ಬೆಂಗಳೂರು: ಗಾಯದ ಸಮಸ್ಯೆಗೆ ತುತ್ತಾಗಿರುವ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಚೇತರಿಸಿಕೊಳ್ಳುತ್ತಿದ್ದು, ಶೀಘ್ರವೇ ತಂಡಕ್ಕೆ ಮರಳಲಿದ್ದಾರೆ ಎಂದು ವರದಿಯಾಗಿದೆ.
ಡಿಸೆಂಬರ್ 22ರಿಂದಮೀರ್ಪುರ್ದಲ್ಲಿ ನಡೆಯಲಿರುವ ಬಾಂಗ್ಲಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನರೋಹಿತ್ ಶರ್ಮಾ ತಂಡಕ್ಕೆ ಮರಳುವಸಾಧ್ಯತೆ ಇದೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ.
ಡಿಸೆಂಬರ್ 7ರಂದು ನಡೆದಿದ್ದ ಬಾಂಗ್ಲಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಅವರ ಕೈಬೆರಳಿಗೆ ಚೆಂಡು ಬಡಿದು ಪೆಟ್ಟಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದೊಯ್ದ ಸಿಬ್ಬಂದಿ ಸ್ಕ್ಯಾನಿಂಗ್ ಮಾಡಿಸಿದ್ದರು.
ಬಳಿಕ ವಿಶ್ರಾಂತಿ ಕಾರಣದಿಂದಾಗಿ ಬಾಂಗ್ಲಾ ವಿರುದ್ಧ ಮೂರನೇ ಏಕದಿನ ಹಾಗೂ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಚಿಕಿತ್ಸೆ ಪಡೆಯಲು ಮುಂಬೈಗೆ ಮರಳಿದ್ದರು.
ಮೊದಲ ಟೆಸ್ಟ್: ಬಾಂಗ್ಲಾ ಗೆಲುವಿಗೆ 513 ರನ್ ಗುರಿ ಚತ್ತೋಗ್ರಾಮ್ನಲ್ಲಿ ನಡೆಯುತ್ತಿರುವ ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸಂಘಟನಾತ್ಮಕ ಪ್ರದರ್ಶನ ತೋರಿದ ಭಾರತ ತಂಡ ಬೃಹತ್ ಮೊತ್ತ ಪೇರಿಸಿದೆ.
ಟೆಸ್ಟ್ ಪರಿಣತ ಬ್ಯಾಟರ್ ಚೇತೇಶ್ವರ್ ಪೂಜಾರ ಹಾಗೂ ಯುವ ಬ್ಯಾಟರ್ ಶುಭಮನ್ ಗಿಲ್ ಶತಕ ಸಿಡಿಸಿ ಸಂಭ್ರಮಿಸಿದರು.
254 ರನ್ಗಳ ಬೃಹತ್ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತದ ಪರ ಕೆ.ಎಲ್.ರಾಹುಲ್ 23, ಶುಭಮನ್ ಗಿಲ್ 110, ಪೂಜಾರ ಔಟಾಗದೆ 102, ವಿರಾಟ್ ಕೊಹ್ಲಿ ಔಟಾಗದೆ 19 ರನ್ ಗಳಿಸಿದರು.
ಎರಡನೇ ಇನ್ನಿಂಗ್ಸ್ನಲ್ಲಿ ಭಾರತ 61.4 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 258 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ. ಇದರೊಂದಿಗೆ ಟೀಮ್ ಇಂಡಿಯಾ, ಬಾಂಗ್ಲಾ ಗೆಲುವಿಗೆ 513 ರನ್ ಗುರಿ ನೀಡಿದೆ.
ಸದ್ಯ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಬಾಂಗ್ಲಾ 12 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 42 ರನ್ ಗಳಿಸಿದೆ.