ಮುಂಬೈ: ಸ್ಮೃತಿ ಮಂದಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು, ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಇಂದು ಯುಪಿ ವಾರಿಯರ್ಸ್ ವಿರುದ್ಧ ಕಣಕ್ಕಿಳಿದಿದೆ. ಟಾಸ್ ಗೆದ್ದಿರುವ ಆರ್ಸಿಬಿ, ಬ್ಯಾಟಿಂಗ್ ಆಯ್ದುಕೊಂಡಿದೆ.
ಇಲ್ಲಿನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ.
ಬೆಂಗಳೂರು ತಂಡ ಆಡಿರುವ ಮೊದಲ ಮೂರು ಪಂದ್ಯಗಳಲ್ಲಿಯೂ ಮುಗ್ಗಿರಿಸಿದೆ. ಹೀಗಾಗಿ, ನಾಕೌಟ್ ಹಂತಕ್ಕೇರಲು ಮುಂದಿನ ಎಲ್ಲ ಪಂದ್ಯಗಳಲ್ಲಿಯೂ ಜಯ ಗಳಿಸಬೇಕಾದ ಒತ್ತಡದಲ್ಲಿದೆ.
ಇತ್ತ ಆಸ್ಟ್ರೇಲಿಯಾದ ಅಲಿಸ್ಸಾ ಹೀಲಿ ನಾಯಕತ್ವದ ಯುಪಿ ತಂಡ ಎರಡು ಪಂದ್ಯಗಳಲ್ಲಿ ತಲಾ ಒಂದು ಗೆಲುವು ಮತ್ತು ಸೋಲು ಕಂಡಿದ್ದು, ಜಯದ ಓಟ ಮುಂದುವರಿಸುವ ತವಕದಲ್ಲಿದೆ.