ನವದೆಹಲಿ: ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಆಮ್ಲಜನಕ ಪೂರೈಕೆ ಸಲಕರಣೆಗಳ ಖರೀದಿಗಾಗಿ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ಕೋವಿಡ್ ಎರಡನೇ ಅಲೆಯ ಅಬ್ಬರದಿಂದಾಗಿ ದೇಶದ ಹಲವು ನಗರಗಳಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆಯುಂಟಾಗಿದೆ. ಅದರಲ್ಲೂ ದೇಶದ ರಾಜಧಾನಿ ದೆಹಲಿಯಲ್ಲಿ ಸಮಸ್ಯೆ ಆಮ್ಲಜನಕದ ಕೊರತೆ ಸಮಸ್ಯೆಯು ಉಲ್ಬಣಿಸಿದೆ.
ಅದರಿಂದಾಗಿ ದೆಹಲಿಯ ಕೆಲವು ಯುವ ಉದ್ಯಮಿಗಳು ಸೇರಿ ’ಮಿಷನ್ ಆಕ್ಸಿಜನ್‘ ಅಭಿಯಾನ ಆರಂಭಿಸಿದ್ದಾರೆ.
‘ಈ ಅಭಿಯಾನಕ್ಕೆ ಸಚಿನ್ ತೆಂಡೂಲ್ಕರ್ ಅವರು ಒಂದು ಕೋಟಿ ರೂಪಾಯಿ ನೀಡಿದ್ದಾರೆ‘ ಎಂದು ಸಂಚಾಲಕರು ತಿಳಿಸಿದ್ದಾರೆ.
ಈಚೆಗೆ ಸಚಿನ್ ಕೂಡ ಕೋವಿಡ್ ಸೋಂಕಿನಿಂದಾಗಿ ಅಸ್ಪತ್ರೆಗೆ ದಾಖಲಾಗಿದ್ದರು. ನಂತರ ಗುಣಮುಖರಾಗಿ ಮನೆಗೆ ಮರಳಿದ್ದರು.