ಟ್ರೇಡ್ ಟ್ರಾನ್ಸ್ಫರ್ ವಿಂಡೋದಲ್ಲಿ ಗೌತಮ್ ಅವರು ಕಿಂಗ್ಸ್ ಇಲೆವನ್ ಪಂಜಾಬ್ ತಂಡಕ್ಕ ವಲಸೆ ಹೋಗಿದ್ದಾರೆ. ಇದರಿಂದಾಗಿ ಪಂಜಾಬ್ ತಂಡದಲ್ಲಿ ಕನ್ನಡಿಗರ ಸಂಖ್ಯೆ ಹೆಚ್ಚಿದೆ. ಕೆ.ಎಲ್. ರಾಹುಲ್, ಮಯಂಕ್ ಅಗರವಾಲ್ ಮತ್ತು ಕರುಣ್ ನಾಯರ್ ಈಗಾಗಲೇ ಪಂಜಾಬ್ ತಂಡದಲ್ಲಿದ್ದಾರೆ. ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಅವರು ಈ ವರ್ಷದಿಂದ ತಂಡದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ಧಾರೆ.