<p><strong>ನ್ಯೂಯಾರ್ಕ್</strong>: ಇಲ್ಲಿನ ನೂತನ ಕ್ರಿಕೆಟ್ ಮೈದಾನದಲ್ಲಿ ನಡೆದ ಟಿ20 ಕ್ರಿಕೆಟ್ ವಿಶ್ವಕಪ್ನ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ 60 ರನ್ಗಳ ಭರ್ಜರಿ ಜಯ ದಾಖಲಿಸಿದೆ. </p><p>ಹೊಸ ಮೈದಾನದಲ್ಲಿ ಮೊದಲ ದಿನವೇ ಭದ್ರತಾ ವೈಫಲ್ಯ ಸಂಭವಿಸಿದೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ಭೇಟಿಯಾಗಲು ಅಭಿಮಾನಿಯೊಬ್ಬ ಮೈದಾನದೊಳಕ್ಕೆ ನುಗ್ಗಿದ್ದಾನೆ. ಬಾಂಗ್ಲಾದೇಶದ ಚೇಸಿಂಗ್ ವೇಳೆ ಈ ಘಟನೆ ನಡೆದಿದೆ. ಮೈದಾನಕ್ಕೆ ನುಗ್ಗಿದ ಅಭಿಮಾನಿ ರೋಹಿತ್ ಶರ್ಮಾ ಅವರನ್ನು ತಬ್ಬಿಕೊಂಡಿದ್ದಾನೆ. ಬಳಿಕ, ಆತನನ್ನು ಹಿಡಿದು ನೆಲಕ್ಕೆ ಕೆಡವಿದ ಪೊಲೀಸರು ಬೇಡಿ ಹಾಕಿಕೊಂಡು ಕರೆದೊಯ್ದಿದ್ದಾರೆ.</p> . <p>ಈ ನಡುವೆ, ಅಭಿಮಾನಿಗಳ ಜೊತೆ ಕಠಿಣವಾಗಿ ವರ್ತಿಸಬೇಡಿ, ಅವರಿಗೆ ನೋವು ಮಾಡಬೇಡಿ ಎಂದು ರೋಹಿತ್ ಹೇಳಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.</p><p>ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಭಾರತ ತಂಡ ರಿಷಭ್ ಪಂತ್ ಅವರ 53 ರನ್, ಹಾರ್ದಿಕ್ ಪಾಂಡ್ಯ ಗಳಿಸಿದ 40 ರನ್ ನೆರವಿನಿಂದ 182 ರನ್ ಕಲೆಹಾಕಿತ್ತು. ಈ ಗುರಿ ಬೆನ್ನತ್ತಿದ ಬಾಂಗ್ಲಾ ತಂಡವು 20 ಓವರ್ ಅಂತ್ಯಕ್ಕೆ 9 ವಿಕೆಟ್ ಕಳೆದುಕೊಂಡು 122 ರನ್ ಗಳಿಸಲಷ್ಟೇ ಶಕ್ತವಾಯಿತು.</p><p>ಭಾರತ ತಂಡವು ಟಿ–20 ವಿಶ್ವಕಪ್ ಟೂರ್ನಿಯ ತನ್ನ ಮೊದಲ ಪಂದ್ಯಲ್ಲಿ ಇದೇ ಮೈದಾನದಲ್ಲಿ ಜೂನ್ 5ರಂದು ಐರ್ಲೆಂಡ್ ವಿರುದ್ಧ ಸೆಣಸಲಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯೂಯಾರ್ಕ್</strong>: ಇಲ್ಲಿನ ನೂತನ ಕ್ರಿಕೆಟ್ ಮೈದಾನದಲ್ಲಿ ನಡೆದ ಟಿ20 ಕ್ರಿಕೆಟ್ ವಿಶ್ವಕಪ್ನ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ 60 ರನ್ಗಳ ಭರ್ಜರಿ ಜಯ ದಾಖಲಿಸಿದೆ. </p><p>ಹೊಸ ಮೈದಾನದಲ್ಲಿ ಮೊದಲ ದಿನವೇ ಭದ್ರತಾ ವೈಫಲ್ಯ ಸಂಭವಿಸಿದೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ಭೇಟಿಯಾಗಲು ಅಭಿಮಾನಿಯೊಬ್ಬ ಮೈದಾನದೊಳಕ್ಕೆ ನುಗ್ಗಿದ್ದಾನೆ. ಬಾಂಗ್ಲಾದೇಶದ ಚೇಸಿಂಗ್ ವೇಳೆ ಈ ಘಟನೆ ನಡೆದಿದೆ. ಮೈದಾನಕ್ಕೆ ನುಗ್ಗಿದ ಅಭಿಮಾನಿ ರೋಹಿತ್ ಶರ್ಮಾ ಅವರನ್ನು ತಬ್ಬಿಕೊಂಡಿದ್ದಾನೆ. ಬಳಿಕ, ಆತನನ್ನು ಹಿಡಿದು ನೆಲಕ್ಕೆ ಕೆಡವಿದ ಪೊಲೀಸರು ಬೇಡಿ ಹಾಕಿಕೊಂಡು ಕರೆದೊಯ್ದಿದ್ದಾರೆ.</p> . <p>ಈ ನಡುವೆ, ಅಭಿಮಾನಿಗಳ ಜೊತೆ ಕಠಿಣವಾಗಿ ವರ್ತಿಸಬೇಡಿ, ಅವರಿಗೆ ನೋವು ಮಾಡಬೇಡಿ ಎಂದು ರೋಹಿತ್ ಹೇಳಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.</p><p>ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಭಾರತ ತಂಡ ರಿಷಭ್ ಪಂತ್ ಅವರ 53 ರನ್, ಹಾರ್ದಿಕ್ ಪಾಂಡ್ಯ ಗಳಿಸಿದ 40 ರನ್ ನೆರವಿನಿಂದ 182 ರನ್ ಕಲೆಹಾಕಿತ್ತು. ಈ ಗುರಿ ಬೆನ್ನತ್ತಿದ ಬಾಂಗ್ಲಾ ತಂಡವು 20 ಓವರ್ ಅಂತ್ಯಕ್ಕೆ 9 ವಿಕೆಟ್ ಕಳೆದುಕೊಂಡು 122 ರನ್ ಗಳಿಸಲಷ್ಟೇ ಶಕ್ತವಾಯಿತು.</p><p>ಭಾರತ ತಂಡವು ಟಿ–20 ವಿಶ್ವಕಪ್ ಟೂರ್ನಿಯ ತನ್ನ ಮೊದಲ ಪಂದ್ಯಲ್ಲಿ ಇದೇ ಮೈದಾನದಲ್ಲಿ ಜೂನ್ 5ರಂದು ಐರ್ಲೆಂಡ್ ವಿರುದ್ಧ ಸೆಣಸಲಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>