ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಡೆದಾಡಲು ಆರಂಭಿಸಿದ ರಿಷಭ್ ಪಂತ್ ಅವರಿಂದ ಸ್ಫೂರ್ತಿದಾಯಕ ಸಂದೇಶ

Last Updated 11 ಫೆಬ್ರುವರಿ 2023, 2:47 IST
ಅಕ್ಷರ ಗಾತ್ರ

ನವದೆಹಲಿ: ಕಾರು ಅಪಘಾತದಿಂದ ಪವಾಡ ಸದೃಶ್ಯ ಪಾರಾಗಿ ಸದ್ಯ ಚೇತರಿಕೆಯ ಹಂತದಲ್ಲಿರುವ ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ನಡೆದಾಡಲು ಆರಂಭಿಸಿದ್ದಾರೆ.

ಈ ಕುರಿತು ಸ್ವತಃ ರಿಷಭ್ ಪಂತ್ ಅವರೇ ಚಿತ್ರ ಹಂಚಿದ್ದು, ಸ್ಫೂರ್ತಿದಾಯಕ ಸಂದೇಶವನ್ನು ಬರೆದುಕೊಂಡಿದ್ದಾರೆ.

'ಒಂದು ಹೆಜ್ಜೆ ಮುಂದಕ್ಕೆ, ಒಂದು ಹೆಜ್ಜೆ ದೃಢ, ಒಂದು ಹೆಜ್ಜೆ ಚೇತರಿಕೆಯತ್ತ' ಎಂದು ಪಂತ್ ತಮ್ಮ ಅಭಿಮಾನಿಗಳಿಗಾಗಿ ಸಂದೇಶ ಹಂಚಿದ್ದಾರೆ.

2022 ಡಿಸೆಂಬರ್ 30ರಂದು ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ತಮ್ಮ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಹೊಸ ವರ್ಷಾಚರಣೆಗಾಗಿ ಪಂತ್ ರೂರ್ಕಿಯಲ್ಲಿರುವ ಮನೆಗೆ ಪ್ರಯಾಣಿಸುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿತ್ತು.

ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತ್ತು. ಅದೃಷ್ಟವಶಾತ್ ಪಂತ್ ಪ್ರಾಣಾಪಾಯದಿಂದ ಪಾರಾಗಿದ್ದರು.

ಪಂತ್ ಅವರ ತಲೆ, ಬೆನ್ನು, ಮಂಡಿ, ಕಾಲಿಗೆ ಗಾಯಗಳಾಗಿದ್ದವು. ಬಲಗಾಲಿನ ಮಂಡಿಯ ಲಿಗಮೆಂಟ್ (ಅಸ್ಥಿರಜ್ಜು) ಗಾಯದಿಂದ ಚೇತರಿಸಿಕೊಳ್ಳಲು ಹಲವು ತಿಂಗಳುಗಳು ಬೇಕಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT