<p><strong>ಮೆಲ್ಬರ್ನ್:</strong> ತಾರಾ ವರ್ಚಸ್ಸಿನ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಬುಧವಾರ ಭಾರತ ತಂಡವನ್ನು ಸೇರಿಕೊಂಡರು.</p>.<p>ಜನವರಿ 7ರಂದು ಆರಂಭವಾಗುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಅವರು ಹನ್ನೊಂದು ಆಟಗಾರರ ಬಳಗದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ. ಆದರೆ ಅವರಿಗಾಗಿ ಸ್ಥಾನ ತೆರವು ಮಾಡುವವರು ಯಾರು ಎಂಬ ಕುತೂಹಲ ಈಗ ಗರಿಗೆದರಿದೆ.</p>.<p>ಕಳೆದ ಎರಡೂ ಟೆಸ್ಟ್ಗಳಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿರುವ ಆರಂಭಿಕ ಬ್ಯಾಟ್ಸ್ಮನ್ ಮಯಂಕ್ ಅಗರವಾಲ್ ಮತ್ತು ಹನುಮವಿಹಾರಿ ಅವರಲ್ಲಿ ಒಬ್ಬರನ್ನು ಬೆಂಚ್ನಲ್ಲಿ ಕೂರಿಸುವ ಸಾಧ್ಯತೆ ಇದೆ.</p>.<p>ಈ ಮೊದಲು ಟೆಸ್ಟ್ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿದ್ದ ರೋಹಿತ್, ಹೋದ ವರ್ಷವಷ್ಟೇ ಆರಂಭಿಕ ಬ್ಯಾಟ್ಸ್ಮನ್ ಆಗಿ ಬಡ್ತಿಪಡೆದಿದ್ದರು.</p>.<p>ಅಡಿಲೇಡ್ನಲ್ಲಿ ಹೀನಾಯ ಸೋಲು ಅನುಭವಿಸಿದ ನಂತರ ಪೃಥ್ವಿ ಶಾ ಅವರನ್ನು ಕೈಬಿಡಲಾಗಿತ್ತು. ಎರಡನೇ ಪಂದ್ಯದಲ್ಲಿ ಪದಾರ್ಪಣೆ ಮಾಡಿದ್ದ ಯುವ ಬ್ಯಾಟ್ಸ್ಮನ್ ಶುಭಮನ್ ಗಿಲ್ ಭರವಸೆದಾಯಕ ಆಟವಾಡಿದ್ದರು. ಆದ್ದರಿಂದ ಅವರು ಸಿಡ್ನಿ ಟೆಸ್ಟ್ನಲ್ಲಿ ಮತ್ತೊಂದು ಅವಕಾಶ ಪಡೆಯುವುದು ಖಚಿತ.</p>.<p>ಆದರೆ ಕಳೆದ ನಾಲ್ಕು ಇನಿಂಗ್ಸ್ಗಳಲ್ಲಿ ಮಯಂಕ್ ನಿರೀಕ್ಷೆಗೆ ತಕ್ಕಂತೆ ಆಡಿಲ್ಲ. ಆದ್ದರಿಂದ ಅವರಿಗೆ ವಿಶ್ರಾಂತಿ ಕೊಡುವ ಸಾಧ್ಯತೆ ದಟ್ಟವಾಗಿದೆ.</p>.<p>ಅವರ ಬದಲಿಗೆ ರೋಹಿತ್ ಕಣಕ್ಕಿಳಿಯಬಹುದು. ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಗಾಯಗೊಂಡಿದ್ದ ರೋಹಿತ್, ಎನ್ಸಿಎನಲ್ಲಿ ಚೇತರಿಸಿಕೊಂಡಿದ್ದರು. ಫಿಟ್ನೆಸ್ ಪರೀಕ್ಷೆಯ ನಂತರ ಆಸ್ಟ್ರೇಲಿಯಾಕ್ಕೆ ತೆರಳಿದ್ದರು.</p>.<p>ಸಿಡ್ನಿಯಲ್ಲಿ ಎರಡು ವಾರಗಳ ಕಡ್ಡಾಯ ಕ್ವಾರಂಟೈನ್ ಮುಗಿಸಿದ ನಂತರ ಮೆಲ್ಬರ್ನ್ನಲ್ಲಿರುವ ಭಾರತ ತಂಡವನ್ನು ಸೇರಿಕೊಂಡಿದ್ಧಾರೆ.</p>.<p>ರೋಹಿತ್ ಶರ್ಮಾ ಅವರನ್ನು ಏಕದಿನ ಮತ್ತು ಟ್ವೆಂಟಿ–20 ಸರಣಿಗಳು ಹಾಗೂ ಬಾರ್ಡರ್–ಗಾವಸ್ಕರ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಮೊದಲೆರಡು ಟೆಸ್ಟ್ಗಳಿಗೆ ಆಯ್ಕೆ ಮಾಡಿರಲಿಲ್ಲ.</p>.<p>ಸತತ ವೈಫಲ್ಯ ಅನುಭವಿಸುತ್ತಿರುವ ಹನುಮವಿಹಾರಿಗೂ ವಿಶ್ರಾಂತಿ ಕೊಟ್ಟು ಕನ್ನಡಿಗ ಕೆ.ಎಲ್. ರಾಹುಲ್ಗೆ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ನೀಡುವ ಸಾಧ್ಯತೆಯೂ ಇದೆ.</p>.<p>’ದೀರ್ಘ ಬಿಡುವಿನ ನಂತರ ರೋಹಿತ್ ತಂಡಕ್ಕೆ ಮರಳಿದ್ದಾರೆ. ಅವರು ಇನಿಂಗ್ಸ್ ಆರಂಭಿಸಲು ಶಕ್ತರಾಗಿರುವರೇ ಎಂಬುದನ್ನು ಮೊದಲು ನೋಡಬೇಕು. ಅವರಿಗೆ ಮಧ್ಯಮಕ್ರಮಾಂಕದಲ್ಲಿ ಬ್ಯಾಟಿಂಗ್ ಕೊಡುವ ಬಗ್ಗೆ ಯೋಚಿಸಹುದು‘ ಎಂದು ರಾಷ್ಟ್ರೀಯ ಆಯ್ಕೆ ಸಮಿತಿ ಮಾಜಿ ಮುಖ್ಯಸ್ಥ ಎಂ.ಎಎಸ್.ಕೆ. ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೆಲ್ಬರ್ನ್:</strong> ತಾರಾ ವರ್ಚಸ್ಸಿನ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಬುಧವಾರ ಭಾರತ ತಂಡವನ್ನು ಸೇರಿಕೊಂಡರು.</p>.<p>ಜನವರಿ 7ರಂದು ಆರಂಭವಾಗುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಅವರು ಹನ್ನೊಂದು ಆಟಗಾರರ ಬಳಗದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ. ಆದರೆ ಅವರಿಗಾಗಿ ಸ್ಥಾನ ತೆರವು ಮಾಡುವವರು ಯಾರು ಎಂಬ ಕುತೂಹಲ ಈಗ ಗರಿಗೆದರಿದೆ.</p>.<p>ಕಳೆದ ಎರಡೂ ಟೆಸ್ಟ್ಗಳಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿರುವ ಆರಂಭಿಕ ಬ್ಯಾಟ್ಸ್ಮನ್ ಮಯಂಕ್ ಅಗರವಾಲ್ ಮತ್ತು ಹನುಮವಿಹಾರಿ ಅವರಲ್ಲಿ ಒಬ್ಬರನ್ನು ಬೆಂಚ್ನಲ್ಲಿ ಕೂರಿಸುವ ಸಾಧ್ಯತೆ ಇದೆ.</p>.<p>ಈ ಮೊದಲು ಟೆಸ್ಟ್ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿದ್ದ ರೋಹಿತ್, ಹೋದ ವರ್ಷವಷ್ಟೇ ಆರಂಭಿಕ ಬ್ಯಾಟ್ಸ್ಮನ್ ಆಗಿ ಬಡ್ತಿಪಡೆದಿದ್ದರು.</p>.<p>ಅಡಿಲೇಡ್ನಲ್ಲಿ ಹೀನಾಯ ಸೋಲು ಅನುಭವಿಸಿದ ನಂತರ ಪೃಥ್ವಿ ಶಾ ಅವರನ್ನು ಕೈಬಿಡಲಾಗಿತ್ತು. ಎರಡನೇ ಪಂದ್ಯದಲ್ಲಿ ಪದಾರ್ಪಣೆ ಮಾಡಿದ್ದ ಯುವ ಬ್ಯಾಟ್ಸ್ಮನ್ ಶುಭಮನ್ ಗಿಲ್ ಭರವಸೆದಾಯಕ ಆಟವಾಡಿದ್ದರು. ಆದ್ದರಿಂದ ಅವರು ಸಿಡ್ನಿ ಟೆಸ್ಟ್ನಲ್ಲಿ ಮತ್ತೊಂದು ಅವಕಾಶ ಪಡೆಯುವುದು ಖಚಿತ.</p>.<p>ಆದರೆ ಕಳೆದ ನಾಲ್ಕು ಇನಿಂಗ್ಸ್ಗಳಲ್ಲಿ ಮಯಂಕ್ ನಿರೀಕ್ಷೆಗೆ ತಕ್ಕಂತೆ ಆಡಿಲ್ಲ. ಆದ್ದರಿಂದ ಅವರಿಗೆ ವಿಶ್ರಾಂತಿ ಕೊಡುವ ಸಾಧ್ಯತೆ ದಟ್ಟವಾಗಿದೆ.</p>.<p>ಅವರ ಬದಲಿಗೆ ರೋಹಿತ್ ಕಣಕ್ಕಿಳಿಯಬಹುದು. ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಗಾಯಗೊಂಡಿದ್ದ ರೋಹಿತ್, ಎನ್ಸಿಎನಲ್ಲಿ ಚೇತರಿಸಿಕೊಂಡಿದ್ದರು. ಫಿಟ್ನೆಸ್ ಪರೀಕ್ಷೆಯ ನಂತರ ಆಸ್ಟ್ರೇಲಿಯಾಕ್ಕೆ ತೆರಳಿದ್ದರು.</p>.<p>ಸಿಡ್ನಿಯಲ್ಲಿ ಎರಡು ವಾರಗಳ ಕಡ್ಡಾಯ ಕ್ವಾರಂಟೈನ್ ಮುಗಿಸಿದ ನಂತರ ಮೆಲ್ಬರ್ನ್ನಲ್ಲಿರುವ ಭಾರತ ತಂಡವನ್ನು ಸೇರಿಕೊಂಡಿದ್ಧಾರೆ.</p>.<p>ರೋಹಿತ್ ಶರ್ಮಾ ಅವರನ್ನು ಏಕದಿನ ಮತ್ತು ಟ್ವೆಂಟಿ–20 ಸರಣಿಗಳು ಹಾಗೂ ಬಾರ್ಡರ್–ಗಾವಸ್ಕರ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಮೊದಲೆರಡು ಟೆಸ್ಟ್ಗಳಿಗೆ ಆಯ್ಕೆ ಮಾಡಿರಲಿಲ್ಲ.</p>.<p>ಸತತ ವೈಫಲ್ಯ ಅನುಭವಿಸುತ್ತಿರುವ ಹನುಮವಿಹಾರಿಗೂ ವಿಶ್ರಾಂತಿ ಕೊಟ್ಟು ಕನ್ನಡಿಗ ಕೆ.ಎಲ್. ರಾಹುಲ್ಗೆ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ನೀಡುವ ಸಾಧ್ಯತೆಯೂ ಇದೆ.</p>.<p>’ದೀರ್ಘ ಬಿಡುವಿನ ನಂತರ ರೋಹಿತ್ ತಂಡಕ್ಕೆ ಮರಳಿದ್ದಾರೆ. ಅವರು ಇನಿಂಗ್ಸ್ ಆರಂಭಿಸಲು ಶಕ್ತರಾಗಿರುವರೇ ಎಂಬುದನ್ನು ಮೊದಲು ನೋಡಬೇಕು. ಅವರಿಗೆ ಮಧ್ಯಮಕ್ರಮಾಂಕದಲ್ಲಿ ಬ್ಯಾಟಿಂಗ್ ಕೊಡುವ ಬಗ್ಗೆ ಯೋಚಿಸಹುದು‘ ಎಂದು ರಾಷ್ಟ್ರೀಯ ಆಯ್ಕೆ ಸಮಿತಿ ಮಾಜಿ ಮುಖ್ಯಸ್ಥ ಎಂ.ಎಎಸ್.ಕೆ. ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>