<p><strong>ಬೆಂಗಳೂರು:</strong> ಐಪಿಎಲ್ನಲ್ಲಿ ಆರ್ಸಿಬಿ ತಂಡ ಮೊದಲ ಬಾರಿಗೆ ಕಪ್ ಗೆದ್ದು ಸಂಭ್ರಮಾಚರಣೆ ನಡೆಸಿದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು. ಘಟನೆಯ ಬಳಿಕ ಆರ್ಸಿಬಿ ತಂಡ ಸಂತಾಪ ಪೋಸ್ಟ್ ಹಂಚಿಕೊಂಡಿತ್ತು. ಆ ಬಳಿಕ ಇಲ್ಲಿಯವರೆಗೂ ಯಾವುದೇ ಪೋಸ್ಟ್ ಹಂಚಿಕೊಂಡಿರಲಿಲ್ಲ. ಈಗ ಮೂರು ತಿಂಗಳ (84 ದಿನ) ಬಳಿಕ ಅಧಿಕೃತ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದೆ.</p><p>ಪೋಸ್ಟ್ನಲ್ಲಿ ‘ಆರ್ಸಿಬಿ ಕೇರ್ಸ್’ ಯೋಜನೆಯ ಬಗ್ಗೆ ಪ್ರಸ್ತಾಪಿಸಿದ್ದು, ಅಭಿಮಾನಿಗಳೊಂದಿಗೆ ಸದಾ ಇರುವುದಾಗಿ ತಂಡ ಹೇಳಿದೆ.</p><p>‘ನಾವು ಪೋಸ್ಟ್ ಮಾಡಿ ಸುಮಾರು ಮೂರು ತಿಂಗಳು ಕಳೆದಿವೆ. ಇದು ನಮ್ಮ ಗೈರಲ್ಲ, ಆಳವಾದ ದುಃಖದ ಮೌನವಾಗಿತ್ತು’ ಎಂದಿದೆ.</p><p>‘ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೆವು. ಆದರೆ ಜೂನ್ 4ರ ಘಟನೆ ಎಲ್ಲವನ್ನೂ ಬದಲಾಯಿಸಿತು. ಆ ದಿನದ ದುರಂತದ ನಂತರ ಕೇವಲ ನಿಶ್ಯಬ್ದ ಆವರಿಸಿತ್ತು. ಅದು ಕೇವಲ ಮೌನವಲ್ಲ ಅದು ಶ್ರದ್ಧೆಯಿಂದ ತುಂಬಿದ ಶಾಂತ ಶ್ರದ್ಧಾಂಜಲಿ. ಈ ಮೌನದೊಳಗೆ ನೋವನ್ನು ಅನುಭವಿಸುತ್ತಾ ಅನೇಕ ವಿಷಯಗಳನ್ನು ಕಲಿತೆವು. ನೋವನ್ನೇ ಶ್ರದ್ದೆಯಾಗಿ, ನಂಬಿಕೆಯಾಗಿ ರೂಪಿಸಬೇಕೆಂದು ತೀರ್ಮಾನಿಸಿದ್ದೆವು. ಅದರ ಫಲವೇ ‘ಆರ್ಸಿಬಿ ಕೇರ್ಸ್’. </p><p>ನಮ್ಮ ಅಭಿಮಾನಿಗಳು ಮತ್ತು ಸಮುದಾಯಕ್ಕಾಗಿ ನಿಷ್ಠೆಯಿಂದ ರೂಪಿಸಿದ ಒಂದು ಯೋಜನೆ. ಇಂದು ನಾವು ಮರಳಿದ್ದೇವೆ, ನಿಮ್ಮೊಂದಿಗೆ ನಿಲ್ಲುವ ಭರವಸೆಯನ್ನು ನೀಡುತ್ತ, ಕರ್ನಾಟಕದ ಹೆಮ್ಮೆಯಾಗಿ ಮುಂದೆ ಸಾಗುತ್ತೇವೆ. ಇದು ನಮ್ಮ ಕಾಳಜಿ, ನಮ್ಮ ಪ್ರತಿಜ್ಞೆ. ಆರ್ಸಿಬಿ ಕೇರ್ಸ್: ನಾವು ಸದಾ ನಿಮ್ಮೊಂದಿಗಿದ್ದೇವೆ’ ಎಂದು ಬರೆದುಕೊಂಡಿದೆ. </p><p>ಜತೆಗೆ ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ಹಂಚಿಕೊಳ್ಳುತ್ತೇವೆ ಎಂದು ಹೇಳಿದೆ.</p>.<p>ಮೊದಲ ಬಾರಿಗೆ ಕಪ್ ಗೆದ್ದ ಖುಷಿಯಲ್ಲಿ ನಡೆದ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದರು. ಆ ಬಳಿಕ ಆರ್ಸಿಬಿ ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ಘೋಷಿಸಿತ್ತು.</p>.ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ: ಆರ್ಸಿಬಿ.ವಿಧಾನಸೌಧ, ಚಿನ್ನಸ್ವಾಮಿಯಲ್ಲಿ ಆರ್ಸಿಬಿ ವಿಜಯೋತ್ಸವಕ್ಕೆ ₹15 ಕೋಟಿ ಖರ್ಚು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಐಪಿಎಲ್ನಲ್ಲಿ ಆರ್ಸಿಬಿ ತಂಡ ಮೊದಲ ಬಾರಿಗೆ ಕಪ್ ಗೆದ್ದು ಸಂಭ್ರಮಾಚರಣೆ ನಡೆಸಿದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು. ಘಟನೆಯ ಬಳಿಕ ಆರ್ಸಿಬಿ ತಂಡ ಸಂತಾಪ ಪೋಸ್ಟ್ ಹಂಚಿಕೊಂಡಿತ್ತು. ಆ ಬಳಿಕ ಇಲ್ಲಿಯವರೆಗೂ ಯಾವುದೇ ಪೋಸ್ಟ್ ಹಂಚಿಕೊಂಡಿರಲಿಲ್ಲ. ಈಗ ಮೂರು ತಿಂಗಳ (84 ದಿನ) ಬಳಿಕ ಅಧಿಕೃತ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದೆ.</p><p>ಪೋಸ್ಟ್ನಲ್ಲಿ ‘ಆರ್ಸಿಬಿ ಕೇರ್ಸ್’ ಯೋಜನೆಯ ಬಗ್ಗೆ ಪ್ರಸ್ತಾಪಿಸಿದ್ದು, ಅಭಿಮಾನಿಗಳೊಂದಿಗೆ ಸದಾ ಇರುವುದಾಗಿ ತಂಡ ಹೇಳಿದೆ.</p><p>‘ನಾವು ಪೋಸ್ಟ್ ಮಾಡಿ ಸುಮಾರು ಮೂರು ತಿಂಗಳು ಕಳೆದಿವೆ. ಇದು ನಮ್ಮ ಗೈರಲ್ಲ, ಆಳವಾದ ದುಃಖದ ಮೌನವಾಗಿತ್ತು’ ಎಂದಿದೆ.</p><p>‘ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೆವು. ಆದರೆ ಜೂನ್ 4ರ ಘಟನೆ ಎಲ್ಲವನ್ನೂ ಬದಲಾಯಿಸಿತು. ಆ ದಿನದ ದುರಂತದ ನಂತರ ಕೇವಲ ನಿಶ್ಯಬ್ದ ಆವರಿಸಿತ್ತು. ಅದು ಕೇವಲ ಮೌನವಲ್ಲ ಅದು ಶ್ರದ್ಧೆಯಿಂದ ತುಂಬಿದ ಶಾಂತ ಶ್ರದ್ಧಾಂಜಲಿ. ಈ ಮೌನದೊಳಗೆ ನೋವನ್ನು ಅನುಭವಿಸುತ್ತಾ ಅನೇಕ ವಿಷಯಗಳನ್ನು ಕಲಿತೆವು. ನೋವನ್ನೇ ಶ್ರದ್ದೆಯಾಗಿ, ನಂಬಿಕೆಯಾಗಿ ರೂಪಿಸಬೇಕೆಂದು ತೀರ್ಮಾನಿಸಿದ್ದೆವು. ಅದರ ಫಲವೇ ‘ಆರ್ಸಿಬಿ ಕೇರ್ಸ್’. </p><p>ನಮ್ಮ ಅಭಿಮಾನಿಗಳು ಮತ್ತು ಸಮುದಾಯಕ್ಕಾಗಿ ನಿಷ್ಠೆಯಿಂದ ರೂಪಿಸಿದ ಒಂದು ಯೋಜನೆ. ಇಂದು ನಾವು ಮರಳಿದ್ದೇವೆ, ನಿಮ್ಮೊಂದಿಗೆ ನಿಲ್ಲುವ ಭರವಸೆಯನ್ನು ನೀಡುತ್ತ, ಕರ್ನಾಟಕದ ಹೆಮ್ಮೆಯಾಗಿ ಮುಂದೆ ಸಾಗುತ್ತೇವೆ. ಇದು ನಮ್ಮ ಕಾಳಜಿ, ನಮ್ಮ ಪ್ರತಿಜ್ಞೆ. ಆರ್ಸಿಬಿ ಕೇರ್ಸ್: ನಾವು ಸದಾ ನಿಮ್ಮೊಂದಿಗಿದ್ದೇವೆ’ ಎಂದು ಬರೆದುಕೊಂಡಿದೆ. </p><p>ಜತೆಗೆ ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ಹಂಚಿಕೊಳ್ಳುತ್ತೇವೆ ಎಂದು ಹೇಳಿದೆ.</p>.<p>ಮೊದಲ ಬಾರಿಗೆ ಕಪ್ ಗೆದ್ದ ಖುಷಿಯಲ್ಲಿ ನಡೆದ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದರು. ಆ ಬಳಿಕ ಆರ್ಸಿಬಿ ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ಘೋಷಿಸಿತ್ತು.</p>.ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ: ಆರ್ಸಿಬಿ.ವಿಧಾನಸೌಧ, ಚಿನ್ನಸ್ವಾಮಿಯಲ್ಲಿ ಆರ್ಸಿಬಿ ವಿಜಯೋತ್ಸವಕ್ಕೆ ₹15 ಕೋಟಿ ಖರ್ಚು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>