<p><strong>ಮುಂಬೈ :</strong> ರಾಜಕೋಟ್ನಲ್ಲಿ ಶುಕ್ರವಾರ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ಗಾಯಾಳು ವಿಕೆಟ್ ಕೀಪರ್ ರಿಷಭ್ ಪಂತ್ ಆಡುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ.</p>.<p>ಮುಂಬೈನಲ್ಲಿ ಮಂಗಳವಾರ ಮೊದಲ ಪಂದ್ಯದ ವೇಳೆ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ಬೌಲಿಂಗ್ನಲ್ಲಿ ಬೌನ್ಸರ್ ಹೆಲ್ಮೆಟ್ಗೆ ಅಪ್ಪಳಿಸಿದ ಕಾರಣ ಅವರು ಗಾಯಗೊಂಡಿದ್ದರು.</p>.<p>ಭಾರತ ತಂಡ ಬುಧವಾರ ರಾಜಕೋಟ್ಗೆ ಬಂದಿಳಿಯಿತು. ಇನ್ನೊಂದೆಡೆ ಪಂತ್, ಚಿಕಿತ್ಸೆಗಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ತೆರಳಲಿದ್ದಾರೆ.</p>.<p>ಗಾಯಾಳುಗಳಿಗೆ (ಕಂಕಷನ್) ಸಂಬಂಧಿಸಿ ಐಸಿಸಿ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿದ ಮೇಲೆ ಅವರು ಪಂದ್ಯಕ್ಕೆ ಅಲಭ್ಯರಾದ ದೇಶದ ಮೊದಲ ಅಂತರರಾಷ್ಟ್ರೀಯ ಆಟಗಾರ ಎನಿಸಿದರು.</p>.<p>‘ಪಂತ್ ಎರಡನೇ ಪಂದ್ಯಕ್ಕೆ ಲಭ್ಯರಿರುವುದಿಲ್ಲ. ಬೆಂಗಳೂರಿನ ಅಕಾಡೆಮಿಯಲ್ಲಿ ಅವರು ಆರೈಕೆ ವೇಳೆ ಹೇಗೆಸ್ಪಂದಿಸುತ್ತಾರೆ ಎಂಬುದರ ಮೇಲೆ, ಮೂರನೇ ಪಂದ್ಯದಲ್ಲಿ ಅವರು ಆಡುವ ನಿರ್ಧಾರ ಆಗಲಿದೆ’ ಎಂದು ಹೇಳಿಕೆ ತಿಳಿಸಿದೆ.</p>.<p>ಮೂರನೇ ಪಂದ್ಯ ಜನವರಿ 19ರಂದು ಬೆಂಗಳೂರಿನಲ್ಲೇ ನಡೆಯಲಿರುವುದರಿಂದ, ಮುಂದಿನ 72 ಗಂಟೆಗಳ ನಂತರ ಅವರ ಲಭ್ಯತೆ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.</p>.<p>ಪಂತ್ ಮುಂಬೈನಲ್ಲಿ 33 ಎಸೆತಗಳಲ್ಲಿ 28 ರನ್ ಗಳಿಸಿದ್ದರು. ಗಾಯಾಳಾದ ಕಾರಣ ರಾಹುಲ್ ವಿಕೆಟ್ ಕೀಪಿಂಗ್ ಮಾಡಿದ್ದು, ಮನಿಷ್ ಪಾಂಡೆ ಬದಲಿ ಆಟಗಾರನಾಗಿ ಕಣಕ್ಕೆ ಇಳಿದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ :</strong> ರಾಜಕೋಟ್ನಲ್ಲಿ ಶುಕ್ರವಾರ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ಗಾಯಾಳು ವಿಕೆಟ್ ಕೀಪರ್ ರಿಷಭ್ ಪಂತ್ ಆಡುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ.</p>.<p>ಮುಂಬೈನಲ್ಲಿ ಮಂಗಳವಾರ ಮೊದಲ ಪಂದ್ಯದ ವೇಳೆ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ಬೌಲಿಂಗ್ನಲ್ಲಿ ಬೌನ್ಸರ್ ಹೆಲ್ಮೆಟ್ಗೆ ಅಪ್ಪಳಿಸಿದ ಕಾರಣ ಅವರು ಗಾಯಗೊಂಡಿದ್ದರು.</p>.<p>ಭಾರತ ತಂಡ ಬುಧವಾರ ರಾಜಕೋಟ್ಗೆ ಬಂದಿಳಿಯಿತು. ಇನ್ನೊಂದೆಡೆ ಪಂತ್, ಚಿಕಿತ್ಸೆಗಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ತೆರಳಲಿದ್ದಾರೆ.</p>.<p>ಗಾಯಾಳುಗಳಿಗೆ (ಕಂಕಷನ್) ಸಂಬಂಧಿಸಿ ಐಸಿಸಿ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿದ ಮೇಲೆ ಅವರು ಪಂದ್ಯಕ್ಕೆ ಅಲಭ್ಯರಾದ ದೇಶದ ಮೊದಲ ಅಂತರರಾಷ್ಟ್ರೀಯ ಆಟಗಾರ ಎನಿಸಿದರು.</p>.<p>‘ಪಂತ್ ಎರಡನೇ ಪಂದ್ಯಕ್ಕೆ ಲಭ್ಯರಿರುವುದಿಲ್ಲ. ಬೆಂಗಳೂರಿನ ಅಕಾಡೆಮಿಯಲ್ಲಿ ಅವರು ಆರೈಕೆ ವೇಳೆ ಹೇಗೆಸ್ಪಂದಿಸುತ್ತಾರೆ ಎಂಬುದರ ಮೇಲೆ, ಮೂರನೇ ಪಂದ್ಯದಲ್ಲಿ ಅವರು ಆಡುವ ನಿರ್ಧಾರ ಆಗಲಿದೆ’ ಎಂದು ಹೇಳಿಕೆ ತಿಳಿಸಿದೆ.</p>.<p>ಮೂರನೇ ಪಂದ್ಯ ಜನವರಿ 19ರಂದು ಬೆಂಗಳೂರಿನಲ್ಲೇ ನಡೆಯಲಿರುವುದರಿಂದ, ಮುಂದಿನ 72 ಗಂಟೆಗಳ ನಂತರ ಅವರ ಲಭ್ಯತೆ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.</p>.<p>ಪಂತ್ ಮುಂಬೈನಲ್ಲಿ 33 ಎಸೆತಗಳಲ್ಲಿ 28 ರನ್ ಗಳಿಸಿದ್ದರು. ಗಾಯಾಳಾದ ಕಾರಣ ರಾಹುಲ್ ವಿಕೆಟ್ ಕೀಪಿಂಗ್ ಮಾಡಿದ್ದು, ಮನಿಷ್ ಪಾಂಡೆ ಬದಲಿ ಆಟಗಾರನಾಗಿ ಕಣಕ್ಕೆ ಇಳಿದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>