<p><strong>ಬೆಂಗಳೂರು</strong>: ಪ್ಲೇ ಆಫ್ಗೆ ಅರ್ಹತೆ ಪಡೆಯುವ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಸುಲಭ ಜಯ ಸಾಧಿಸಿದೆ. ಆ ಮೂಲಕ ಪ್ಲೇ ಆಫ್ ಕನಸನ್ನು ಜೀವಂತವಾಗಿಸಿದೆ.</p><p>ಪಂದ್ಯಕ್ಕೂ ಮೊದಲು ಟ್ವೀಟ್ ಮಾಡಿದ್ದ ಡೆಲ್ಲಿ ತಂಡ, ‘ನಮಸ್ಕಾರ ಬೆಂಗಳೂರು, ಚಿನ್ನಸ್ವಾಮಿಯಲ್ಲಿ ಭೇಟಿ ಆಗೋಣ’ ಎಂದು ಹೇಳಿತ್ತು. ಪಂದ್ಯದ ನಂತರ ಇದಕ್ಕೆ ಪ್ರತಿಕ್ರಿಯಿಸಿರುವ ಬೆಂಗಳೂರು ತಂಡ, ‘ಭೇಟಿ ಆಗೋಕೆ ಬಂದು ಬೇಟೆ ಆಗೋದ್ರು’ ಎಂದು ಹೇಳಿ ಕಾಲೆಳೆದಿದೆ.</p><p>ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯ ಅತ್ಯಂತ ನಿರ್ಣಾಯಕ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಗೆಲ್ಲವುದು ಉಭಯ ತಂಡಗಳಿಗೂ ಮಹತ್ವದಾಗಿತ್ತು. ಆಡಿದ 12 ಪಂದ್ಯಗಳಲ್ಲಿ ಡೆಲ್ಲಿ ತಂಡ 6 ಪಂದ್ಯಗಳನ್ನು ಗೆದ್ದಿತ್ತು. ಆದರೆ ರನ್ರೇಟ್ ಉತ್ತಮವಾಗಿಲ್ಲದ ಕಾರಣ ಪ್ಲೇ ಆಫ್ಗೆ ಪ್ರವೇಶಿಸಬೇಕಾದರೆ ಮುಂದಿನ ಎರಡು ಪಂದ್ಯಗಳಲ್ಲಿ ಜಯ ಗಳಿಸುವುದು ಡೆಲ್ಲಿ ತಂಡಕ್ಕೆ ಅನಿವಾರ್ಯವಾಗಿತ್ತು. ಆದರೆ ಆರ್ಸಿಬಿ ಎದುರು ಸೋಲುವ ಮೂಲಕ ಡೆಲ್ಲಿ ತಂಡಕ್ಕೆ ನಿರಾಸೆಯಾಗಿದೆ. ಬೆಂಗಳೂರು ತಂಡದ ಮೇಲೆ ನಿರೀಕ್ಷೆ ಹೆಚ್ಚಿದೆ.</p>.<p>ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು ತಂಡ 20 ಓವರ್ಗಳಲ್ಲಿ 9 ವಿಕೆಟ್ಗಳಿಗೆ 187 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ್ದ ಡೆಲ್ಲಿ ತಂಡವು 19.1 ಓವರ್ಗಳಲ್ಲಿ 140 ರನ್ ಗಳಿಸಿ ಎಲ್ಲ ವಿಕೆಟ್ ಕಳೆದುಕೊಂಡಿತು. </p><p>ಆರ್ಸಿಬಿಗೆ ಇದು ಸತತ ಐದನೇ ಗೆಲುವಾಗಿದ್ದು, ಇದರೊಂದಿಗೆ ಒಟ್ಟು 12 ಅಂಕ ಗಳಿಸಿದ ತಂಡವು ಐದನೇ ಸ್ಥಾನಕ್ಕೇರಿದೆ.</p><p>ರಾಜಸ್ಥಾನ ರಾಯಲ್ಸ್ ತಂಡವನ್ನು ಸೋಲಿಸಿ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂದಿನ ಪಂದ್ಯಲ್ಲಿ ಆರ್ಸಿಬಿ ಮುಖಾಮುಖಿಯಾಗಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪ್ಲೇ ಆಫ್ಗೆ ಅರ್ಹತೆ ಪಡೆಯುವ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಸುಲಭ ಜಯ ಸಾಧಿಸಿದೆ. ಆ ಮೂಲಕ ಪ್ಲೇ ಆಫ್ ಕನಸನ್ನು ಜೀವಂತವಾಗಿಸಿದೆ.</p><p>ಪಂದ್ಯಕ್ಕೂ ಮೊದಲು ಟ್ವೀಟ್ ಮಾಡಿದ್ದ ಡೆಲ್ಲಿ ತಂಡ, ‘ನಮಸ್ಕಾರ ಬೆಂಗಳೂರು, ಚಿನ್ನಸ್ವಾಮಿಯಲ್ಲಿ ಭೇಟಿ ಆಗೋಣ’ ಎಂದು ಹೇಳಿತ್ತು. ಪಂದ್ಯದ ನಂತರ ಇದಕ್ಕೆ ಪ್ರತಿಕ್ರಿಯಿಸಿರುವ ಬೆಂಗಳೂರು ತಂಡ, ‘ಭೇಟಿ ಆಗೋಕೆ ಬಂದು ಬೇಟೆ ಆಗೋದ್ರು’ ಎಂದು ಹೇಳಿ ಕಾಲೆಳೆದಿದೆ.</p><p>ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯ ಅತ್ಯಂತ ನಿರ್ಣಾಯಕ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಗೆಲ್ಲವುದು ಉಭಯ ತಂಡಗಳಿಗೂ ಮಹತ್ವದಾಗಿತ್ತು. ಆಡಿದ 12 ಪಂದ್ಯಗಳಲ್ಲಿ ಡೆಲ್ಲಿ ತಂಡ 6 ಪಂದ್ಯಗಳನ್ನು ಗೆದ್ದಿತ್ತು. ಆದರೆ ರನ್ರೇಟ್ ಉತ್ತಮವಾಗಿಲ್ಲದ ಕಾರಣ ಪ್ಲೇ ಆಫ್ಗೆ ಪ್ರವೇಶಿಸಬೇಕಾದರೆ ಮುಂದಿನ ಎರಡು ಪಂದ್ಯಗಳಲ್ಲಿ ಜಯ ಗಳಿಸುವುದು ಡೆಲ್ಲಿ ತಂಡಕ್ಕೆ ಅನಿವಾರ್ಯವಾಗಿತ್ತು. ಆದರೆ ಆರ್ಸಿಬಿ ಎದುರು ಸೋಲುವ ಮೂಲಕ ಡೆಲ್ಲಿ ತಂಡಕ್ಕೆ ನಿರಾಸೆಯಾಗಿದೆ. ಬೆಂಗಳೂರು ತಂಡದ ಮೇಲೆ ನಿರೀಕ್ಷೆ ಹೆಚ್ಚಿದೆ.</p>.<p>ಮೊದಲು ಬ್ಯಾಟಿಂಗ್ ಮಾಡಿದ ಬೆಂಗಳೂರು ತಂಡ 20 ಓವರ್ಗಳಲ್ಲಿ 9 ವಿಕೆಟ್ಗಳಿಗೆ 187 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ್ದ ಡೆಲ್ಲಿ ತಂಡವು 19.1 ಓವರ್ಗಳಲ್ಲಿ 140 ರನ್ ಗಳಿಸಿ ಎಲ್ಲ ವಿಕೆಟ್ ಕಳೆದುಕೊಂಡಿತು. </p><p>ಆರ್ಸಿಬಿಗೆ ಇದು ಸತತ ಐದನೇ ಗೆಲುವಾಗಿದ್ದು, ಇದರೊಂದಿಗೆ ಒಟ್ಟು 12 ಅಂಕ ಗಳಿಸಿದ ತಂಡವು ಐದನೇ ಸ್ಥಾನಕ್ಕೇರಿದೆ.</p><p>ರಾಜಸ್ಥಾನ ರಾಯಲ್ಸ್ ತಂಡವನ್ನು ಸೋಲಿಸಿ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂದಿನ ಪಂದ್ಯಲ್ಲಿ ಆರ್ಸಿಬಿ ಮುಖಾಮುಖಿಯಾಗಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>