<p><strong>ನವದೆಹಲಿ:</strong> ಕೇಂದ್ರ ಸರ್ಕಾರದ ಮಾಜಿ ಸಚಿವ ದಿವಂಗತ ಅರುಣ್ ಜೇಟ್ಲಿ ಅವರ ಮಗ ರೋಹನ್ ದೆಹಲಿ ಡಿಸ್ಟ್ರಿಕ್ಟ್ಸ್ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.</p>.<p>ಸಂಸದ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರ ಸೋದರಮಾವ ಪವನ್ ಗುಲಾಟಿ ಅವರು ಖಜಾಂಚಿ ಸ್ಥಾನದ ಆಕಾಂಕ್ಷಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. </p>.<p>ಬುಧವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಅರುಣ್ ಜೇಟ್ಲಿ ಅವರು ಹೋದ ವರ್ಷ ನಿಧನರಾಗಿದ್ದರು. ಕೆಲವು ವರ್ಷಗಳ ಹಿಂದೆ ಡಿಡಿಸಿಎ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಅವರ ಹಾದಿಯಲ್ಲಿ ಮಗ ರೋಹನ್ ಇದ್ದಾರೆ.</p>.<p>‘ಇವತ್ತು ನಾಮಪತ್ರ ಸಲ್ಲಿಸಿದ್ದೇನೆ. ಡಿಡಿಸಿಎ ಸುಧಾರಣೆಗೆ ಕಾರ್ಯನಿರ್ವಹಿಸುವ ಗುರಿ ನನ್ನದು. ಈ ಸಂಸ್ಥೆಯ ಘನತೆಯನ್ನು ಮರಳಿ ಗಳಿಸಿಕೊಡುವುದು ನನ್ನ ಧ್ಯೇಯ. ಸದಸ್ಯರು ನನ್ನನ್ನು ಬೆಂಬಲಿಸುತ್ತಾರೆ’ ಎಂದು 31 ವರ್ಷದ ರೋಹನ್ ಭರವಸೆ ವ್ಯಕ್ತಪಡಿಸಿದರು.</p>.<p>ಈ ಮುಂಚೆ ಅಧ್ಯಕ್ಷಸ್ಥಾನದ ಸ್ಪರ್ಧಿಯಾಗಿದ್ದ ಸುನೀಲ್ ಗೋಯೆಲ್ ಅವರು ತಮ್ಮ ನಾಮಪತ್ರ ಮರಳಿ ಪಡೆದಿದ್ದಾರೆ. ಆದ್ದರಿಂದ ಈಗ ಕಣದಲ್ಲಿ ರೋಹನ್ ಒಬ್ಬರೇ ಉಳಿದಂತಾಗಿದೆ. ಅವರು ವೃತ್ತಿಯಿಂದ ವಕೀಲರಾಗಿದ್ದಾರೆ.</p>.<p>‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪರ್ಧೆ ಇರುವುದು ಒಳ್ಳೆಯದು. ಉತ್ತಮ ವ್ಯಕ್ತಿಗಳನ್ನು ಆಡಳಿತಕ್ಕೆ ತರಲು ಇದು ಅವಶ್ಯಕ’ ಎಂದು ರೋಹನ್ ಹೇಳಿದ್ಧಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರ ಸರ್ಕಾರದ ಮಾಜಿ ಸಚಿವ ದಿವಂಗತ ಅರುಣ್ ಜೇಟ್ಲಿ ಅವರ ಮಗ ರೋಹನ್ ದೆಹಲಿ ಡಿಸ್ಟ್ರಿಕ್ಟ್ಸ್ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.</p>.<p>ಸಂಸದ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರ ಸೋದರಮಾವ ಪವನ್ ಗುಲಾಟಿ ಅವರು ಖಜಾಂಚಿ ಸ್ಥಾನದ ಆಕಾಂಕ್ಷಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. </p>.<p>ಬುಧವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಅರುಣ್ ಜೇಟ್ಲಿ ಅವರು ಹೋದ ವರ್ಷ ನಿಧನರಾಗಿದ್ದರು. ಕೆಲವು ವರ್ಷಗಳ ಹಿಂದೆ ಡಿಡಿಸಿಎ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಅವರ ಹಾದಿಯಲ್ಲಿ ಮಗ ರೋಹನ್ ಇದ್ದಾರೆ.</p>.<p>‘ಇವತ್ತು ನಾಮಪತ್ರ ಸಲ್ಲಿಸಿದ್ದೇನೆ. ಡಿಡಿಸಿಎ ಸುಧಾರಣೆಗೆ ಕಾರ್ಯನಿರ್ವಹಿಸುವ ಗುರಿ ನನ್ನದು. ಈ ಸಂಸ್ಥೆಯ ಘನತೆಯನ್ನು ಮರಳಿ ಗಳಿಸಿಕೊಡುವುದು ನನ್ನ ಧ್ಯೇಯ. ಸದಸ್ಯರು ನನ್ನನ್ನು ಬೆಂಬಲಿಸುತ್ತಾರೆ’ ಎಂದು 31 ವರ್ಷದ ರೋಹನ್ ಭರವಸೆ ವ್ಯಕ್ತಪಡಿಸಿದರು.</p>.<p>ಈ ಮುಂಚೆ ಅಧ್ಯಕ್ಷಸ್ಥಾನದ ಸ್ಪರ್ಧಿಯಾಗಿದ್ದ ಸುನೀಲ್ ಗೋಯೆಲ್ ಅವರು ತಮ್ಮ ನಾಮಪತ್ರ ಮರಳಿ ಪಡೆದಿದ್ದಾರೆ. ಆದ್ದರಿಂದ ಈಗ ಕಣದಲ್ಲಿ ರೋಹನ್ ಒಬ್ಬರೇ ಉಳಿದಂತಾಗಿದೆ. ಅವರು ವೃತ್ತಿಯಿಂದ ವಕೀಲರಾಗಿದ್ದಾರೆ.</p>.<p>‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪರ್ಧೆ ಇರುವುದು ಒಳ್ಳೆಯದು. ಉತ್ತಮ ವ್ಯಕ್ತಿಗಳನ್ನು ಆಡಳಿತಕ್ಕೆ ತರಲು ಇದು ಅವಶ್ಯಕ’ ಎಂದು ರೋಹನ್ ಹೇಳಿದ್ಧಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>