ಗುವಾಹಟಿ: ಶ್ರೀಲಂಕಾ ಎದುರಿನ ಪಂದ್ಯದಲ್ಲಿ ‘ನಾನ್ಸ್ಟ್ರೈಕರ್ ರನ್ಔಟ್’ ಮನವಿಯೊಂದನ್ನು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಿಂದೆಗೆದುಕೊಂಡರು.
ಪಂದ್ಯದ ಕೊನೆಯ ಓವರ್ನ ನಾಲ್ಕನೇ ಎಸೆತದ ಸಂದರ್ಭದಲ್ಲಿ ಲಂಕಾ ತಂಡದ ನಾಯಕ ದಸುನ್ ಶನಕಾ ಅವರು ನಾನ್ಸ್ಟ್ರೈಕರ್ ಕ್ರೀಸ್ನಿಂದ ಹೊರಗೆ ಸಾಗಿದ್ದರು. ಆಗ ಬೌಲರ್ ಮೊಹಮ್ಮದ್ ಶಮಿ ಬೇಲ್ಸ್ ಎಗರಿಸಿದರು. ವಿಕೆಟ್ಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ರೋಹಿತ್, ಮನವಿಯನ್ನು ಮರಳಿ ಪಡೆದರು. ಮತ್ತೊಂದು ವಿವಾದವಾಗುವುದನ್ನು ತಡೆದರು. ಆಗಿನ್ನೂ ಶನಕಾ ಶತಕಕ್ಕೆ ಎರಡು ರನ್ಗಳ ಅಗತ್ಯವಿತ್ತು.
ಐದನೇ ಎಸೆತವನ್ನು ಎದುರಿಸಿದ ಶನಕಾ ಬೌಂಡರಿ ಗಳಿಸಿ ಶತಕ ಪೂರೈಸಿದರು. ಕೊನೆಯ ಎಸೆತದಲ್ಲಿ ಸಿಕ್ಸರ್ ಹೊಡೆದರು.