ಈ ನಡುವೆ, ಅಭಿಮಾನಿಗಳ ಜೊತೆ ಕಠಿಣವಾಗಿ ವರ್ತಿಸಬೇಡಿ, ಅವರಿಗೆ ನೋವು ಮಾಡಬೇಡಿ ಎಂದು ರೋಹಿತ್ ಹೇಳಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಭಾರತ ತಂಡ ರಿಷಭ್ ಪಂತ್ ಅವರ 53 ರನ್, ಹಾರ್ದಿಕ್ ಪಾಂಡ್ಯ ಗಳಿಸಿದ 40 ರನ್ ನೆರವಿನಿಂದ 182 ರನ್ ಕಲೆಹಾಕಿತ್ತು. ಈ ಗುರಿ ಬೆನ್ನತ್ತಿದ ಬಾಂಗ್ಲಾ ತಂಡವು 20 ಓವರ್ ಅಂತ್ಯಕ್ಕೆ 9 ವಿಕೆಟ್ ಕಳೆದುಕೊಂಡು 122 ರನ್ ಗಳಿಸಲಷ್ಟೇ ಶಕ್ತವಾಯಿತು.
ಭಾರತ ತಂಡವು ಟಿ–20 ವಿಶ್ವಕಪ್ ಟೂರ್ನಿಯ ತನ್ನ ಮೊದಲ ಪಂದ್ಯಲ್ಲಿ ಇದೇ ಮೈದಾನದಲ್ಲಿ ಜೂನ್ 5ರಂದು ಐರ್ಲೆಂಡ್ ವಿರುದ್ಧ ಸೆಣಸಲಿದೆ.