ನವದೆಹಲಿ (ಪಿಟಿಐ): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕನ್ನಡಿಗ ಆಟಗಾರರಾದ ದೇವದತ್ತ ಪಡಿಕ್ಕಲ್ ಮತ್ತು ವವನ್ ದೇಶಪಾಂಡೆ ಅವರನ್ನು ಉಳಿಸಿಕೊಳ್ಳಲಾಗಿದೆ.
ಮಧ್ಯಮವೇಗಿ ಉಮೇಶ್ ಯಾದವ್, ಕ್ರಿಸ್ ಮೊರಿಸ್ ಮತ್ತು ಆ್ಯರನ್ ಫಿಂಚ್ ಸೇರಿದಂತೆ 10 ಆಟಗಾರರನ್ನು ಬಿಡುಗಡೆ ಮಾಡಿದೆ.
ಕಿಂಗ್ಸ್ ಇಲೆವನ್ ಪಂಜಾಬ್ ತಂಡದಲ್ಲಿದ್ದ ಕರ್ನಾಟಕದ ಕರುಣ್ ನಾಯರ್, ಕೃಷ್ಣಪ್ಪ ಗೌತಮ್ ಮತ್ತು ಜೆ. ಸುಚಿತ್ ಅವರನ್ನು ಬಿಡುಗಡೆ ಮಾಡಲಾಗಿದೆ. ರಾಜಸ್ಥಾನ ರಾಯಲ್ಸ್ ತಂಡದ ನಾಯಕರಾಗಿದ್ದ ಸ್ಟೀವನ್ ಸ್ಮಿತ್ ಅವರನ್ನೂ ಕೈಬಿಡಲಾಗಿದೆ. ತಂಡಕ್ಕೆ ಕೇರಳದ ಆಟಗಾರ ಸಂಜು ಸ್ಯಾಮ್ಸನ್ ನಾಯಕರಾಗಿದ್ಧಾರೆ. ಚೆನ್ನೈ ತಂಡದಲ್ಲಿ ಸುರೇಶ್ ರೈನಾ ಮುಂದುವರಿದಿದ್ದಾರೆ. ಹರಭಜನ್ ಸಿಂಗ್ ಬಿಡುಗಡೆಗೊಂಡಿದ್ದಾರೆ.