<p><strong>ನವದೆಹಲಿ</strong>: ಇಲ್ಲಿ ಮುಕ್ತಾಯಗೊಂಡ ಐಪಿಎಲ್ನ 48ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೈನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವು ಸಾಧಿಸಿದೆ. ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದ ಸಂಜು ಸ್ಯಾಮ್ಸನ್ ಮಾತನಾಡಿ, ‘ವೈಯಕ್ತಿಕ ಮೈಲುಗಲ್ಲಿಗಿಂತ ತಂಡದ ಗೆಲುವು ಮುಖ್ಯ’ ಎಂದಿದ್ದಾರೆ. </p><p>ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ 20 ಓವರ್ಗಳಲ್ಲಿ 155 ರನ್ ಗಳಿಸಿತ್ತು. ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸುಲಭ ಜಯ ಸಾಧಿಸಿತು. ಆರಂಭಿಕ ಆಟಗಾರ ಸ್ಯಾಮ್ಸನ್ 52 ಎಸೆತಗಳಲ್ಲಿ 7 ಬೌಂಡರಿ ಸಹಿತ ಅಜೇಯ 87 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. </p><p>ಗೆಲುವಿನ ಬಳಿಕ ಮಾತನಾಡಿದ ಸ್ಯಾಮ್ಸನ್ ‘ ನಾನು ಯಾವಾಗಲೂ ಶಾಂತವಾಗಿಯೇ ಇರುತ್ತೇನೆ. ಜನರು ಇತ್ತೀಚೆಗೆ ನನ್ನನ್ನು ಹೆಚ್ಚು ಗಮನಿಸುತ್ತಿದ್ದಾರೆ. ಹಾಗಾಗಿ ಸಂಜು ತುಂಬಾ ಶಾಂತ ವ್ಯಕ್ತಿ ಎಂದು ಅವರು ಹೇಳುತ್ತಾರೆ’ ಎಂದು ಹೇಳಿದ್ದಾರೆ.</p><p>ಶತಕದ ಕುರಿತು ಮಾತನಾಡಿರುವ ಸಂಜು ‘ ಈ ಪಂದ್ಯದಲ್ಲಿ ನನಗೆ ಶತಕವನ್ನು ದಾಖಲಿಸಲು ಅವಕಾಶವಿತ್ತು. ಆದರೆ ಸ್ವಾರ್ಥಿಯಾಗಬೇಕಿತ್ತು. ನನಗೆ ಶತಕಕ್ಕಿಂತ ತಂಡದ ಗೆಲುವು ಮುಖ್ಯವಾಗಿತ್ತು. ನಾನು ನಿಜವಾಗಿಯೂ ಈ ಪಂದ್ಯವನ್ನು ಆನಂದಿಸಿದ್ದೇನೆ. ಮಾತ್ರವಲ್ಲದೆ ಕೊನೆಯವರೆಗೂ ಇದ್ದು ಆಟ ಮುಗಿಸಿರುವುದು ತೃಪ್ತಿ ನೀಡುತ್ತದೆ’ ಎಂದಿದ್ದಾರೆ.</p><p>ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈ ಪಂದ್ಯವನ್ನು ಗೆಲ್ಲುವ ಮೂಲಕ ಪಾಯಿಂಟ್ಸ್ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದೆ. ಮಾತ್ರವಲ್ಲದೆ ಪ್ಲೇ–ಆಪ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಇಲ್ಲಿ ಮುಕ್ತಾಯಗೊಂಡ ಐಪಿಎಲ್ನ 48ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೈನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವು ಸಾಧಿಸಿದೆ. ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದ ಸಂಜು ಸ್ಯಾಮ್ಸನ್ ಮಾತನಾಡಿ, ‘ವೈಯಕ್ತಿಕ ಮೈಲುಗಲ್ಲಿಗಿಂತ ತಂಡದ ಗೆಲುವು ಮುಖ್ಯ’ ಎಂದಿದ್ದಾರೆ. </p><p>ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ 20 ಓವರ್ಗಳಲ್ಲಿ 155 ರನ್ ಗಳಿಸಿತ್ತು. ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸುಲಭ ಜಯ ಸಾಧಿಸಿತು. ಆರಂಭಿಕ ಆಟಗಾರ ಸ್ಯಾಮ್ಸನ್ 52 ಎಸೆತಗಳಲ್ಲಿ 7 ಬೌಂಡರಿ ಸಹಿತ ಅಜೇಯ 87 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. </p><p>ಗೆಲುವಿನ ಬಳಿಕ ಮಾತನಾಡಿದ ಸ್ಯಾಮ್ಸನ್ ‘ ನಾನು ಯಾವಾಗಲೂ ಶಾಂತವಾಗಿಯೇ ಇರುತ್ತೇನೆ. ಜನರು ಇತ್ತೀಚೆಗೆ ನನ್ನನ್ನು ಹೆಚ್ಚು ಗಮನಿಸುತ್ತಿದ್ದಾರೆ. ಹಾಗಾಗಿ ಸಂಜು ತುಂಬಾ ಶಾಂತ ವ್ಯಕ್ತಿ ಎಂದು ಅವರು ಹೇಳುತ್ತಾರೆ’ ಎಂದು ಹೇಳಿದ್ದಾರೆ.</p><p>ಶತಕದ ಕುರಿತು ಮಾತನಾಡಿರುವ ಸಂಜು ‘ ಈ ಪಂದ್ಯದಲ್ಲಿ ನನಗೆ ಶತಕವನ್ನು ದಾಖಲಿಸಲು ಅವಕಾಶವಿತ್ತು. ಆದರೆ ಸ್ವಾರ್ಥಿಯಾಗಬೇಕಿತ್ತು. ನನಗೆ ಶತಕಕ್ಕಿಂತ ತಂಡದ ಗೆಲುವು ಮುಖ್ಯವಾಗಿತ್ತು. ನಾನು ನಿಜವಾಗಿಯೂ ಈ ಪಂದ್ಯವನ್ನು ಆನಂದಿಸಿದ್ದೇನೆ. ಮಾತ್ರವಲ್ಲದೆ ಕೊನೆಯವರೆಗೂ ಇದ್ದು ಆಟ ಮುಗಿಸಿರುವುದು ತೃಪ್ತಿ ನೀಡುತ್ತದೆ’ ಎಂದಿದ್ದಾರೆ.</p><p>ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈ ಪಂದ್ಯವನ್ನು ಗೆಲ್ಲುವ ಮೂಲಕ ಪಾಯಿಂಟ್ಸ್ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದೆ. ಮಾತ್ರವಲ್ಲದೆ ಪ್ಲೇ–ಆಪ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>