<p><strong>ದುಬೈ: </strong>ಐಪಿಎಲ್–2020 ಟೂರ್ನಿಯ ಫೈನಲ್ ಪಂದ್ಯ ಇಂದು ದುಬೈನಲ್ಲಿ ನಡೆಯಲಿದ್ದು, ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿವೆ. ಈ ಬಾರಿಯ ಐಪಿಎಲ್ನಲ್ಲಿ ಉಭಯ ತಂಡಗಳು ಮೂರು ಬಾರಿ ಮುಖಾಮುಖಿಯಾಗಿವೆ. ಮೂರೂ ಸಲ ಮುಂಬೈ ಜಯದ ನಗೆ ಬೀರಿದೆ. ಇದರಿಂದ ತಮ್ಮ ತಂಡಕ್ಕೆ ಮಾನಸಿಕವಾಗಿ ಪ್ರಯೋಜನವಾಗಲಿದೆ ಎಂದು ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾಹೇಳಿದ್ದಾರೆ.</p>.<p>ಫೈನಲ್ ಪಂದ್ಯಕ್ಕೂ ಮುನ್ನ ಮಾತನಾಡಿರುವ ರೋಹಿತ್, ‘ಹಿಂದಿನ ಗೆಲುವುಗಳಿಂದ ಮಾನಸಿಕವಾಗಿ ಸ್ವಲ್ಪ ಲಾಭವಾಗಲಿದೆ. ಆದರೆ, ಐಪಿಎಲ್ನಲ್ಲಿ ನಾವು ನೋಡಿರುವ ಪ್ರತಿದಿನವೂ ಹೊಸದಿನ. ಪ್ರತಿದಿನ ಹೊಸ ಒತ್ತಡ ಮತ್ತು ಪ್ರತಿ ಪಂದ್ಯವೂ ಹೊಸದು. ಹಾಗಾಗಿ, ಈ ಹಿಂದೆ ಏನಾಗಿದೆ ಎಂಬುದರ ಬಗ್ಗೆ ಹೆಚ್ಚು ಯೋಚಿಸಲು ಸಾಧ್ಯವಿಲ್ಲ’ ಎಂದಿದ್ದಾರೆ.</p>.<p>‘ಪ್ರಮಾಣಿಕವಾಗಿ ಹೇಳುವುದಾದರೆ, ನಾವು ಈ ತಂಡದ ವಿರುದ್ಧ ಹಿಂದೆ ಆಡಿದ್ದೇವೆ ಮತ್ತು ಅವರನ್ನು ಸೋಲಿಸಿದ್ದೇವೆ ಎಂಬುದನ್ನು ಯೋಚಿಸಲು ಸಾಧ್ಯವಿಲ್ಲ. ಅವರನ್ನು ಹೊಸ ಪ್ರತಿಸ್ಪರ್ಧಿ ಮತ್ತು ನಾವು ಒಂದು ತಂಡವಾಗಿ ಅವರ ವಿರುದ್ಧ ಏನು ಮಾಡಲು ಸಾಧ್ಯ ಎಂಬುದನ್ನು ಚಿಂತಿಸಬಹುದು ಅಷ್ಟೇ’ಎಂದು ತಿಳಿಸಿದ್ದಾರೆ.</p>.<p>‘ನಮ್ಮ ಯೋಜನೆ ಸರಳವಾಗಿದೆ. ಮೈದಾನದಲ್ಲಿ ಸರಿಯಾಗಿ ಆಡಲಿದ್ದೇವೆ. ಐದನೇ ಪ್ರಶಸ್ತಿಯನ್ನು ಗೆದ್ದುಕೊಳ್ಳಲಿದ್ದೇವೆ ಎಂಬ ವಿಶ್ವಾಸವಿದೆ’ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ: </strong>ಐಪಿಎಲ್–2020 ಟೂರ್ನಿಯ ಫೈನಲ್ ಪಂದ್ಯ ಇಂದು ದುಬೈನಲ್ಲಿ ನಡೆಯಲಿದ್ದು, ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿವೆ. ಈ ಬಾರಿಯ ಐಪಿಎಲ್ನಲ್ಲಿ ಉಭಯ ತಂಡಗಳು ಮೂರು ಬಾರಿ ಮುಖಾಮುಖಿಯಾಗಿವೆ. ಮೂರೂ ಸಲ ಮುಂಬೈ ಜಯದ ನಗೆ ಬೀರಿದೆ. ಇದರಿಂದ ತಮ್ಮ ತಂಡಕ್ಕೆ ಮಾನಸಿಕವಾಗಿ ಪ್ರಯೋಜನವಾಗಲಿದೆ ಎಂದು ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾಹೇಳಿದ್ದಾರೆ.</p>.<p>ಫೈನಲ್ ಪಂದ್ಯಕ್ಕೂ ಮುನ್ನ ಮಾತನಾಡಿರುವ ರೋಹಿತ್, ‘ಹಿಂದಿನ ಗೆಲುವುಗಳಿಂದ ಮಾನಸಿಕವಾಗಿ ಸ್ವಲ್ಪ ಲಾಭವಾಗಲಿದೆ. ಆದರೆ, ಐಪಿಎಲ್ನಲ್ಲಿ ನಾವು ನೋಡಿರುವ ಪ್ರತಿದಿನವೂ ಹೊಸದಿನ. ಪ್ರತಿದಿನ ಹೊಸ ಒತ್ತಡ ಮತ್ತು ಪ್ರತಿ ಪಂದ್ಯವೂ ಹೊಸದು. ಹಾಗಾಗಿ, ಈ ಹಿಂದೆ ಏನಾಗಿದೆ ಎಂಬುದರ ಬಗ್ಗೆ ಹೆಚ್ಚು ಯೋಚಿಸಲು ಸಾಧ್ಯವಿಲ್ಲ’ ಎಂದಿದ್ದಾರೆ.</p>.<p>‘ಪ್ರಮಾಣಿಕವಾಗಿ ಹೇಳುವುದಾದರೆ, ನಾವು ಈ ತಂಡದ ವಿರುದ್ಧ ಹಿಂದೆ ಆಡಿದ್ದೇವೆ ಮತ್ತು ಅವರನ್ನು ಸೋಲಿಸಿದ್ದೇವೆ ಎಂಬುದನ್ನು ಯೋಚಿಸಲು ಸಾಧ್ಯವಿಲ್ಲ. ಅವರನ್ನು ಹೊಸ ಪ್ರತಿಸ್ಪರ್ಧಿ ಮತ್ತು ನಾವು ಒಂದು ತಂಡವಾಗಿ ಅವರ ವಿರುದ್ಧ ಏನು ಮಾಡಲು ಸಾಧ್ಯ ಎಂಬುದನ್ನು ಚಿಂತಿಸಬಹುದು ಅಷ್ಟೇ’ಎಂದು ತಿಳಿಸಿದ್ದಾರೆ.</p>.<p>‘ನಮ್ಮ ಯೋಜನೆ ಸರಳವಾಗಿದೆ. ಮೈದಾನದಲ್ಲಿ ಸರಿಯಾಗಿ ಆಡಲಿದ್ದೇವೆ. ಐದನೇ ಪ್ರಶಸ್ತಿಯನ್ನು ಗೆದ್ದುಕೊಳ್ಳಲಿದ್ದೇವೆ ಎಂಬ ವಿಶ್ವಾಸವಿದೆ’ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>