<p><strong>ನವದೆಹಲಿ:</strong> ಇತ್ತೀಚಿಗೆ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಸರಣಿಯಲ್ಲಿ ಗೆಲುವು ದಾಖಲಿಸಿದ್ದೇವೆ ಎಂದು ಭಾರತ ತಂಡದ ಆಟಗಾರ ರೋಹಿತ್ ಶರ್ಮಾ ಸಮರ್ಥನೆ ಮಾಡಿರುವುದು ವಿವಾದವನ್ನು ಹುಟ್ಟು ಹಾಕಲು ಕಾರಣವಾಗಿದೆ.</p>.<p>ಕೋವಿಡ್ ಆತಂಕದಿಂದಾಗಿ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಿಂದ ಭಾರತ ಹಿಂಜರಿದ ಕಾರಣ ರದ್ದುಗೊಳಿಸಲಾಗಿತ್ತು. ಇದರಿಂದಾಗಿ ಕೊನೆಯ ಟೆಸ್ಟ್ ಆಯೋಜನೆಯ ಬಗ್ಗೆ ಅನಿಶ್ಚಿತತೆ ಮುಂದುವರಿದಿದೆ. ಈ ಕುರಿತಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿಗಳ (ಇಸಿಬಿ) ನಡುವಣ ಮಾತುಕತೆ ಜಾರಿಯಲ್ಲಿದೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/ipl-2021-rcb-will-play-more-fearlessly-as-two-more-opportunities-to-finish-top-two-virat-kohli-872530.html" itemprop="url">ಪ್ಲೇ-ಆಫ್ಗೆ ಲಗ್ಗೆಯಿಟ್ಟ ಆರ್ಸಿಬಿ ಮುಂದಿನ ಗುರಿ ಏನು? ಕೊಹ್ಲಿ ಹೇಳಿದ್ದೇನು? </a></p>.<p>ನಾಲ್ಕು ಪಂದ್ಯಗಳ ಅಂತ್ಯದ ವೇಳೆಗೆ ಭಾರತ 2-1ರ ಅಂತರದ ಮುನ್ನಡೆ ಕಾಯ್ದುಕೊಂಡಿತ್ತು. ಆದರೆ ಟೀಮ್ ಇಂಡಿಯಾ ಪಾಳಯದಲ್ಲಿ ಕೋವಿಡ್ ಕಾಣಿಸಿಕೊಂಡ ಪರಿಣಾಮ ಮ್ಯಾಂಚೆಸ್ಟರ್ನಲ್ಲಿ ಆರಂಭವಾಗಬೇಕಿದ್ದ ಅಂತಿಮ ಟೆಸ್ಟ್ ಪಂದ್ಯಕ್ಕೂ ಎರಡು ತಾಸಿಗೂ ಮುನ್ನ ಪಂದ್ಯವನ್ನು ರದ್ದುಗೊಳಿಸಲಾಯಿತು.</p>.<p>ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೋಹಿತ್ ಶರ್ಮಾ, ನನ್ನ ದೃಷ್ಟಿಯಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತ ಗೆಲುವು ದಾಖಲಿಸಿದೆ ಎಂದು ಹೇಳಿದ್ದಾರೆ.</p>.<p>'ವೈಯಕ್ತಿಕವಾಗಿ ನನಗೆ ಹಾಗೂ ನಮ್ಮ ತಂಡಕ್ಕೆ ಇದೊಂದು (ಇಂಗ್ಲೆಂಡ್) ಅತ್ಯುತ್ತಮ ಸರಣಿಯಾಗಿತ್ತು. ಕೊನೆಯ ಟೆಸ್ಟ್ ಪಂದ್ಯ ಏನಾಯಿತು ಎಂಬುದು ತಿಳಿದಿಲ್ಲ. ನಾವು ಸರಣಿಯನ್ನು ಗೆದ್ದಿದ್ದೇವೆಯೇ ಅಥವಾಅಂತಿಮ ಟೆಸ್ಟ್ ಪಂದ್ಯ ಆಯೋಜಿಸಲಾಗುತ್ತದೆಯೇ ಎಂಬುದು ತಿಳಿದಿಲ್ಲ. ಆದರೆ ನನ್ನ ದೃಷ್ಟಿಕೋನದಲ್ಲಿ ನಾವು ಸರಣಿಯನ್ನು 2-1ರಲ್ಲಿ ಗೆದ್ದಿದ್ದೇವೆ' ಎಂದಿದ್ದಾರೆ.</p>.<p>ಮುಂದಿನ ವರ್ಷ ಜುಲೈ ತಿಂಗಳಲ್ಲಿ ಇಂಗ್ಲೆಂಡ್ ಪ್ರವಾಸದ ವೇಳೆಯಲ್ಲಿ ಅಂತಿಮ ಟೆಸ್ಟ್ ಪಂದ್ಯವನ್ನು ಆಯೋಜಿಸಲು ಬಿಸಿಸಿಐ ಪ್ರಸ್ತಾಪಿಸಿದೆ. ಈ ಕುರಿತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೂಡ ಹೇಳಿಕೆ ಕೊಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇತ್ತೀಚಿಗೆ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಸರಣಿಯಲ್ಲಿ ಗೆಲುವು ದಾಖಲಿಸಿದ್ದೇವೆ ಎಂದು ಭಾರತ ತಂಡದ ಆಟಗಾರ ರೋಹಿತ್ ಶರ್ಮಾ ಸಮರ್ಥನೆ ಮಾಡಿರುವುದು ವಿವಾದವನ್ನು ಹುಟ್ಟು ಹಾಕಲು ಕಾರಣವಾಗಿದೆ.</p>.<p>ಕೋವಿಡ್ ಆತಂಕದಿಂದಾಗಿ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಿಂದ ಭಾರತ ಹಿಂಜರಿದ ಕಾರಣ ರದ್ದುಗೊಳಿಸಲಾಗಿತ್ತು. ಇದರಿಂದಾಗಿ ಕೊನೆಯ ಟೆಸ್ಟ್ ಆಯೋಜನೆಯ ಬಗ್ಗೆ ಅನಿಶ್ಚಿತತೆ ಮುಂದುವರಿದಿದೆ. ಈ ಕುರಿತಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿಗಳ (ಇಸಿಬಿ) ನಡುವಣ ಮಾತುಕತೆ ಜಾರಿಯಲ್ಲಿದೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/ipl-2021-rcb-will-play-more-fearlessly-as-two-more-opportunities-to-finish-top-two-virat-kohli-872530.html" itemprop="url">ಪ್ಲೇ-ಆಫ್ಗೆ ಲಗ್ಗೆಯಿಟ್ಟ ಆರ್ಸಿಬಿ ಮುಂದಿನ ಗುರಿ ಏನು? ಕೊಹ್ಲಿ ಹೇಳಿದ್ದೇನು? </a></p>.<p>ನಾಲ್ಕು ಪಂದ್ಯಗಳ ಅಂತ್ಯದ ವೇಳೆಗೆ ಭಾರತ 2-1ರ ಅಂತರದ ಮುನ್ನಡೆ ಕಾಯ್ದುಕೊಂಡಿತ್ತು. ಆದರೆ ಟೀಮ್ ಇಂಡಿಯಾ ಪಾಳಯದಲ್ಲಿ ಕೋವಿಡ್ ಕಾಣಿಸಿಕೊಂಡ ಪರಿಣಾಮ ಮ್ಯಾಂಚೆಸ್ಟರ್ನಲ್ಲಿ ಆರಂಭವಾಗಬೇಕಿದ್ದ ಅಂತಿಮ ಟೆಸ್ಟ್ ಪಂದ್ಯಕ್ಕೂ ಎರಡು ತಾಸಿಗೂ ಮುನ್ನ ಪಂದ್ಯವನ್ನು ರದ್ದುಗೊಳಿಸಲಾಯಿತು.</p>.<p>ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೋಹಿತ್ ಶರ್ಮಾ, ನನ್ನ ದೃಷ್ಟಿಯಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತ ಗೆಲುವು ದಾಖಲಿಸಿದೆ ಎಂದು ಹೇಳಿದ್ದಾರೆ.</p>.<p>'ವೈಯಕ್ತಿಕವಾಗಿ ನನಗೆ ಹಾಗೂ ನಮ್ಮ ತಂಡಕ್ಕೆ ಇದೊಂದು (ಇಂಗ್ಲೆಂಡ್) ಅತ್ಯುತ್ತಮ ಸರಣಿಯಾಗಿತ್ತು. ಕೊನೆಯ ಟೆಸ್ಟ್ ಪಂದ್ಯ ಏನಾಯಿತು ಎಂಬುದು ತಿಳಿದಿಲ್ಲ. ನಾವು ಸರಣಿಯನ್ನು ಗೆದ್ದಿದ್ದೇವೆಯೇ ಅಥವಾಅಂತಿಮ ಟೆಸ್ಟ್ ಪಂದ್ಯ ಆಯೋಜಿಸಲಾಗುತ್ತದೆಯೇ ಎಂಬುದು ತಿಳಿದಿಲ್ಲ. ಆದರೆ ನನ್ನ ದೃಷ್ಟಿಕೋನದಲ್ಲಿ ನಾವು ಸರಣಿಯನ್ನು 2-1ರಲ್ಲಿ ಗೆದ್ದಿದ್ದೇವೆ' ಎಂದಿದ್ದಾರೆ.</p>.<p>ಮುಂದಿನ ವರ್ಷ ಜುಲೈ ತಿಂಗಳಲ್ಲಿ ಇಂಗ್ಲೆಂಡ್ ಪ್ರವಾಸದ ವೇಳೆಯಲ್ಲಿ ಅಂತಿಮ ಟೆಸ್ಟ್ ಪಂದ್ಯವನ್ನು ಆಯೋಜಿಸಲು ಬಿಸಿಸಿಐ ಪ್ರಸ್ತಾಪಿಸಿದೆ. ಈ ಕುರಿತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೂಡ ಹೇಳಿಕೆ ಕೊಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>