ಇಂಡಿಯನ್ ಪ್ರೀಮಿಯರ್ ಲೀಗ್ನ ಈ ಬಾರಿಯ ಸೀಸನ್ನಿಂದ ಶ್ರೇಯಸ್ ಐಯ್ಯರ್ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ. ಗಾಯದ ಸಮಸ್ಯೆಯಿಂದ ಶ್ರೇಯಸ್ ಐಯ್ಯರ್ ಬಳಲುತ್ತಿದ್ದು, ಈ ಬಾರಿಯ ಐಪಿಎಲ್ ಸೀಸನ್ನಲ್ಲಿ ಅವರು ಆಟವಾಡುತ್ತಿಲ್ಲ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡ ಮಂಗಳವಾರ ಹೇಳಿಕೆ ನೀಡಿದೆ.
ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ, ವಿಕೆಟ್ಕೀಪರ್ ಮತ್ತು ಬ್ಯಾಟ್ಸ್ಮನ್ ರಿಷಬ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ರಿಷಬ್ ಕ್ಯಾಪ್ಟನ್ ಸ್ಥಾನ ವಹಿಸಿಕೊಳ್ಳುತ್ತಿರುವ ಕುರಿತು ಡೆಲ್ಲಿ ಕ್ಯಾಪಿಟಲ್ಸ್ ಟ್ವೀಟ್ ಮಾಡಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಪಂದ್ಯದಲ್ಲಿ ಶ್ರೇಯಸ್ ಎಡಭುಜಕ್ಕೆ ಗಾಯವಾಗಿದೆ.
ಶ್ರೇಯಸ್ರನ್ನು ನಾವು ಮಿಸ್ ಮಾಡಿಕೊಳ್ಳುತ್ತೇವೆ, ಅವರು ಬೇಗನೆ ಗುಣಮುಖರಾಗಿ ಮತ್ತೆ ತಂಡಕ್ಕೆ ಮರಳುವಂತಾಗಲಿ ಎಂದು ಡೆಲ್ಲಿ ಕ್ಯಾಪಿಟಲ್ಸ್ ಹೇಳಿದೆ.