ದೆಹಲಿ-ಡೆಹ್ರಾಡೂನ್ ಹೆದ್ದಾರಿ ಯಲ್ಲಿ ಈಚೆಗೆ ಸಂಭವಿಸಿದ್ದ ಕಾರು ಅಪಘಾತದಲ್ಲಿ ಪಂತ್ ಗಾಯ ಗೊಂಡಿದ್ದರು. ಪಂತ್ ಅವರ ಮುಖದ ಗಾಯಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿದೆ. ಅವರ ಕಾಲುಗಳ ಅಸ್ಥಿಮಜ್ಜೆಯಲ್ಲಿ ಊತ ಇರುವುದು ಎಂಆರ್ಐ ಸ್ಕ್ಯಾನಿಂಗ್ನಲ್ಲಿ ಪತ್ತೆಯಾಗಿದೆ. ಆದ್ದರಿಂದ ಉನ್ನತಮಟ್ಟ ಚಿಕಿತ್ಸೆಗಾಗಿ ಅವರನ್ನು ಮುಂಬೈಗೆ ಸ್ಥಳಾಂತರಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ.