ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಕ್ವಿಂಟನ್ ಡಿ ಕಾಕ್, ಪೊಲಾರ್ಡ್ ಮತ್ತು ಪಾಂಡ್ಯ ಸಹೋದರರು ತಂಡದ ಬ್ಯಾಟಿಂಗ್ಗೆ ಆಸರೆಯಾಗಿದ್ದಾರೆ. ಬೌಲಿಂಗ್ನಲ್ಲಿ ಜಸ್ಪ್ರೀತ್ ಬೂಮ್ರಾ, ಟ್ರೆಂಟ್ ಬೌಲ್ಟ್, ಪ್ಯಾಟಿನ್ಸನ್ ಮತ್ತು ರಾಹುಲ್ ಚಾಹರ್ ಮೇಲುಗೈ ಸಾಧಿಸುತ್ತಿದ್ದಾರೆ. ಆದರೆ ಕಳೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಎದುರು ಮುಂಬೈ ಸೋತಿತ್ತು. ಆದ್ದರಿಂದ ಗೆಲುವಿನ ಹಳಿಗೆ ಮರಳುವ ಮತ್ತು ಆರ್ಸಿಬಿ ಎದುರು ಮುಯ್ಯಿ ತೀರಿಸಿಕೊಳ್ಳುವತ್ತ ಮುಂಬೈ ಚಿತ್ತ ಇದೆ. ಈ ಪಂದ್ಯದಲ್ಲಿಯೂ ರೋಹಿತ್ ಕಣಕ್ಕಿಳಿಯುವುದು ಅನುಮಾನ.