ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಲಾಕ್ಡೌನ್ ಕರೆಯು ಲಕ್ಷಾಂತರ ಜೀವಗಳನ್ನು ಉಳಿಸಲು ನೆರವಾಗಲಿದೆ ಎಂದು ಭಾರತ ಕ್ರಿಕೆಟ್ನ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.
ಜನರು ಮನೆಯಲ್ಲಿಯೇ ಉಳಿದುಕೊಳ್ಳಬೇಕು ಎಂದು ಮನವಿ ಮಾಡಿರುವ ಸಚಿನ್, ‘ಕೆಲವು ಸರಳ ಕೆಲಸಗಳನ್ನು ಮಾಡಲು ಕಷ್ಟವಾಗುತ್ತದೆ. ಯಾಕೆಂದರೆ ಅದಕ್ಕೆ ಶಿಸ್ತು ಮತ್ತು ದೃಢ ನಿರ್ಧಾರ ಬೇಕು’
‘ಮಾನ್ಯ ಪ್ರಧಾನಿ ಮೋದಿ ಅವರು ನಮ್ಮನ್ನು 21 ದಿನಗಳವರೆಗೆ ಮನೆಯಲ್ಲೇ ಇರುವಂತೆ ಕೇಳಿದ್ದಾರೆ. ಈ ಸರಳ ಕಾರ್ಯವು ಲಕ್ಷಾಂತರ ಜೀವಗಳನ್ನು ಉಳಿಸಲಿದೆ. ಕೋವಿಡ್–19 ವಿರುದ್ಧದ ಯುದ್ಧಕ್ಕಾಗಿ ಎಲ್ಲರೂ ಒಂದಾಗೋಣ’ ಎಂದು ಕರೆ ನೀಡಿದ್ದಾರೆ.
ಇದಕ್ಕೂ ಮೊದಲು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೇರಿದಂತೆ ಅನೇಕರು ಮೋದಿ ನಿರ್ಧಾರವನ್ನು ಬೆಂಬಲಿಸಿದ್ದರು.
Simple things are often the hardest to do, because they require consistent discipline & determination.