಳೆ ದೂರು ನೀಡಿದ್ದರು. ದೂರಿನಲ್ಲಿ ಯಶ್ ಕಳೆದ ಐದು ವರ್ಷಗಳಿಂದ ತನ್ನೊಂದಿಗೆ ಸಂಬಂಧ ಹೊಂದಿದ್ದು, ಲೈಂಗಿಕ ಶೋಷಣೆಗೆ ಗುರಿಯಾಗಿದ್ದೇನೆ ಎಂದು ಆರೋಪಿಸಿದ್ದಾರೆ. </p><p>ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ಮಾಡಿರುವ ಆರೋಪ ಯಶ್ ಅವರ ಮೇಲಿದೆ. ಈ ಸಂಬಂಧ ಯಶ್ ದಯಾಳ್ ಅವರಿಂದ ಪ್ರತಿಕ್ರಿಯೆ ಬಂದಿಲ್ಲ. </p><p>ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ಚೊಚ್ಚಲ ಟ್ರೋಫಿ ಗೆಲ್ಲುವಲ್ಲಿ ಎಡಗೈ ವೇಗಿ ಯಶ್ ದಯಾಳ್ ಪ್ರಮುಖ ಪಾತ್ರ ವಹಿಸಿದ್ದರು. </p> .ಆರ್ಸಿಬಿ ಅಭಿಮಾನಿಗಳ ಮನ ಗೆದ್ದ ಬೌಲರ್ ಯಶ್ ದಯಾಳ್!.ಫ್ಯಾಕ್ಟ್ ಚೆಕ್: ಬೃಹತ್ ಸಂಖ್ಯೆಯಲ್ಲಿ ಆರ್ಸಿಬಿ ಸಂಭ್ರಮಾಚರಣೆ; ಸುಳ್ಳು ಸುದ್ದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>