<p><strong>ಮುಂಬೈ</strong>: ಭಾರತದ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಮಂಗಳವಾರ ಮುಂಬೈ ರಣಜಿ ತಂಡದೊಂದಿಗೆ ನೆಟ್ಸ್ನಲ್ಲಿ ಅಭ್ಯಾಸ ಮಾಡಿದರು. </p>.<p>ಇದೇ 23ರಂದು ನಡೆಯಲಿರುವ ರಣಜಿ ಟ್ರೋಫಿ ಗುಂಪು ಹಂತದ ಪಂದ್ಯದಲ್ಲಿ ಮುಂಬೈ ತಂಡ ಆಡಲಿದೆ. ಎಂಸಿಎ–ಬಿಕೆಸಿ ಮೈದಾನದಲ್ಲಿ ನಡೆಯುವ ಪಂದ್ಯದಲ್ಲಿ ಮುಂಬೈ ತಂಡವು ಜಮ್ಮು–ಕಾಶ್ಮೀರ ತಂಡವನ್ನು ಎದುರಿಸಲಿದೆ. ರಣಜಿ ಟೂರ್ನಿಯ ಲೀಗ್ ಹಂತದಲ್ಲಿ ಇನ್ನೆರಡು ಪಂದ್ಯಗಳಷ್ಟೇ ಉಳಿದಿದ್ದು, ನಾಕೌಟ್ ಹಂತಕ್ಕೆ ತಲುಪಲು ಈ ಹಂತದ ಫಲಿತಾಂಶ ಮುಖ್ಯವಾಗಿದೆ. </p>.<p>ಆದರೆ ಆ ರಣಜಿ ಪಂದ್ಯದಲ್ಲಿ ರೋಹಿತ್ ಆಡುವ ಬಗ್ಗೆ ಇನ್ನೂ ಯಾವುದೆ ಖಚಿತ ಮಾಹಿತಿ ಲಭ್ಯವಾಗಿಲ್ಲ. </p>.<p>37 ವರ್ಷದ ರೋಹಿತ್ ಅವರು ಟೆಸ್ಟ್ ಕ್ರಿಕೆಟ್ನಲ್ಲಿ ಸತತವಾಗಿ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿದ್ದಾರೆ. ಈಚೆಗೆ ಆಸ್ಟ್ರೇಲಿಯಾ ಎದುರಿನ ಟೆಸ್ಟ್ ಸರಣಿಯಲ್ಲಿ ಅವರು ಮೂರು ಪಂದ್ಯಗಳಿಂದ 31 ರನ್ಗಳನ್ನು ಮಾತ್ರ ಗಳಿಸಿದ್ದಾರೆ. ಸರಣಿಯ ಕೊನೆಯ ಪಂದ್ಯದಲ್ಲಿ ಅವರು ತಮ್ಮ ಫಾರ್ಮ್ ಕೊರತೆಯಿಂದಾಗಿ ತಂಡದಿಂದ ಹೊರಗುಳಿಯಬೇಕಾಯಿತು. </p>.<p>ದೀರ್ಘ ಮಾದರಿಯ ಕ್ರಿಕೆಟ್ನಲ್ಲಿ ತಮ್ಮ ಲಯವನ್ನು ಮರಳಿ ಗಳಿಸಲು ರಣಜಿ ಪಂದ್ಯದಲ್ಲಿ ಆಡುವ ಸಾಧ್ಯತೆ ಇದೆ. ರೋಹಿತ್ ಅವರು 2015ರಲ್ಲಿ ರಣಜಿ ಪಂದ್ಯವನ್ನು ಉತ್ತರಪ್ರದೇಶ ವಿರುದ್ಧ ಆಡಿದ್ದರು. ನಂತರ ಇದುವರೆಗೆ ಆಡಿಲ್ಲ. </p>.<p>ಕಳೆದ ಭಾನುವಾರ ಆಸ್ಟ್ರೇಲಿಯಾ ಎದುರಿನ ಸರಣಿಯ ಸೋಲಿನ ಅವಲೋಕನದ ಸಭೆಯಲ್ಲಿ ಬಿಸಿಸಿಐ ನೂತನ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರೋಹಿತ್ ಕೂಡ ಹಾಜರಿದ್ದರು. </p>.<p><strong>ಕರ್ನಾಟಕದ ಎದುರು ಗಿಲ್ ಕಣಕ್ಕೆ </strong></p><p> ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಅವರು ಪಂಜಾಬ್ ರಣಜಿ ಟ್ರೋಫಿ ತಂಡವನ್ನು ಸೇರಿಕೊಂಡಿದ್ದಾರೆ. ಇದೇ 23ರಂದು ಬೆಂಗಳೂರಿನಲ್ಲಿ ನಡೆಯುವ ಕರ್ನಾಟಕ ಎದುರಿನ ಪಂದ್ಯದಲ್ಲಿ ಅವರು ಕಣಕ್ಕಿಳಿಯುವರು. </p><p>ಈಚೆಗೆ ನಡೆದ ಆಸ್ಟ್ರೇಲಿಯಾ ಎದುರಿನ ಸರಣಿಯಲ್ಲಿ ಅವರು ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. ರಾಷ್ಟ್ರೀಯ ತಂಡದಿಂದ ಬಿಡುವು ಸಿಕ್ಕಾಗ ದೇಶಿ ಟೂರ್ನಿಗಳಲ್ಲಿ ಆಟಗಾರರು ಆಡಬೇಕು ಎಂದು ಮುಖ್ಯ ಕೋಚ್ ಗೌತಮ್ ಗಂಭೀರ್ ಹೇಳಿದ್ದರು.</p><p>ರಣಜಿ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಇರುವ ವಾಸೀಂ ಜಾಫರ್ ಅವರು ಪಂಜಾಬ್ ತಂಡದ ಮುಖ್ಯ ಕೋಚ್ ಆಗಿದ್ದಾರೆ. ಇದರಿಂದಾಗಿ ಗಿಲ್ ಅವರಿಗೆ ಜಾಫರ್ ಅವರಿಂದ ಮಾರ್ಗದರ್ಶನ ಪಡೆಯುವ ಅವಕಾಶ ಸಿಗಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಭಾರತದ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಮಂಗಳವಾರ ಮುಂಬೈ ರಣಜಿ ತಂಡದೊಂದಿಗೆ ನೆಟ್ಸ್ನಲ್ಲಿ ಅಭ್ಯಾಸ ಮಾಡಿದರು. </p>.<p>ಇದೇ 23ರಂದು ನಡೆಯಲಿರುವ ರಣಜಿ ಟ್ರೋಫಿ ಗುಂಪು ಹಂತದ ಪಂದ್ಯದಲ್ಲಿ ಮುಂಬೈ ತಂಡ ಆಡಲಿದೆ. ಎಂಸಿಎ–ಬಿಕೆಸಿ ಮೈದಾನದಲ್ಲಿ ನಡೆಯುವ ಪಂದ್ಯದಲ್ಲಿ ಮುಂಬೈ ತಂಡವು ಜಮ್ಮು–ಕಾಶ್ಮೀರ ತಂಡವನ್ನು ಎದುರಿಸಲಿದೆ. ರಣಜಿ ಟೂರ್ನಿಯ ಲೀಗ್ ಹಂತದಲ್ಲಿ ಇನ್ನೆರಡು ಪಂದ್ಯಗಳಷ್ಟೇ ಉಳಿದಿದ್ದು, ನಾಕೌಟ್ ಹಂತಕ್ಕೆ ತಲುಪಲು ಈ ಹಂತದ ಫಲಿತಾಂಶ ಮುಖ್ಯವಾಗಿದೆ. </p>.<p>ಆದರೆ ಆ ರಣಜಿ ಪಂದ್ಯದಲ್ಲಿ ರೋಹಿತ್ ಆಡುವ ಬಗ್ಗೆ ಇನ್ನೂ ಯಾವುದೆ ಖಚಿತ ಮಾಹಿತಿ ಲಭ್ಯವಾಗಿಲ್ಲ. </p>.<p>37 ವರ್ಷದ ರೋಹಿತ್ ಅವರು ಟೆಸ್ಟ್ ಕ್ರಿಕೆಟ್ನಲ್ಲಿ ಸತತವಾಗಿ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿದ್ದಾರೆ. ಈಚೆಗೆ ಆಸ್ಟ್ರೇಲಿಯಾ ಎದುರಿನ ಟೆಸ್ಟ್ ಸರಣಿಯಲ್ಲಿ ಅವರು ಮೂರು ಪಂದ್ಯಗಳಿಂದ 31 ರನ್ಗಳನ್ನು ಮಾತ್ರ ಗಳಿಸಿದ್ದಾರೆ. ಸರಣಿಯ ಕೊನೆಯ ಪಂದ್ಯದಲ್ಲಿ ಅವರು ತಮ್ಮ ಫಾರ್ಮ್ ಕೊರತೆಯಿಂದಾಗಿ ತಂಡದಿಂದ ಹೊರಗುಳಿಯಬೇಕಾಯಿತು. </p>.<p>ದೀರ್ಘ ಮಾದರಿಯ ಕ್ರಿಕೆಟ್ನಲ್ಲಿ ತಮ್ಮ ಲಯವನ್ನು ಮರಳಿ ಗಳಿಸಲು ರಣಜಿ ಪಂದ್ಯದಲ್ಲಿ ಆಡುವ ಸಾಧ್ಯತೆ ಇದೆ. ರೋಹಿತ್ ಅವರು 2015ರಲ್ಲಿ ರಣಜಿ ಪಂದ್ಯವನ್ನು ಉತ್ತರಪ್ರದೇಶ ವಿರುದ್ಧ ಆಡಿದ್ದರು. ನಂತರ ಇದುವರೆಗೆ ಆಡಿಲ್ಲ. </p>.<p>ಕಳೆದ ಭಾನುವಾರ ಆಸ್ಟ್ರೇಲಿಯಾ ಎದುರಿನ ಸರಣಿಯ ಸೋಲಿನ ಅವಲೋಕನದ ಸಭೆಯಲ್ಲಿ ಬಿಸಿಸಿಐ ನೂತನ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರೋಹಿತ್ ಕೂಡ ಹಾಜರಿದ್ದರು. </p>.<p><strong>ಕರ್ನಾಟಕದ ಎದುರು ಗಿಲ್ ಕಣಕ್ಕೆ </strong></p><p> ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಅವರು ಪಂಜಾಬ್ ರಣಜಿ ಟ್ರೋಫಿ ತಂಡವನ್ನು ಸೇರಿಕೊಂಡಿದ್ದಾರೆ. ಇದೇ 23ರಂದು ಬೆಂಗಳೂರಿನಲ್ಲಿ ನಡೆಯುವ ಕರ್ನಾಟಕ ಎದುರಿನ ಪಂದ್ಯದಲ್ಲಿ ಅವರು ಕಣಕ್ಕಿಳಿಯುವರು. </p><p>ಈಚೆಗೆ ನಡೆದ ಆಸ್ಟ್ರೇಲಿಯಾ ಎದುರಿನ ಸರಣಿಯಲ್ಲಿ ಅವರು ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. ರಾಷ್ಟ್ರೀಯ ತಂಡದಿಂದ ಬಿಡುವು ಸಿಕ್ಕಾಗ ದೇಶಿ ಟೂರ್ನಿಗಳಲ್ಲಿ ಆಟಗಾರರು ಆಡಬೇಕು ಎಂದು ಮುಖ್ಯ ಕೋಚ್ ಗೌತಮ್ ಗಂಭೀರ್ ಹೇಳಿದ್ದರು.</p><p>ರಣಜಿ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಇರುವ ವಾಸೀಂ ಜಾಫರ್ ಅವರು ಪಂಜಾಬ್ ತಂಡದ ಮುಖ್ಯ ಕೋಚ್ ಆಗಿದ್ದಾರೆ. ಇದರಿಂದಾಗಿ ಗಿಲ್ ಅವರಿಗೆ ಜಾಫರ್ ಅವರಿಂದ ಮಾರ್ಗದರ್ಶನ ಪಡೆಯುವ ಅವಕಾಶ ಸಿಗಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>