<p><strong>ಅಹಮದಾಬಾದ್:</strong> ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಸತತ ಎರಡನೇ ಪ್ರಶಸ್ತಿ ಗೆದ್ದಿರುವ ಆರ್ಸಿಬಿ ತಂಡದ ವಿಜಯಯಾತ್ರೆಯನ್ನು ಬೆಂಗಳೂರಿನಲ್ಲಿ ನಡೆಸದಿರಲು ಫ್ರ್ಯಾಂಚೈಸಿಯು ನಿರ್ಧರಿಸಿದೆ. </p>.<p>ಹೋದ ವರ್ಷ ಆರ್ಸಿಬಿಯು ಪ್ರಶಸ್ತಿ ಜಯಿಸಿದಾಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಆಯೋಜಿಸಲಾಗಿತ್ತು. ಆದರೆ ಆ ಸಂದರ್ಭದಲ್ಲಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿದ್ದರಿಂದ 11 ಅಭಿಮಾನಿಗಳು ಮೃತಪಟ್ಟಿದ್ದರು. ಆದ್ದರಿಂದ ಈ ಸಲ ಬೆಂಗಳೂರಿನಲ್ಲಿ ವಿಜಯಯಾತ್ರೆಯನ್ನು ಯೋಜಿಸಲಾಗಿಲ್ಲ. </p>.<p>ಅಲ್ಲದೇ ಬುಧವಾರ ಸಂಜೆ ಲೋಕಭವನದಲ್ಲಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮವೂ ಇದೆ. ಈ ಸಂದರ್ಭದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇದೆ. ಬೇರೆ ಬೇರೆ ರಾಜ್ಯಗಳಿಂದ ಗಣ್ಯರೂ ಬರುವ ಸಾಧ್ಯತೆ ಇದೆ. ಆದ್ದರಿಂದ ಜನಜಂಗುಳಿ ಹೆಚ್ಚಾಗುವ ನಿರೀಕ್ಷೆ ಇದೆ. ಪೊಲೀಸ್ ಸಿಬ್ಬಂದಿಯ ನಿಯೋಜನೆಯೂ ಸವಾಲಿನದ್ದಾಗಿದೆ. </p>.<p>ಆದ್ದರಿಂದ ನಗರದ ರಸ್ತೆಗಳಲ್ಲಿ ಮೆರವಣಿಗೆ ಅಥವಾ ವಿಜಯಯಾತ್ರೆ ಮಾಡದಿರಲು ಆರ್ಸಿಬಿ ಮ್ಯಾನೇಜ್ಮೆಂಟ್ ನಿರ್ಧರಿಸಿದೆ ಎನ್ನಲಾಗಿದೆ. </p>.<p>‘ಪೊಲೀಸ್ ಇಲಾಖೆಯಿಂದ ನೀಡಿರುವ ಮಾರ್ಗಸೂಚಿಯನ್ನು ಪಾಲಿಸಲು ನಾವು ಬದ್ಧರಾಗಿದ್ದೇವೆ. ಸದ್ಯಕ್ಕೆ ಬೆಂಗಳೂರಿನಲ್ಲಿ ಯಾವುದೇ ಕಾರ್ಯಕ್ರಮದ ಯೋಚನೆ ಇಲ್ಲ’ ಎಂದು ಆರ್ಸಿಬಿಯ ಮೂಲಗಳು ತಿಳಿಸಿವೆ.</p>.<p>‘ಯಾವುದೇ ಸಾರ್ವಜನಿಕ ಹಾಗೂ ಬಹಿರಂಗವಾದ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದಿಲ್ಲ. ಅಭಿಮಾನಿಗಳು ಒಳಾಂಗಣಗಳಲ್ಲಿ ಸಂಭ್ರಮ ಆಚರಿಸಿಕೊಳ್ಳಬಹುದು’ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿಮಾಂತ್ ಕುಮಾರ್ ಸಿಂಗ್ ಹೇಳಿದ್ದಾರೆ. </p>.<p>ಆರ್ಸಿಬಿಯಲ್ಲಿರುವ ಕರ್ನಾಟಕದ ಆಟಗಾರ ದೇವದತ್ತ ಪಡಿಕ್ಕಲ್ ಅವರು ಬುಧವಾರ ಮುಲ್ಲನಪುರಕ್ಕೆ ತೆರಳಲಿದ್ದಾರೆ. ಅಫ್ಗಾನಿಸ್ತಾನ ಎದುರಿನ ಏಕೈಕ ಟೆಸ್ಟ್ ಆಡಲಿರುವ ಭಾರತ ತಂಡವನ್ನು ಅವರು ಸೇರಿಕೊಳ್ಳಲಿದ್ದಾರೆ. </p>.<p>ಜೋಶ್ ಹೇಝಲ್ವುಡ್, ಟಿಮ್ ಡೇವಿಡ್ (ಆಸ್ಟ್ರೇಲಿಯಾ), ಜೇಕಬ್ ಡಫಿ (ನ್ಯೂಜಿಲೆಂಡ್) ಹಾಗೂ ರೊಮೆರಿಯೊ ಶೆಫರ್ಡ್ (ವೆಸ್ಟ್ ಇಂಡೀಸ್) ಅವರು ಕೂಡ ತಮ್ಮ ರಾಷ್ಟ್ರೀಯ ತಂಡಗಳನ್ನು ಸೇರಿಕೊಳ್ಳಲು ಪ್ರಯಾಣಿಸಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಸತತ ಎರಡನೇ ಪ್ರಶಸ್ತಿ ಗೆದ್ದಿರುವ ಆರ್ಸಿಬಿ ತಂಡದ ವಿಜಯಯಾತ್ರೆಯನ್ನು ಬೆಂಗಳೂರಿನಲ್ಲಿ ನಡೆಸದಿರಲು ಫ್ರ್ಯಾಂಚೈಸಿಯು ನಿರ್ಧರಿಸಿದೆ. </p>.<p>ಹೋದ ವರ್ಷ ಆರ್ಸಿಬಿಯು ಪ್ರಶಸ್ತಿ ಜಯಿಸಿದಾಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಆಯೋಜಿಸಲಾಗಿತ್ತು. ಆದರೆ ಆ ಸಂದರ್ಭದಲ್ಲಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿದ್ದರಿಂದ 11 ಅಭಿಮಾನಿಗಳು ಮೃತಪಟ್ಟಿದ್ದರು. ಆದ್ದರಿಂದ ಈ ಸಲ ಬೆಂಗಳೂರಿನಲ್ಲಿ ವಿಜಯಯಾತ್ರೆಯನ್ನು ಯೋಜಿಸಲಾಗಿಲ್ಲ. </p>.<p>ಅಲ್ಲದೇ ಬುಧವಾರ ಸಂಜೆ ಲೋಕಭವನದಲ್ಲಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮವೂ ಇದೆ. ಈ ಸಂದರ್ಭದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇದೆ. ಬೇರೆ ಬೇರೆ ರಾಜ್ಯಗಳಿಂದ ಗಣ್ಯರೂ ಬರುವ ಸಾಧ್ಯತೆ ಇದೆ. ಆದ್ದರಿಂದ ಜನಜಂಗುಳಿ ಹೆಚ್ಚಾಗುವ ನಿರೀಕ್ಷೆ ಇದೆ. ಪೊಲೀಸ್ ಸಿಬ್ಬಂದಿಯ ನಿಯೋಜನೆಯೂ ಸವಾಲಿನದ್ದಾಗಿದೆ. </p>.<p>ಆದ್ದರಿಂದ ನಗರದ ರಸ್ತೆಗಳಲ್ಲಿ ಮೆರವಣಿಗೆ ಅಥವಾ ವಿಜಯಯಾತ್ರೆ ಮಾಡದಿರಲು ಆರ್ಸಿಬಿ ಮ್ಯಾನೇಜ್ಮೆಂಟ್ ನಿರ್ಧರಿಸಿದೆ ಎನ್ನಲಾಗಿದೆ. </p>.<p>‘ಪೊಲೀಸ್ ಇಲಾಖೆಯಿಂದ ನೀಡಿರುವ ಮಾರ್ಗಸೂಚಿಯನ್ನು ಪಾಲಿಸಲು ನಾವು ಬದ್ಧರಾಗಿದ್ದೇವೆ. ಸದ್ಯಕ್ಕೆ ಬೆಂಗಳೂರಿನಲ್ಲಿ ಯಾವುದೇ ಕಾರ್ಯಕ್ರಮದ ಯೋಚನೆ ಇಲ್ಲ’ ಎಂದು ಆರ್ಸಿಬಿಯ ಮೂಲಗಳು ತಿಳಿಸಿವೆ.</p>.<p>‘ಯಾವುದೇ ಸಾರ್ವಜನಿಕ ಹಾಗೂ ಬಹಿರಂಗವಾದ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದಿಲ್ಲ. ಅಭಿಮಾನಿಗಳು ಒಳಾಂಗಣಗಳಲ್ಲಿ ಸಂಭ್ರಮ ಆಚರಿಸಿಕೊಳ್ಳಬಹುದು’ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿಮಾಂತ್ ಕುಮಾರ್ ಸಿಂಗ್ ಹೇಳಿದ್ದಾರೆ. </p>.<p>ಆರ್ಸಿಬಿಯಲ್ಲಿರುವ ಕರ್ನಾಟಕದ ಆಟಗಾರ ದೇವದತ್ತ ಪಡಿಕ್ಕಲ್ ಅವರು ಬುಧವಾರ ಮುಲ್ಲನಪುರಕ್ಕೆ ತೆರಳಲಿದ್ದಾರೆ. ಅಫ್ಗಾನಿಸ್ತಾನ ಎದುರಿನ ಏಕೈಕ ಟೆಸ್ಟ್ ಆಡಲಿರುವ ಭಾರತ ತಂಡವನ್ನು ಅವರು ಸೇರಿಕೊಳ್ಳಲಿದ್ದಾರೆ. </p>.<p>ಜೋಶ್ ಹೇಝಲ್ವುಡ್, ಟಿಮ್ ಡೇವಿಡ್ (ಆಸ್ಟ್ರೇಲಿಯಾ), ಜೇಕಬ್ ಡಫಿ (ನ್ಯೂಜಿಲೆಂಡ್) ಹಾಗೂ ರೊಮೆರಿಯೊ ಶೆಫರ್ಡ್ (ವೆಸ್ಟ್ ಇಂಡೀಸ್) ಅವರು ಕೂಡ ತಮ್ಮ ರಾಷ್ಟ್ರೀಯ ತಂಡಗಳನ್ನು ಸೇರಿಕೊಳ್ಳಲು ಪ್ರಯಾಣಿಸಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>