<p><strong>ನವದೆಹಲಿ</strong>: ಭಾರತ ಮತ್ತು ಬಾಂಗ್ಲಾದೇಶ ನಡುವಣ ಟಿ20 ಸರಣಿಯ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಿದ್ದು, ಸರಣಿಯ ಮೊದಲ ಪಂದ್ಯವು ಅಕ್ಟೋಬರ್ 6ರಂದು ಧರ್ಮಶಾಲಾ ಬದಲು ಗ್ವಾಲಿಯರ್ನಲ್ಲಿ ನಡೆಯಲಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಮಂಗಳವಾರ ತಿಳಿಸಿದೆ.</p>.<p>ಹಿಮಾಚಲಪ್ರದೇಶ ಕ್ರಿಕೆಟ್ ಸಂಸ್ಥೆ, ಧರ್ಮಶಾಲಾದ ಕ್ರೀಡಾಂಗಣವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿ ಕೈಗೆತ್ತಿಕೊಂಡಿರುವ ಕಾರಣ ಈ ಬದಲಾವಣೆ ಮಾಡಲಾಗಿದೆ ಎಂದು ಮಂಡಳಿಯ ಮಾಧ್ಯಮ ಪ್ರಕಟಣೆ ತಿಳಿಸಿದೆ.</p>.<p>ಇದು ಗ್ವಾಲಿಯರ್ನ ಹೊಸ, ಶ್ರೀಮಂತ್ ಮಾಧವರಾವ್ ಸಿಂಧ್ಯಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಅಂತರರಾಷ್ಟ್ರೀಯ ಪಂದ್ಯವಾಗಲಿದೆ. 2010ರಲ್ಲಿ ಭಾರತ– ದಕ್ಷಿಣ ಆಫ್ರಿಕಾ ಪಂದ್ಯದ ನಂತರ ಈ ನಗರದಲ್ಲಿ ಯಾವುದೇ ಪ್ರಮುಖ ಪಂದ್ಯ ನಡೆದಿಲ್ಲ. ಆ ಪಂದ್ಯದಲ್ಲಿ ಕ್ರಿಕೆಟ್ ಕಣ್ಮಣಿ ಸಚಿನ್ ತೆಂಡೂಲ್ಕರ್ ದ್ವಿಶತಕ ಹೊಡೆದಿದ್ದು, ಈ ಸಾಧನೆಗೈದ ಮೊದಲ ಬ್ಯಾಟರ್ ಎನಿಸಿದ್ದರು.</p>.<p>ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿಯ ಪಂದ್ಯಗಳ ಆತಿಥ್ಯದಲ್ಲೂ ಬದಲಾವಣೆ ಆಗಿದೆ. ಮೊದಲ ಟಿ20 ಪಂದ್ಯದ ಆತಿಥ್ಯ ವಹಿಸಬೇಕಿದ್ದ ಚೆನ್ನೈ, ಪರಿಷ್ಕೃತ ಪಟ್ಟಿಯ ಪ್ರಕಾರ ಎರಡನೇ ಟಿ20 ಪಂದ್ಯದ ಆತಿಥ್ಯ ವಹಿಸಲಿದೆ. ಕೋಲ್ಕತ್ತದ ಈಡನ್ಗಾರ್ಡನ್ನಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ.</p>.<p>ಮೊದಲ ಟಿ20 ಪಂದ್ಯ ಜನವರಿ 22ರಂದು (2025) ನಡೆಯಲಿದೆ. ಎರಡನೇ ಏಕದಿನ ಪಂದ್ಯವನ್ನು ಜನವರಿ 25ರಂದು ನಿಗದಿ ಮಾಡಲಾಗಿದೆ.</p>.<p>25ರಂದು ಪಂದ್ಯ ನಡೆಸಿದರೆ ತಮಗೆ ಗಣರಾಜ್ಯೋತ್ಸವ ಸಿದ್ಧತೆಗೆ ಭದ್ರತೆ ಒದಗಿಸಲು ಸಮಸ್ಯೆಯಾಗುವ ಸಾಧ್ಯತೆಯಿದೆ ಎಂದು ಕೋಲ್ಕತ್ತ ಪೊಲೀಸರು ಬಂಗಾಳ ಕ್ರಿಕೆಟ್ ಸಂಸ್ಥೆಗೆ ವಿನಂತಿ ಮಾಡಿದ ಕಾರಣ ವೇಳಾಪಟ್ಟಿಯಲ್ಲಿ ಬದಲಾವಣೆ ತರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತ ಮತ್ತು ಬಾಂಗ್ಲಾದೇಶ ನಡುವಣ ಟಿ20 ಸರಣಿಯ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಿದ್ದು, ಸರಣಿಯ ಮೊದಲ ಪಂದ್ಯವು ಅಕ್ಟೋಬರ್ 6ರಂದು ಧರ್ಮಶಾಲಾ ಬದಲು ಗ್ವಾಲಿಯರ್ನಲ್ಲಿ ನಡೆಯಲಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಮಂಗಳವಾರ ತಿಳಿಸಿದೆ.</p>.<p>ಹಿಮಾಚಲಪ್ರದೇಶ ಕ್ರಿಕೆಟ್ ಸಂಸ್ಥೆ, ಧರ್ಮಶಾಲಾದ ಕ್ರೀಡಾಂಗಣವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿ ಕೈಗೆತ್ತಿಕೊಂಡಿರುವ ಕಾರಣ ಈ ಬದಲಾವಣೆ ಮಾಡಲಾಗಿದೆ ಎಂದು ಮಂಡಳಿಯ ಮಾಧ್ಯಮ ಪ್ರಕಟಣೆ ತಿಳಿಸಿದೆ.</p>.<p>ಇದು ಗ್ವಾಲಿಯರ್ನ ಹೊಸ, ಶ್ರೀಮಂತ್ ಮಾಧವರಾವ್ ಸಿಂಧ್ಯಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಅಂತರರಾಷ್ಟ್ರೀಯ ಪಂದ್ಯವಾಗಲಿದೆ. 2010ರಲ್ಲಿ ಭಾರತ– ದಕ್ಷಿಣ ಆಫ್ರಿಕಾ ಪಂದ್ಯದ ನಂತರ ಈ ನಗರದಲ್ಲಿ ಯಾವುದೇ ಪ್ರಮುಖ ಪಂದ್ಯ ನಡೆದಿಲ್ಲ. ಆ ಪಂದ್ಯದಲ್ಲಿ ಕ್ರಿಕೆಟ್ ಕಣ್ಮಣಿ ಸಚಿನ್ ತೆಂಡೂಲ್ಕರ್ ದ್ವಿಶತಕ ಹೊಡೆದಿದ್ದು, ಈ ಸಾಧನೆಗೈದ ಮೊದಲ ಬ್ಯಾಟರ್ ಎನಿಸಿದ್ದರು.</p>.<p>ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿಯ ಪಂದ್ಯಗಳ ಆತಿಥ್ಯದಲ್ಲೂ ಬದಲಾವಣೆ ಆಗಿದೆ. ಮೊದಲ ಟಿ20 ಪಂದ್ಯದ ಆತಿಥ್ಯ ವಹಿಸಬೇಕಿದ್ದ ಚೆನ್ನೈ, ಪರಿಷ್ಕೃತ ಪಟ್ಟಿಯ ಪ್ರಕಾರ ಎರಡನೇ ಟಿ20 ಪಂದ್ಯದ ಆತಿಥ್ಯ ವಹಿಸಲಿದೆ. ಕೋಲ್ಕತ್ತದ ಈಡನ್ಗಾರ್ಡನ್ನಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ.</p>.<p>ಮೊದಲ ಟಿ20 ಪಂದ್ಯ ಜನವರಿ 22ರಂದು (2025) ನಡೆಯಲಿದೆ. ಎರಡನೇ ಏಕದಿನ ಪಂದ್ಯವನ್ನು ಜನವರಿ 25ರಂದು ನಿಗದಿ ಮಾಡಲಾಗಿದೆ.</p>.<p>25ರಂದು ಪಂದ್ಯ ನಡೆಸಿದರೆ ತಮಗೆ ಗಣರಾಜ್ಯೋತ್ಸವ ಸಿದ್ಧತೆಗೆ ಭದ್ರತೆ ಒದಗಿಸಲು ಸಮಸ್ಯೆಯಾಗುವ ಸಾಧ್ಯತೆಯಿದೆ ಎಂದು ಕೋಲ್ಕತ್ತ ಪೊಲೀಸರು ಬಂಗಾಳ ಕ್ರಿಕೆಟ್ ಸಂಸ್ಥೆಗೆ ವಿನಂತಿ ಮಾಡಿದ ಕಾರಣ ವೇಳಾಪಟ್ಟಿಯಲ್ಲಿ ಬದಲಾವಣೆ ತರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>