ನವದೆಹಲಿ: ಭಾರತ ತಂಡದ ಎಡಗೈ ಆಟಗಾರ ರಿಷಬ್ ಪಂತ್ ಅವರ ಬಹುನಿರೀಕ್ಷಿತ ಐಪಿಎಲ್ ಟೂರ್ನಿಗೆ ಪುನರಾಗಮನ ಸನ್ನಿಹಿತವಾಗಿದೆ. ರಿಷಭ್ ಪಂತ್ ಪುನರಾಗಮನ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರತಿಕ್ರಿಯಿಸಿದೆ.
ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಭಾಗಿಯಾಗಿದ್ದ ರಿಷಭ್ ಪಂತ್ 14 ತಿಂಗಳ ಬಳಿಕ ಮ್ಯಾಚ್ ಫಿಟ್ನೆಸ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಬಿಸಿಸಿಐ ‘ಎಕ್ಸ್’ನಲ್ಲಿ ಮಾಹಿತಿ ನೀಡಿದೆ.
ರಿಷಭ್ ಪಂತ್ ಅವರು ಮುಂಬರುವ ಐಪಿಎಲ್ ಆವೃತ್ತಿಯ ಡೆಲ್ಲಿ ಕ್ಯಾಪಿಟಲ್ಸ್ಗೆ ನಾಯಕರಾಗಲು ಸಿದ್ಧರಾಗಿದ್ದಾರೆ ಎಂದು ತಂಡದ ಮಾಲೀಕ ಪಾರ್ಥ್ ಜಿಂದಾಲ್ ತಿಳಿಸಿದ್ದಾರೆ.
2022ರ ಡಿಸೆಂಬರ್ನಲ್ಲಿ ಪಂತ್ ಅವರು ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಡೆಹ್ರಾಡೂನ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ 2023ರ ಏಕದಿನ ವಿಶ್ವಕಪ್ ಸೇರಿದಂತೆ ಹಲವು ಸರಣಿಗಳಿಂದ ಹೊರಗುಳಿದಿದ್ದರು.